TOP STORIES:

ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ – ಕಾರ್ಕಳದ ಬ್ರಹ್ಮಋಪಿ ಉಮಾಮಹೇಶ್ವರ ಸ್ವಾಮೀಜಿಯವರ 3 ವಿದ್ಯಾರ್ಥಿಗಳಿಗೆ ಪದಕ


ನೆಹರು ಒಳಕ್ರೀಡಾಂಗಣದಲ್ಲಿ .5 ಮತ್ತು 6ರಂದು ಎರಡು ದಿನಗಳ ಕಾಲ ಅಂತರಾಷ್ಟ್ರೀಯ 4ನೇಯ ಮಟ್ಟದ ಓಪನ್ ಕರಾಟೆಪಂದ್ಯಾವಳಿ ಆಯೋಜಿಸಲಾಗಿದ್ದು, ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆ ಮತ್ತು ಶಿವಮೊಗ್ಗ ನಗರ ಕರಾಟೆ ಸಂಸ್ಥೆ ಜಂಟಿಯಾಗಿ ಸ್ಪರ್ಧೆಯನ್ನು ಆಯೋಜನೆ ಮಾಡಿದ್ದವು. ಪಂಜಾಬ್, ತಮಿಳುನಾಡು, ತೆಲಂಗಾಣ, ಗೋವಾ, ಮಹಾರಾಷ್ಟ್ರ ವಿವಿಧ ರಾಜ್ಯಗಳಿಂದ, ಶ್ರೀಲಂಕಾ ಮತ್ತು ನೇಪಾಳ ವಿದೇಶದಿಂದ, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಮಂಡ್ಯ,ಹಾಸನ, ತುಮಕೂರು, ಬೆಂಗಳೂರು, ಚಿಕ್ಕಮಗಳೂರು, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಯಿಂದ ಒಟ್ಟು 1200ಕ್ಕೂ ಹೆಚ್ಚು ಕರಾಟೆ ಪಟುಗಳುಭಾಗವಹಿಸಿದ್ದರು.

ಸ್ಪರ್ಧೆಯಲ್ಲಿ ಜೆ.ಬಿ.ಪಿ.ಆರ್‌ ಎಸ್‌ಎಸ್‌ ಇಂಡಿಯನ್‌ ಕೊಯ್‌ ಕುಶಿನ್‌ ಕಾಯ್‌ ಕರಾಟೆ ಡೂ ಅಸೋಸಿಯೇಶನ್‌, ಕಲ್ಯಾಕಾರ್ಕಳದ ಬ್ರಹ್ಮಋಪಿ ಉಮಾಮಹೇಶ್ವರ ಸ್ವಾಮೀಜಿಯವರ ಮೂವರು ವಿದ್ಯಾರ್ಥಿಗಳು 2 ಚಿನ್ನ ಮತ್ತು 2ಬೆಳ್ಳಿ ಪದಕಗಳನ್ನುತನ್ನದಾಗಿಸಿಕೊಂಡಿದ್ದಾರೆ. ಕಲ್ಯಾ ಕಾರ್ಕಳದ ಬ್ರಹ್ಮಋಪಿ ಉಮಾಮಹೇಶ್ವರ ಸ್ವಾಮೀಜಿಯವರು ವಿದ್ಯಾರ್ಥಿಗಳಿಗೆ ಉಚಿತವಾಗಿಕರಾಟೆಯನ್ನು ತರಬೇತಿಯನ್ನು ನೀಡುತ್ತಿದ್ದಾರೆ. ಸೋಟೋಕನ್‌ ಕರಾಟೆ ಮತ್ತು ಜಪಾನ್‌ ಸ್ಟೈಲ್‌ 8ಕರಾಟೆಯನ್ನುಹೇಳಿಕೊಡಲಾಗುತ್ತದೆ. ಪೂನಾ ಮಹಾರಾಷ್ಟದಲ್ಲಿ ಕೂಡ ಉಚಿತ ಕರಾಟೆಯನ್ನು ಹೇಳಿಕೊಡಲಾಗುತ್ತದೆ. ಅಲ್ಲಿ ಸುಮಾರು 10 ಮಂದಿಕರಾಟೆ ತರಬೇತಿ ಪಡೆದು ಬ್ಲಾಕ್‌ ಬೆಲ್ಟ್‌ ಪಡೆದಿದ್ದಾರೆ.

ಕರಾಟೆ ಸ್ಪರ್ಧೆಯಲ್ಲಿ ಕಾರ್ಕಳ ಭುವನೇಂದ್ರ ಕಾಲೇಜಿನ ಪ್ರಥಮ ಬಿ.ಸಿ., ವಿದ್ಯಾರ್ಥಿನಿಯರಾದ ನಿರೀಕ್ಷಾ ಕಟಾದಲ್ಲಿ ಪ್ರಥಮಸ್ಥಾನವನ್ನು, ಕುಮಿತೆ ಫೈಟ್‌ನಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಇನ್ನು ನಿಟ್ಟೆ ವಿದ್ಯಾಸಂಸ್ಥೆಯ ಪ್ರಥಮ ವರ್ಷದ ಡಿಪ್ಲೋಮಾಕಂಪ್ಯೂಟರ್‌ ಸೈನ್ಸ್‌ ವಿದ್ಯಾರ್ಥಿ ಹೃತಿಕ್‌ ಅಮೀನ್‌ ಕಟಾದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ನಿಟ್ಟೆ ವಿದ್ಯಾಸಂಸ್ಥೆಯ ಡಾ. ಎನ್‌ಎಸ್‌ಎಎಂ ಪಿಯು ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ರಾಹುಲ್‌ ಕೆ.ಕಟಾದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »