TOP STORIES:

FOLLOW US

ಅನಂತಾಡಿಯಲ್ಲಿ ಕುದ್ರೋಳಿ ಗುರು ಬೆಳದಿಂಗಳು ಸಂಘಟನೆಯಿಂದ ‘ಗುರುವನ’ ಲೋಕಾರ್ಪಣೆ


ಬದುಕಿನಲ್ಲಿ ಕನಸು ಕಾಣುವುದು ಸುಲಭ ಆದರೆ ಅದನ್ನು ನನಸು ಮಾಡುವುದು ಬಲುಕಷ್ಟತ್ಯಾಗ, ಪರಿಶ್ರಮ, ಇಚ್ಚಾಶಕ್ತಿ ಇರುವತಂಡವೊಂದಿದ್ದರೆ ಯಾವುದನ್ನು ಸಾಧಿಸಲು ಸಾಧ್ಯ ಎಂದು ಹಿಂದುಳಿದ ವರ್ಗ ಹಾಗೂ ಸಮಾಜಕಲ್ಯಾಣ ಸಚಿವರಾದ ಕೋಟಶ್ರೀನಿವಾಸ ಪೂಜಾರಿರವರು ಹೇಳಿದರು.

ಅವರು   ಗುರು ಬೆಳದಿಂಗಳು ರಿ. ಕುದ್ರೋಳಿ ಇದರ ವತಿಯಿಂದ ಅನಂತಾಡಿ ಬಾಕಿಲಗುತ್ತು ಶ್ರೀ ಉಳ್ಳಾಲ್ತಿ ವೈದ್ಯನಾಥೇಶ್ವರ, ಶ್ರೀಬ್ರಹ್ಮಬೈದರ್ಕಳ ಗರಡಿಯಲ್ಲಿ  ಬ್ರಹ್ಮ ಶ್ರೀ ನಾರಾಯಣ ಗುರುಗಳ ೧೬೭ನೇ ಜನ್ಮದಿನಾಚರಣೆಯ ಪ್ರಯುಕ್ತ ೧೬೭ ಔಷದೀಯ ಸಸಿನೆಡುವ ಕಾರ್ಯಕ್ರಮ ಹಾಗೂ ನೂತನವಾಗಿ ನಿರ್ಮಿಸಿರುವ  ಗುರುವವನ್ನು ಲೋಕಾರ್ಪಣೆಗೊಳಿಸಿ ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಮ್ಮ ಬದುಕಿನ ಜೊತೆಗೆ ಪರಿಸರವನ್ನು ಉಳಿಸಿಬೆಳೆಸುವ ಕೆಲಸ ಎಲ್ಲರಿಂದ ಆಗಬೇಕಾಗಿದೆ. ನನ್ನ ಅಧಿಕಾರದ ಅವಧಿಯಲ್ಲಿಸಮಾಜದಲ್ಲಿರುವ ಕಟ್ಟಕಡೇಯ ವ್ಯಕ್ತಿಗೂ ಸಹಕಾರ ಮಾಡಬೇಕೆನ್ನುವುದು ಆಶಯ ನನ್ನದಾಗಿದೆ. ಗುರುಬೆಳದಿಂಗಳು ಸಂಸ್ಥೆಯಯೋಜನೆ ಯೋಚನೆಗಳು ಹಲವಿದ್ದು ಅವೆಲ್ಲವೂ ಸಫಲವಾಗಲಿ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ  ಮಾಜಿ ಸಚಿವರಾದ ರಮಾನಾಥ ರೈರವರು ಮಾತನಾಡಿ ಗುರುಗಳು ನಡೆದು ಬಂದ ಹಾದಿಅವಿಸ್ಮರಣೀಯ. ಈಗಿನ ಪೀಳಿಗೆ ಹಿಂದಿನ ಪೀಳಿಗೆಯನ್ನು ಅರ್ಥಮಾಡಿಕೊಂಡು ಮುನ್ನಡೆಯ ಬೇಕಾದುದು ಅಗತ್ಯ. ಗುರುಬೆಳದಿಂಗಳು ವತಿಯಿಂದ ಹಲವಾರು ಸಮಾಜಮುಖಿ ಕಾರ್ಯಗಳು ನಡೆಯುತ್ತಾ ಬರುತ್ತಿದೆ. ದೈವಗಳ ಸಾನಿಧ್ಯವಿರುವ ಬಾಕಿಲದ ಮಣ್ಣಿನಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಔಷದೀಯ ವನವನ್ನು ನಿರ್ಮಿಸಿರುವುದು ಒಂದು ಒಳ್ಳೆಯಬೆಳವಣಿಗೆಯಾಗಿದೆ ಎಂದರು.

ಗುರುಬೆಳದಿಂಗಳು ರಿ.ಕುದ್ರೋಳಿ ಇದರ ಅಧ್ಯಕ್ಷರಾದ ಪದ್ಮರಾಜ್ ಆರ್. ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅತಿಥಿಗಳನ್ನುಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿ ಜಿಲ್ಲೆಯ ವಿವಿಧ ಪುಣ್ಯ ಕ್ಷೇತ್ರಗಳಲ್ಲಿ ಗಿಡಗಳನ್ನು ನೆಡುವ ಮೂಲಕ ಬ್ರಹ್ಮ ಶ್ರೀನಾರಾಯಣಗುರುಗಳ ೧೬೭ನೇ ಜನ್ಮದಿನಾಚರಣೆಯನ್ನು ಆಚರಿಸಿಕೊಂಡು ಬಂದಿದ್ದೇವೆ. ಬಾಕಿಲಗುತ್ತಿವಿನಲ್ಲಿ ೧೬೭ಔಷದೀಯಗಿಡಗಳನ್ನು‌ ನೆಟ್ಟು ಇದೀಗ  ಗುರುವನವನ್ನು ಲೋಕಾರ್ಪಣೆ ಗೊಳಿಸಲಾಗಿದೆ. ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಸಿದ್ದಂತವನ್ನುನಾವೆಲ್ಲರೂ ಸಾಧಿಸುತ್ತೇವೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ಸಹಾಯ, ನಿರ್ಗತಿಕರಿಗೆ ಆಸರೆ, ಅನಾರೋಗ್ಯದಿಂದಿರುವ ಬಡವರನ್ನುಚಿಕಿತ್ಸೆಗೆ ಸಹಕಾರ ನೀಡುತ್ತಾ ಬಂದಿದ್ದೇವೆ. ಇನ್ನು ಮುಂದಿನ ದಿನಗಳಲ್ಲಿ ಹಲವಾರು ಸಮಾಜ ಮುಖಿ‌ಕಾರ್ಯವನ್ನು ನಡೆಸುವ ಇರಾದೆಇದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿ  ಬಂದರು ಹಾಗೂ ಮೀನುಗಾರಿಕ ಸಚಿವರಾದ ಅಂಗಾರ ಎಸ್., ಬಂಟ್ವಾಳ ಶಾಸಕರಾದ ರಾಜೇಶ್ನಾಯ್ಕ್,ರವರು ಆಗಮಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿಅಧ್ಯಕ್ಷರಾದ ದೇವೇಂದ್ರ ಪೂಜಾರಿ, ಅನಂತಾಡಿ ಬಾಕಿಲಗುತ್ತು ಶ್ರೀ ಉಳ್ಳಾಲ್ತಿ ವೈದ್ಯನಾಥೇಶ್ವರ ಕ್ಷೇತ್ರದ ಆಡಳಿತ ಅಧ್ಯಕ್ಷ ವಸಂತಪೂಜಾರಿ, ಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಜಯಾನಾಂದ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಡಾ. ರಾಜಾರಾಮ್ಕೆ.ಬಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು‌.

ಇಂತಹ ಕಾರ್ಯಕ್ರಮ ರಾಜ್ಯದ್ಯಂತ ನಡೆಯಬೇಕು:

ಎಸ್. ಅಂಗಾರ

ಕಾರ್ಯಕ್ರಮಕ್ಕೆ ಆಗಮಿಸಿದ ಬಂದರು ಹಾಗೂ ಮೀನುಗಾರಿಕ ಸಚಿವರಾದ ಎಸ್ ಅಂಗಾರರವರು ಪತ್ರಕರ್ತರೊಂದಿಗೆ ಮಾತನಾಡಿ

ಗಿಡಮೂಲಿಕೆಗಳ ಸಸಿಗಳನ್ನು ನೆಟ್ಟು ಬ್ರಹ್ಮ ಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಬಾಕಿಲದಲ್ಲಿ ಔಷದೀಯ ವನವನ್ನುನಿರ್ಮಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಮುಂದಿನ ದಿನಗಳಲ್ಲಿ ಅಳಿವಿನಂಚಿನಲ್ಲಿರುವ ಗಿಡಮೂಲಿಕೆ ಗಿಡಗಳನ್ನು ನೆಟ್ಟುಬೆಳೆಸುವುದು ಅಗತ್ಯವಾಗಿದೆ. ಇಂತಹ ಮಹತ್ಕಾರ್ಯಗಳಿಗೆ ಸರಕಾರದ ಭಾಗದಿಂದ ಸಹಕಾರವನ್ನು ನೀಡಲು ಶ್ರಮಿಸುತ್ತೇನೆ. ಇಂತಹಕಾರ್ಯಕ್ರಮಗಳು ನಮ್ಮ ಜಿಲ್ಲೆಗೆ ಮಾತ್ರ ಸೀಮಿತವಾಗದೆ  ರಾಜ್ಯಾದ್ಯಾಂತ ಔಷದೀಯ ಸಸಿಗಳನ್ನು ನೆಟ್ಟು ಬೆಳೆಸುವಕಾರ್ಯವಾಗಬೇಕು ಎಂದರು


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »