TOP STORIES:

FOLLOW US

ಅನಿಶಾ ಪೂಜಾರಿ ಸಾವಿಗೆ ನ್ಯಾಯ ಒದಗಿಸಲು ಹೋರಾಟಕ್ಕೆ ಸಿದ್ದ : ಬಿಲ್ಲವ ಯುವ ವೇದಿಕೆ ಹೇಳಿಕೆ..!


ಬ್ರಹ್ಮಾವರ : ಉಡುಪಿ ಜಿಲ್ಲೆಯ ಸಾಯಿಬ್ರಕಟ್ಟೆ, ಕಾಜ್ರಳ್ಳಿ ಎಂಬಲ್ಲಿನ ನಿವಾಸಿ ಅನಿಶಾ ಜಿ ಪೂಜಾರಿ ಎಂಬ ಹುಡುಗಿಯ ಆತ್ಮಹತ್ಯೆ ಪ್ರಕರಣ ಈಗ ಅನುಮಾನಕ್ಕೆ ಕಾರಣವಾಗಿದೆ. ಹುಡುಗಿಯ ಸಾವಿನ ಪ್ರಕರಣ ಸಮಗ್ರ ತನಿಖೆಗೆ ಬಿಲ್ಲವ ಯುವ ವೇದಿಕೆ ಒತ್ತಾಯಿಸಿದೆ.ಹಾಗೂ ಪ್ರೀತಿಯ ಹೆಸರಿನಲ್ಲಿ ಮೋಸ ಮಾಡಿ ಆತ್ಮಹತ್ಯೆಗೆ ಕಾರಣವಾದ ಹುಡಗನಿಗೆ ತಕ್ಕ ಶಿಕ್ಷೆಯಾಗ‌ಬೇಕೆಂದು ಆತನ ವಿರುದ್ಧ ಬಿಲ್ಲವರ ಸಂಘ ಆಗ್ರಹಿಸಿದೆ.

ಅನಿಶಾ ಜಿ. ಪೂಜಾರಿ ಹಾಗೂ ಸ್ಥಳೀಯ ಚೇತನ್ ಶೆಟ್ಟಿಯ ಪ್ರೇಮಪ್ರಕರಣದ ಕುಮ್ಮಕ್ಕಿನಿಂದ ಮನನೊಂದು ದಿನಾಂಕ-21-08-2020 ರಂದು ಆತ್ಮಹತ್ಯೆ ಮಾಡಿಕೊಂಡಿರುವುದು ವಿಷಾದನೀಯ. ಎಂ.ಬಿ.ಎ ಪದವೀಧರೆಯಾಗಿ,ಕಂಪೆನಿಯೊಂದರಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದ ಅನಿಶಾ ಮತ್ತು ಚೇತನ್ ಶೆಟ್ಟಿಯೊಡನೆ ಪ್ರೀತಿ ಸಂಬಂಧಗಳಿದ್ದು ಇದು ಮದುವೆಯ ವಿಚಾರದವರೆಗೆ ಮುಂದುವರಿದಿತ್ತು.

ಈ ಹಂತದಲ್ಲಿ ಜಾಣತನದಿಂದ ವಿವಿಧ ಸಬೂಬು ಹೇಳಿ ತಪ್ಪಿಸಿಕೊಳ್ಳುತ್ತಿದ್ದ ಚೇತನ್ ಶೆಟ್ಟಿಯೊಡನೆ ಪರಿಪರಿಯಾಗಿ ನಿವೇದಿಸಿಕೊಂಡಿದ್ದರೂ ಆತನ ವಂಚನೆಯ ಬಲೆಗೆ ಸಿಲುಕಿ ಆತನಿಗೇ ಸಂಬಂಧಿಸಿದ ಹಾಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚೇತನ್ ಶೆಟ್ಟಿಯ ಎಲ್ಲ ವಂಚನೆಗಳ ಬಗೆಗೆ ಸವಿವರ ಡೆತ್ ನೋಟ್‌ ಮತ್ತು ಮೊಬೈಲ್ ಸಂಭಾಷಣೆ ಸಿಕ್ಕಿದ್ದು, ಈ ಪ್ರಕರಣಕ್ಕೆ ಚೇತನ್ ಶೆಟ್ಟಿಯ ಮೋಸವೆ ಪ್ರಧಾನ ಕಾರಣವಾಗಿದೆ.

ಕೌಟುಂಬಿಕವಾಗಿ ಬಡತನದ ಹಿನ್ನೆಲೆಯಿರುವ ಅನಿಶಾ ಮನೆಯವರು ಒಂದೆಡೆ ಮನೆ ಮಗಳ ಸಾವಿನ ನೋವು ಮತ್ತೊಂದೆಡೆ ಅನ್ಯಾಯವನ್ನು ಎದುರಿಸುವುದು ಹೇಗೆಂದು ಪರಿತಪಿಸುತ್ತಿರುವ ಸಂದರ್ಭ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಮಾನ್ಯ ಪ್ರವೀಣ್ ಎಂ. ಪೂಜಾರಿ ಯವರನ್ನು ಸಂಪರ್ಕಿಸಿದ್ದಾರೆ.

ತಕ್ಷಣವೆ ಶ್ರೀಯುತರು ಮಾನವೀಯ ದೃಷ್ಟಿ ಮತ್ತು ಸಮಾಜಾಭಿಮಾನದಿಂದ ವೇದಿಕೆಯ ಸದಸ್ಯರೊಡಗೂಡಿ ಬ್ರಹ್ಮಾವರ ಪೋಲಿಸ್ ಉಪನಿರೀಕ್ಷಕರನ್ನು ಖುದ್ದು ಭೇಟಿಯಾದಾಗ, ಈಗಾಗಲೇ ಚೇತನ್ ಶೆಟ್ಟಿಯ ವಿರುದ್ಧ FIR ದಾಖಲಿಸಲಾಗಿದ್ದು, ಪ್ರಕರಣವನ್ನು ಕೂಲಂಕುಷ ವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಅನಿಶಾ ಮನೆಯವರ ಅಸಹಾಯಕತೆಯನ್ನು ಅರಿತಿರುವ ಚೇತನ್ ಶೆಟ್ಟಿ ತನ್ನ ಮುಂದಿನ ವೈಯಕ್ತಿಕ ಮತ್ತು ವೈವಾಹಿಕ ಜೀವನಕ್ಕೆ ಕುಂದು ಬರಬಾರದೆಂದು ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಇನ್ನಿಲ್ಲದ ರಾಜಕೀಯ ಪ್ರಭಾವವನ್ನು ಬಳಸಿ ಕೊಂಡಿರುವುದು ಗಮನಕ್ಕೆ ಬಂದಿದೆ. ಈ ವಿಚಾರದಲ್ಲಿ ನಮ್ಮ ಬಿಲ್ಲವ ಸಮಾಜ ಅನಿಶಾ ಪೂಜಾರಿಯವರ ಪರ ನಿಲ್ಲಬೇಕಾಗಿದೆ.

ಚೇತನ್ ಶೆಟ್ಟಿಯಂತಹ ದುಷ್ಟರಿಂದ ಇನ್ನಷ್ಟು ಅಮಾಯಕ ಹೆಣ್ಣು ಮಕ್ಕಳು ಶೋಷಣೆಗೊಳಗಾಗು ವುದನ್ನು ತಪ್ಪಿಸಲು ಅತ್ಯವಶ್ಯ ಜಾಗೃತರಾಗಬೇಕಿದೆ. ಹಾಗೂ ಅಸಹಾಯಕರಾದ ಅನಿಶಾ ಪೂಜಾರಿಯ ಮನೆಯವರಿಗೆ ನ್ಯಾಯ ದೊರಕಿಸಲು ಸಮಸ್ತ ಸಮಾಜ ಸಂಘಟಿತ ಧ್ವನಿಯಾಗುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಬಯಸುತ್ತದೆ. ಹಾಗೂ ಈ ಪ್ರಕರಣದಲ್ಲಿ ತಪ್ಪಿತಸ್ಥನಿಗೆ ಶಿಕ್ಷೆಯಾಗಲೇಬೇಕೆಂಬ ನಿಟ್ಟಿನಲ್ಲಿ ಅಗತ್ಯ ಕಾನೂನಿನ ನೆರವಿನೊಡನೆ ಅಮಾಯಕರ ಪರವಾದ ಯಾವುದೇ ಹೋರಾಟಕ್ಕೂ ಪ್ರವೀಣ್ ಪೂಜಾರಿ ಮುಂದಾಳತ್ವದ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಹಗಲಿರುಳು ಸಿದ್ಧವಿದೆ ಎಂದು ಹೇಳಿಕೆ ನೀಡಿದ್ದಾರೆ.


Share:

More Posts

Category

Send Us A Message

Related Posts

ಬಹರೈನ್ ನಲ್ಲಿ ನಡೆದ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಅಧ್ಯಕ್ಷರಾಗಿ ರಾಜ್ ಕುಮಾರ್ ಆಯ್ಕೆ


Share       ಮುಂಬಯಿ, (ಆರ್‌ಬಿಐ) ಜ.೧೧ : ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹನ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ


Read More »

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »