TOP STORIES:

ಅಕ್ಕರೆಯ ಮಾತುಗಳು, ಸಕ್ಕರೆಯ ಮನಸುಳ್ಳ ಮಿಂಚುಳ್ಳಿ ನಟಿ ನವ್ಯಾ ಪೂಜಾರಿ


ಜೀವನವೆ ನಾಟಕ ರಂಗ. ನಾವೆಲ್ಲಾ ಸೃಷ್ಟಿಯ ಸೂತ್ರದ ಬೊಂಬೆಗಳು. ಸುಖ ದುಃಖಗಳ ಪರೀಕ್ಷೆಯ ನಡುವೆ ನಮ್ಮೆಲ್ಲರ ಮುಖದಲ್ಲಿ ಮಂದಹಾಸವ ಬರಿಸಲು ನಮ್ಮೆಲ್ಲರನ್ನು ಮನೊರಂಜಿಸಲು ತೆರೆಯ‌ ಮೇಲೆ ಬಣ್ಣ ಹಚ್ಚಿ ನಾಟಕ, ಸಿನಿಮಾ ರಂಗದಲ್ಲಿ ಜನರ ಮನಸೆಳೆವರು ರಂಗದ ಕಲಾವಿದರು. ಅಂತಹ ಸಿನಿಮಾ ರಂಗದಲ್ಲಿ ನಮ್ಮ ಬಿರುವ ಕುಲಕೆ ಹೆಮ್ಮೆಯ ಗುರುತಾಗಿ ಸದ್ದಿಲ್ಲದೆ ಮಿಂಚುತ್ತಿರುವ ನಗುಮುಖದ ಚೆಲುವೆ ನವ್ಯ ಪೂಜಾರಿ. ಮುಖದಲ್ಲಿ ಚೈತನ್ಯದ ಚಿಲುಮೆ, ಭೂಲೋಕದ ಅಪ್ಸರೆ, ನಕ್ಕರೆ ಮಲ್ಲಿಗೆ ಅರಳಿದಂತೆ, ಅಕ್ಕರೆಯ ಮಾತುಗಳು, ಸಕ್ಕರೆಯ ಮನಸುಳ್ಳ ಮಿಂಚುಳ್ಳಿ ನವ್ಯಾ ಪೂಜಾರಿ.

ಯಾದವ ಪೂಜಾರಿ ಹಾಗೂ ಸುಮಿತರವರ ಇಬ್ಬರು ಮಕ್ಕಳಲ್ಲಿ ಮೊದಲ ಮಗಳು ನವ್ಯಾ ಹಾಗೂ ಇವರ ತಂಗಿಯ ಹೆಸರು ಕಾವ್ಯಾ.ಈ ಸುಂದರ ಸಂಸಾರ ಪ್ರಸ್ತುತ ಸುರತ್ಕಲ್ ನಲ್ಲಿ ವಾಸವಾಗಿದ್ದಾರೆ. N.I.TK ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ವಿಧ್ಯಾಭ್ಯಾಸ ಹಾಗೂ ನಿಟ್ಟೆ ಕರ್ನಾಟಕ ಕಾಲೇಜ್ ನಲ್ಲಿ Computer Science ವಿಭಾಗದಲ್ಲಿ ಕಲಿತು ಮೊದಲಿಗೆ ಒಂದು ಕಚೇರಿಯಲ್ಲಿ ವೃತ್ತಯನ್ನು ಮಾಡುತ್ತಿದ್ದ ಅನುಭವ ಇವರದ್ದು. ತದನಂತರ ಉಮಿಲ್ ಚಲನಚಿತ್ರದ ಆಡಿಷನ್ ನಲ್ಲಿ ಆಯ್ಕೆಯಾಗಿ ಸಿನೆಮಾ ರಂಗಕ್ಕೆ ಕಾಲಿಟ್ಟರು.

ಸಿನಿಮಾ ಕ್ಷೆತ್ರವು ಇವರಿಗೆ ಬಯಸದೆ ಬಂದ ಭಾಗ್ಯವಾಯಿತು. ಆ ಕಲೆಯ ಕಳೆ ಇವರ ಮೊಗದಲ್ಲಿ ಹೊಳೆಯುತ್ತಿತ್ತು. ಅದೇ ಕಾರಣ ಇವರಿಗೆ ಮೊದಲು ತುಳು ಸಿನೆಮಾ ಉಮಿಲ್ ಚಿತ್ರದಲ್ಲಿ ನಟಿಸಲು ಅವಕಾಶ ದೊರಕಿತು. ಸಣ್ಣ ವಯಸ್ಸಿನಲ್ಲೇ ಸಿನೆಮಾ ರಂಗದ ಪುಟ್ಟ ಕನಸು ಬೆಳೆಸಿದ್ದರೂ ಕೂಡ ವಿದ್ಯಾಭ್ಯಾಸಕ್ಕೋಸ್ಕರ ಆ ಕನಸನ್ನೇ ಮರೆತ ಇವರು ಮುಂದೆ ಜೀವನದಲ್ಲಿ ತಾನೊಬ್ಬಳು ಸಿನಮಾ ನಟಿ ಆಗುವೆ ಅಂತಹ ಅವಕಾಶ ಸಿಗಬಹುದು ಎಂದು ಅಂದುಕೊಂಡಿರಲಿಲ್ಲ. ಕಾಲದ ಮಹಿಮೆ ಯಾರು ಅರಿಯರು ಸಾಮರ್ಥ್ಯವಿದ್ದರೆ ಯಾವುದೇ ಕ್ಷೇತ್ರದಲ್ಲಿ ಅನುಭವ ರಹಿತ ಮಿಂಚಬಹುದು. ಹಾಗೇ ಇವರ ಕಥೆ ತನಗೆ ಬಯಸದೆ ಬಂದ ಅವಕಾಶವಾದರೂ ಮೊದಲ ಸಿನೆಮಾದಲ್ಲೇ ಜನರ ಮನಮುಟ್ಟಿ ಒಬ್ಬ ಅದ್ಭುತ ಕಲಾವಿದೆಯಾಗಿ ಮುಂದೆ ಈ ಕ್ಷೇತ್ರದಲ್ಲಿ ನಿರ್ದಿಷ್ಟವಾದ ಗುರಿಯೊಂದನ್ನು ಇಟ್ಟುಕೊಂಡು ನವನವೀನತೆಯಿಂದ ಭವಿಷ್ಯದ ಬಾಗಿಲ ತರೆದರು‌. ಸಿನೆಮಾ ಕ್ಷೇತ್ರಕ್ಕೆ ಕಾಲಿಡುವ ಮೊದಲು ಕಲಿಕೆಯ ಸಂದರ್ಭದಲ್ಲಿ ಇವರು ನೃತ್ಯ ಹಾಗೂ ಕ್ರೀಡಾ ಚಟುವಟಿಕೆಯಲ್ಲಿ ಅಪಾರ ಒಲವು ಹೊಂದಿ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿದ ಉತ್ಸಾಹಿ ವಿಧ್ಯಾರ್ಥಿಯಾಗಿದ್ದರು.

ಉಮಿಲ್ ಇವರ ಮೊದಲ ತುಳು ಚಲನಚಿತ್ರವಾಗಿದ್ದು.ರಂಜಿತ್ ಬಜ್ಪೆರವರ ನಿರ್ದೇಶನದಲ್ಲಿ ಡಿಸೆಂಬರ್ ೨೦೧೮ ರಂದು ಬಿಡುಗಡೆಯಾಗಿದ್ದು. ಹೊಸ ಪರಿಚಯದ ಹೆಜ್ಜೆಯ ಗುರುತು ಸದ್ದಿಲ್ಲದೆ ಸಿನೆಮಾ ರಂಗದಲ್ಲಿ ಸುದ್ಧಿ ಮಾಡ ತೊಡಗಿತು.

ತದನಂತರ ಇವರು ತ್ರಿಬಲ್ ತಲಾಕ್ ಎಂಬ ಆರ್ಟ್ ಮೂವಿಯಲ್ಲಿ ನಟಿಸಿದರು. ಇದು ಇವರ ಮೊದಲ ಆರ್ಟ್ ಮೂವಿಯಾಗಿದೆ. ಈ ಚಲನಚಿತ್ರವು ಹೊಸ ತಂಡದ ಹೊಸ ಪ್ರಯತ್ನದಲ್ಲಿ ಲಂಡನ್ ನಲ್ಲಿ ಬಿಡುಗಡೆಯಾಗಿದೆ. ಚಲನಚಿತ್ರವು ವಿಭಿನ್ನವಾಗಿದ್ದು ಬ್ಯಾರಿ ಸಂಸ್ಕೃತಿಯ ಕುರಿತಾಗಿತ್ತು. ಇದರಲ್ಲಿ ನವ್ಯಾರವರು ಒಬ್ಬ ಮುಸ್ಲಿಂ ಮಹಿಳೆಯಾಗಿ ಪಾತ್ರ ನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿರುವರು. ದ್ವಿರುಕ್ತಿ ಎಂಬ ಕನ್ನಡ ಚಲನಚಿತ್ರದಲ್ಲಿ ಪಾತ್ರವಹಿಸಿದ್ದು ಇದುವರೆಗಿನ ಇವರ ಮೊದಲ ಕನ್ನಡ ಚಲನಚಿತ್ರವಾಗಿದೆ.

ಸುಂದರ ಕನಸಿನೊಂದಿಗೆ ಇತ್ತೀಚಿಗೆ ತೆರೆಕಂಡ ವಿಶೇಷ ಚಲನಚಿತ್ರ ಕನಸು ಮಾರಾಟಕ್ಕಿದೆ ಎಂಬ ಸಿನೆಮಾದಲ್ಲಿಯೂ ಇವರು ಅಭಿನಯಿಸಿರು. ಚಿತ್ತದಲ್ಲಿರುವ ಉದಯೋನ್ಮುಖ ಕಲಾವಿದರ ನಡುವೆ ತಾನು ಒಬ್ಬ ಯುವ ನಟಿಯಾಗಿ ಪಾತ್ರವಹಿಸಿರುವರು.

ಸಿನೆಮಾ ರಂಗದಲ್ಲಿ ಮುಂದುವರಿಯಲು ಇವರಿಗೆ ಇವರ ಮನೆಯವರ ಅಪಾರ ಪ್ರೋತ್ಸಾಹವಿದ್ದು‌. ಇದೇ ಇವರಿಗೆ ಮುನ್ನಡೆಯಲು ದೀಕ್ಷೆ ಎನ್ನುತ್ತಾರೆ ನವ್ಯಾ ಪೂಜಾರಿಯವರು.

ಎರಡೆಕ್ರೆ, ಇಂಗ್ಲಿಷ್, ಬೋಜರಾಜ್ ಎಂ.ಬಿ.ಬಿ.ಎಸ್, ಗಬ್ಬರ್ ಸಿಂಗ್, ತುಳುನಾಡ ಮಡಿಲು, ಬಿಂದಾಸ್, ಗೂಗ್ಲಿ ಮೊದಲಾದ ಸಿನೆಮಾಗಳು ಬಿಡುಗಡೆಯಾಗಲಿದ್ದು ಈ ಉದಯೋನ್ಮುಖ ನಟಿಗೆ ಪ್ರೋತ್ಸಾಹದ ಜೊತೆಗೆ ಮತ್ತಷ್ಟು ಅವಕಾಶಗಳು ದೊರಕಲಿ. ಮುಖ್ಯವಾಗಿ ತುಳು ರಂಗದಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುವ ಇವರು ಆದಷ್ಟು ತುಳು ಸಿನೆಮಾಗಳಲ್ಲಿ ನಟಿಸಲು ಬಯಸುತ್ತಾರೆ. ಹುಟ್ಟಿದ ಮಣ್ಣಿನ ಮೇಲಿನ ಅಭಿಮಾನವೇ ಇವರನ್ನು ಎತ್ತರಕ್ಕೆ ಬೆಳೆಸಲು ಕಾರಣವಾಗಬಹುದು. ಹಾಗೆಯೇ ತುಳು, ಕನ್ನಡ ಇತರ ಭಾಷಾ ರಂಗದಲ್ಲೂ ಅವಕಾಶಗಳು ನಿಮ್ಮ ಮುಡಿಗೇರಲಿ. ನಟನೆಯ ಹಾದಿಯಲ್ಲಿ ಯಶಸ್ವಿ ನಟಿಯಾಗಿ ಮಿಂಚುವ ತೌಳವ ಸಿರಿಗೆ ಸವಿನಯದ ಶುಭಾಶಯಗಳು.

✍️ ತೃಪ್ತಿ.ಜಿ.ಕುಂಪಲ


Related Posts

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »