TOP STORIES:

ಅನಿಶಾ ಪೂಜಾರಿ ಸಾವಿಗೆ ನ್ಯಾಯ ಒದಗಿಸಲು ಹೋರಾಟಕ್ಕೆ ಸಿದ್ದ : ಬಿಲ್ಲವ ಯುವ ವೇದಿಕೆ ಹೇಳಿಕೆ..!


ಬ್ರಹ್ಮಾವರ : ಉಡುಪಿ ಜಿಲ್ಲೆಯ ಸಾಯಿಬ್ರಕಟ್ಟೆ, ಕಾಜ್ರಳ್ಳಿ ಎಂಬಲ್ಲಿನ ನಿವಾಸಿ ಅನಿಶಾ ಜಿ ಪೂಜಾರಿ ಎಂಬ ಹುಡುಗಿಯ ಆತ್ಮಹತ್ಯೆ ಪ್ರಕರಣ ಈಗ ಅನುಮಾನಕ್ಕೆ ಕಾರಣವಾಗಿದೆ. ಹುಡುಗಿಯ ಸಾವಿನ ಪ್ರಕರಣ ಸಮಗ್ರ ತನಿಖೆಗೆ ಬಿಲ್ಲವ ಯುವ ವೇದಿಕೆ ಒತ್ತಾಯಿಸಿದೆ.ಹಾಗೂ ಪ್ರೀತಿಯ ಹೆಸರಿನಲ್ಲಿ ಮೋಸ ಮಾಡಿ ಆತ್ಮಹತ್ಯೆಗೆ ಕಾರಣವಾದ ಹುಡಗನಿಗೆ ತಕ್ಕ ಶಿಕ್ಷೆಯಾಗ‌ಬೇಕೆಂದು ಆತನ ವಿರುದ್ಧ ಬಿಲ್ಲವರ ಸಂಘ ಆಗ್ರಹಿಸಿದೆ.

ಅನಿಶಾ ಜಿ. ಪೂಜಾರಿ ಹಾಗೂ ಸ್ಥಳೀಯ ಚೇತನ್ ಶೆಟ್ಟಿಯ ಪ್ರೇಮಪ್ರಕರಣದ ಕುಮ್ಮಕ್ಕಿನಿಂದ ಮನನೊಂದು ದಿನಾಂಕ-21-08-2020 ರಂದು ಆತ್ಮಹತ್ಯೆ ಮಾಡಿಕೊಂಡಿರುವುದು ವಿಷಾದನೀಯ. ಎಂ.ಬಿ.ಎ ಪದವೀಧರೆಯಾಗಿ,ಕಂಪೆನಿಯೊಂದರಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದ ಅನಿಶಾ ಮತ್ತು ಚೇತನ್ ಶೆಟ್ಟಿಯೊಡನೆ ಪ್ರೀತಿ ಸಂಬಂಧಗಳಿದ್ದು ಇದು ಮದುವೆಯ ವಿಚಾರದವರೆಗೆ ಮುಂದುವರಿದಿತ್ತು.

ಈ ಹಂತದಲ್ಲಿ ಜಾಣತನದಿಂದ ವಿವಿಧ ಸಬೂಬು ಹೇಳಿ ತಪ್ಪಿಸಿಕೊಳ್ಳುತ್ತಿದ್ದ ಚೇತನ್ ಶೆಟ್ಟಿಯೊಡನೆ ಪರಿಪರಿಯಾಗಿ ನಿವೇದಿಸಿಕೊಂಡಿದ್ದರೂ ಆತನ ವಂಚನೆಯ ಬಲೆಗೆ ಸಿಲುಕಿ ಆತನಿಗೇ ಸಂಬಂಧಿಸಿದ ಹಾಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚೇತನ್ ಶೆಟ್ಟಿಯ ಎಲ್ಲ ವಂಚನೆಗಳ ಬಗೆಗೆ ಸವಿವರ ಡೆತ್ ನೋಟ್‌ ಮತ್ತು ಮೊಬೈಲ್ ಸಂಭಾಷಣೆ ಸಿಕ್ಕಿದ್ದು, ಈ ಪ್ರಕರಣಕ್ಕೆ ಚೇತನ್ ಶೆಟ್ಟಿಯ ಮೋಸವೆ ಪ್ರಧಾನ ಕಾರಣವಾಗಿದೆ.

ಕೌಟುಂಬಿಕವಾಗಿ ಬಡತನದ ಹಿನ್ನೆಲೆಯಿರುವ ಅನಿಶಾ ಮನೆಯವರು ಒಂದೆಡೆ ಮನೆ ಮಗಳ ಸಾವಿನ ನೋವು ಮತ್ತೊಂದೆಡೆ ಅನ್ಯಾಯವನ್ನು ಎದುರಿಸುವುದು ಹೇಗೆಂದು ಪರಿತಪಿಸುತ್ತಿರುವ ಸಂದರ್ಭ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಮಾನ್ಯ ಪ್ರವೀಣ್ ಎಂ. ಪೂಜಾರಿ ಯವರನ್ನು ಸಂಪರ್ಕಿಸಿದ್ದಾರೆ.

ತಕ್ಷಣವೆ ಶ್ರೀಯುತರು ಮಾನವೀಯ ದೃಷ್ಟಿ ಮತ್ತು ಸಮಾಜಾಭಿಮಾನದಿಂದ ವೇದಿಕೆಯ ಸದಸ್ಯರೊಡಗೂಡಿ ಬ್ರಹ್ಮಾವರ ಪೋಲಿಸ್ ಉಪನಿರೀಕ್ಷಕರನ್ನು ಖುದ್ದು ಭೇಟಿಯಾದಾಗ, ಈಗಾಗಲೇ ಚೇತನ್ ಶೆಟ್ಟಿಯ ವಿರುದ್ಧ FIR ದಾಖಲಿಸಲಾಗಿದ್ದು, ಪ್ರಕರಣವನ್ನು ಕೂಲಂಕುಷ ವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಅನಿಶಾ ಮನೆಯವರ ಅಸಹಾಯಕತೆಯನ್ನು ಅರಿತಿರುವ ಚೇತನ್ ಶೆಟ್ಟಿ ತನ್ನ ಮುಂದಿನ ವೈಯಕ್ತಿಕ ಮತ್ತು ವೈವಾಹಿಕ ಜೀವನಕ್ಕೆ ಕುಂದು ಬರಬಾರದೆಂದು ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಇನ್ನಿಲ್ಲದ ರಾಜಕೀಯ ಪ್ರಭಾವವನ್ನು ಬಳಸಿ ಕೊಂಡಿರುವುದು ಗಮನಕ್ಕೆ ಬಂದಿದೆ. ಈ ವಿಚಾರದಲ್ಲಿ ನಮ್ಮ ಬಿಲ್ಲವ ಸಮಾಜ ಅನಿಶಾ ಪೂಜಾರಿಯವರ ಪರ ನಿಲ್ಲಬೇಕಾಗಿದೆ.

ಚೇತನ್ ಶೆಟ್ಟಿಯಂತಹ ದುಷ್ಟರಿಂದ ಇನ್ನಷ್ಟು ಅಮಾಯಕ ಹೆಣ್ಣು ಮಕ್ಕಳು ಶೋಷಣೆಗೊಳಗಾಗು ವುದನ್ನು ತಪ್ಪಿಸಲು ಅತ್ಯವಶ್ಯ ಜಾಗೃತರಾಗಬೇಕಿದೆ. ಹಾಗೂ ಅಸಹಾಯಕರಾದ ಅನಿಶಾ ಪೂಜಾರಿಯ ಮನೆಯವರಿಗೆ ನ್ಯಾಯ ದೊರಕಿಸಲು ಸಮಸ್ತ ಸಮಾಜ ಸಂಘಟಿತ ಧ್ವನಿಯಾಗುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಬಯಸುತ್ತದೆ. ಹಾಗೂ ಈ ಪ್ರಕರಣದಲ್ಲಿ ತಪ್ಪಿತಸ್ಥನಿಗೆ ಶಿಕ್ಷೆಯಾಗಲೇಬೇಕೆಂಬ ನಿಟ್ಟಿನಲ್ಲಿ ಅಗತ್ಯ ಕಾನೂನಿನ ನೆರವಿನೊಡನೆ ಅಮಾಯಕರ ಪರವಾದ ಯಾವುದೇ ಹೋರಾಟಕ್ಕೂ ಪ್ರವೀಣ್ ಪೂಜಾರಿ ಮುಂದಾಳತ್ವದ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಹಗಲಿರುಳು ಸಿದ್ಧವಿದೆ ಎಂದು ಹೇಳಿಕೆ ನೀಡಿದ್ದಾರೆ.


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »