TOP STORIES:

FOLLOW US

ಅಕ್ಕರೆಯ ಮಾತುಗಳು, ಸಕ್ಕರೆಯ ಮನಸುಳ್ಳ ಮಿಂಚುಳ್ಳಿ ನಟಿ ನವ್ಯಾ ಪೂಜಾರಿ


ಜೀವನವೆ ನಾಟಕ ರಂಗ. ನಾವೆಲ್ಲಾ ಸೃಷ್ಟಿಯ ಸೂತ್ರದ ಬೊಂಬೆಗಳು. ಸುಖ ದುಃಖಗಳ ಪರೀಕ್ಷೆಯ ನಡುವೆ ನಮ್ಮೆಲ್ಲರ ಮುಖದಲ್ಲಿ ಮಂದಹಾಸವ ಬರಿಸಲು ನಮ್ಮೆಲ್ಲರನ್ನು ಮನೊರಂಜಿಸಲು ತೆರೆಯ‌ ಮೇಲೆ ಬಣ್ಣ ಹಚ್ಚಿ ನಾಟಕ, ಸಿನಿಮಾ ರಂಗದಲ್ಲಿ ಜನರ ಮನಸೆಳೆವರು ರಂಗದ ಕಲಾವಿದರು. ಅಂತಹ ಸಿನಿಮಾ ರಂಗದಲ್ಲಿ ನಮ್ಮ ಬಿರುವ ಕುಲಕೆ ಹೆಮ್ಮೆಯ ಗುರುತಾಗಿ ಸದ್ದಿಲ್ಲದೆ ಮಿಂಚುತ್ತಿರುವ ನಗುಮುಖದ ಚೆಲುವೆ ನವ್ಯ ಪೂಜಾರಿ. ಮುಖದಲ್ಲಿ ಚೈತನ್ಯದ ಚಿಲುಮೆ, ಭೂಲೋಕದ ಅಪ್ಸರೆ, ನಕ್ಕರೆ ಮಲ್ಲಿಗೆ ಅರಳಿದಂತೆ, ಅಕ್ಕರೆಯ ಮಾತುಗಳು, ಸಕ್ಕರೆಯ ಮನಸುಳ್ಳ ಮಿಂಚುಳ್ಳಿ ನವ್ಯಾ ಪೂಜಾರಿ.

ಯಾದವ ಪೂಜಾರಿ ಹಾಗೂ ಸುಮಿತರವರ ಇಬ್ಬರು ಮಕ್ಕಳಲ್ಲಿ ಮೊದಲ ಮಗಳು ನವ್ಯಾ ಹಾಗೂ ಇವರ ತಂಗಿಯ ಹೆಸರು ಕಾವ್ಯಾ.ಈ ಸುಂದರ ಸಂಸಾರ ಪ್ರಸ್ತುತ ಸುರತ್ಕಲ್ ನಲ್ಲಿ ವಾಸವಾಗಿದ್ದಾರೆ. N.I.TK ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ವಿಧ್ಯಾಭ್ಯಾಸ ಹಾಗೂ ನಿಟ್ಟೆ ಕರ್ನಾಟಕ ಕಾಲೇಜ್ ನಲ್ಲಿ Computer Science ವಿಭಾಗದಲ್ಲಿ ಕಲಿತು ಮೊದಲಿಗೆ ಒಂದು ಕಚೇರಿಯಲ್ಲಿ ವೃತ್ತಯನ್ನು ಮಾಡುತ್ತಿದ್ದ ಅನುಭವ ಇವರದ್ದು. ತದನಂತರ ಉಮಿಲ್ ಚಲನಚಿತ್ರದ ಆಡಿಷನ್ ನಲ್ಲಿ ಆಯ್ಕೆಯಾಗಿ ಸಿನೆಮಾ ರಂಗಕ್ಕೆ ಕಾಲಿಟ್ಟರು.

ಸಿನಿಮಾ ಕ್ಷೆತ್ರವು ಇವರಿಗೆ ಬಯಸದೆ ಬಂದ ಭಾಗ್ಯವಾಯಿತು. ಆ ಕಲೆಯ ಕಳೆ ಇವರ ಮೊಗದಲ್ಲಿ ಹೊಳೆಯುತ್ತಿತ್ತು. ಅದೇ ಕಾರಣ ಇವರಿಗೆ ಮೊದಲು ತುಳು ಸಿನೆಮಾ ಉಮಿಲ್ ಚಿತ್ರದಲ್ಲಿ ನಟಿಸಲು ಅವಕಾಶ ದೊರಕಿತು. ಸಣ್ಣ ವಯಸ್ಸಿನಲ್ಲೇ ಸಿನೆಮಾ ರಂಗದ ಪುಟ್ಟ ಕನಸು ಬೆಳೆಸಿದ್ದರೂ ಕೂಡ ವಿದ್ಯಾಭ್ಯಾಸಕ್ಕೋಸ್ಕರ ಆ ಕನಸನ್ನೇ ಮರೆತ ಇವರು ಮುಂದೆ ಜೀವನದಲ್ಲಿ ತಾನೊಬ್ಬಳು ಸಿನಮಾ ನಟಿ ಆಗುವೆ ಅಂತಹ ಅವಕಾಶ ಸಿಗಬಹುದು ಎಂದು ಅಂದುಕೊಂಡಿರಲಿಲ್ಲ. ಕಾಲದ ಮಹಿಮೆ ಯಾರು ಅರಿಯರು ಸಾಮರ್ಥ್ಯವಿದ್ದರೆ ಯಾವುದೇ ಕ್ಷೇತ್ರದಲ್ಲಿ ಅನುಭವ ರಹಿತ ಮಿಂಚಬಹುದು. ಹಾಗೇ ಇವರ ಕಥೆ ತನಗೆ ಬಯಸದೆ ಬಂದ ಅವಕಾಶವಾದರೂ ಮೊದಲ ಸಿನೆಮಾದಲ್ಲೇ ಜನರ ಮನಮುಟ್ಟಿ ಒಬ್ಬ ಅದ್ಭುತ ಕಲಾವಿದೆಯಾಗಿ ಮುಂದೆ ಈ ಕ್ಷೇತ್ರದಲ್ಲಿ ನಿರ್ದಿಷ್ಟವಾದ ಗುರಿಯೊಂದನ್ನು ಇಟ್ಟುಕೊಂಡು ನವನವೀನತೆಯಿಂದ ಭವಿಷ್ಯದ ಬಾಗಿಲ ತರೆದರು‌. ಸಿನೆಮಾ ಕ್ಷೇತ್ರಕ್ಕೆ ಕಾಲಿಡುವ ಮೊದಲು ಕಲಿಕೆಯ ಸಂದರ್ಭದಲ್ಲಿ ಇವರು ನೃತ್ಯ ಹಾಗೂ ಕ್ರೀಡಾ ಚಟುವಟಿಕೆಯಲ್ಲಿ ಅಪಾರ ಒಲವು ಹೊಂದಿ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿದ ಉತ್ಸಾಹಿ ವಿಧ್ಯಾರ್ಥಿಯಾಗಿದ್ದರು.

ಉಮಿಲ್ ಇವರ ಮೊದಲ ತುಳು ಚಲನಚಿತ್ರವಾಗಿದ್ದು.ರಂಜಿತ್ ಬಜ್ಪೆರವರ ನಿರ್ದೇಶನದಲ್ಲಿ ಡಿಸೆಂಬರ್ ೨೦೧೮ ರಂದು ಬಿಡುಗಡೆಯಾಗಿದ್ದು. ಹೊಸ ಪರಿಚಯದ ಹೆಜ್ಜೆಯ ಗುರುತು ಸದ್ದಿಲ್ಲದೆ ಸಿನೆಮಾ ರಂಗದಲ್ಲಿ ಸುದ್ಧಿ ಮಾಡ ತೊಡಗಿತು.

ತದನಂತರ ಇವರು ತ್ರಿಬಲ್ ತಲಾಕ್ ಎಂಬ ಆರ್ಟ್ ಮೂವಿಯಲ್ಲಿ ನಟಿಸಿದರು. ಇದು ಇವರ ಮೊದಲ ಆರ್ಟ್ ಮೂವಿಯಾಗಿದೆ. ಈ ಚಲನಚಿತ್ರವು ಹೊಸ ತಂಡದ ಹೊಸ ಪ್ರಯತ್ನದಲ್ಲಿ ಲಂಡನ್ ನಲ್ಲಿ ಬಿಡುಗಡೆಯಾಗಿದೆ. ಚಲನಚಿತ್ರವು ವಿಭಿನ್ನವಾಗಿದ್ದು ಬ್ಯಾರಿ ಸಂಸ್ಕೃತಿಯ ಕುರಿತಾಗಿತ್ತು. ಇದರಲ್ಲಿ ನವ್ಯಾರವರು ಒಬ್ಬ ಮುಸ್ಲಿಂ ಮಹಿಳೆಯಾಗಿ ಪಾತ್ರ ನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿರುವರು. ದ್ವಿರುಕ್ತಿ ಎಂಬ ಕನ್ನಡ ಚಲನಚಿತ್ರದಲ್ಲಿ ಪಾತ್ರವಹಿಸಿದ್ದು ಇದುವರೆಗಿನ ಇವರ ಮೊದಲ ಕನ್ನಡ ಚಲನಚಿತ್ರವಾಗಿದೆ.

ಸುಂದರ ಕನಸಿನೊಂದಿಗೆ ಇತ್ತೀಚಿಗೆ ತೆರೆಕಂಡ ವಿಶೇಷ ಚಲನಚಿತ್ರ ಕನಸು ಮಾರಾಟಕ್ಕಿದೆ ಎಂಬ ಸಿನೆಮಾದಲ್ಲಿಯೂ ಇವರು ಅಭಿನಯಿಸಿರು. ಚಿತ್ತದಲ್ಲಿರುವ ಉದಯೋನ್ಮುಖ ಕಲಾವಿದರ ನಡುವೆ ತಾನು ಒಬ್ಬ ಯುವ ನಟಿಯಾಗಿ ಪಾತ್ರವಹಿಸಿರುವರು.

ಸಿನೆಮಾ ರಂಗದಲ್ಲಿ ಮುಂದುವರಿಯಲು ಇವರಿಗೆ ಇವರ ಮನೆಯವರ ಅಪಾರ ಪ್ರೋತ್ಸಾಹವಿದ್ದು‌. ಇದೇ ಇವರಿಗೆ ಮುನ್ನಡೆಯಲು ದೀಕ್ಷೆ ಎನ್ನುತ್ತಾರೆ ನವ್ಯಾ ಪೂಜಾರಿಯವರು.

ಎರಡೆಕ್ರೆ, ಇಂಗ್ಲಿಷ್, ಬೋಜರಾಜ್ ಎಂ.ಬಿ.ಬಿ.ಎಸ್, ಗಬ್ಬರ್ ಸಿಂಗ್, ತುಳುನಾಡ ಮಡಿಲು, ಬಿಂದಾಸ್, ಗೂಗ್ಲಿ ಮೊದಲಾದ ಸಿನೆಮಾಗಳು ಬಿಡುಗಡೆಯಾಗಲಿದ್ದು ಈ ಉದಯೋನ್ಮುಖ ನಟಿಗೆ ಪ್ರೋತ್ಸಾಹದ ಜೊತೆಗೆ ಮತ್ತಷ್ಟು ಅವಕಾಶಗಳು ದೊರಕಲಿ. ಮುಖ್ಯವಾಗಿ ತುಳು ರಂಗದಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುವ ಇವರು ಆದಷ್ಟು ತುಳು ಸಿನೆಮಾಗಳಲ್ಲಿ ನಟಿಸಲು ಬಯಸುತ್ತಾರೆ. ಹುಟ್ಟಿದ ಮಣ್ಣಿನ ಮೇಲಿನ ಅಭಿಮಾನವೇ ಇವರನ್ನು ಎತ್ತರಕ್ಕೆ ಬೆಳೆಸಲು ಕಾರಣವಾಗಬಹುದು. ಹಾಗೆಯೇ ತುಳು, ಕನ್ನಡ ಇತರ ಭಾಷಾ ರಂಗದಲ್ಲೂ ಅವಕಾಶಗಳು ನಿಮ್ಮ ಮುಡಿಗೇರಲಿ. ನಟನೆಯ ಹಾದಿಯಲ್ಲಿ ಯಶಸ್ವಿ ನಟಿಯಾಗಿ ಮಿಂಚುವ ತೌಳವ ಸಿರಿಗೆ ಸವಿನಯದ ಶುಭಾಶಯಗಳು.

✍️ ತೃಪ್ತಿ.ಜಿ.ಕುಂಪಲ


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »