TOP STORIES:

FOLLOW US

ಅಮೇರಿಕಾದಲ್ಲಿ ಪ್ರಧಾನಿ ಮೋದಿಗೆ ಮತ್ತೆ “ಆನಂದ”ದ ಆತಿಥ್ಯ ಹೋಟೇಲ್ ಉದ್ಯಮಿ ಆನಂದ್‌ ಪೂಜಾರಿ ಅವರದಾಗಿತ್ತು


ಕುಂದಾಪುರ: ಮೂರು ದಿನಗಳ ಕಾಲ ಅಮೆರಿಕ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಸ್ಯಾಹಾರತಯಾರಿಸಿಕೊಡುವ ಜವಾಬ್ದಾರಿ ಕುಂದಾಪುರದ ಆಲೂರು ಮೂಲದ ಅನಿವಾಸಿ ಭಾರತೀಯ ಹೊಟೇಲ್‌ ಉದ್ಯಮಿ ಆನಂದ್‌ಪೂಜಾರಿ ಅವರದಾಗಿತ್ತು.

ಮೋದಿ ಅವರು ವಾಷಿಂಗ್ಟನ್‌ ಡಿ.ಸಿ.ಯಲ್ಲಿ ವಾಸ್ತವ್ಯವಿದ್ದ ಮೂರು ದಿನ ಊಟೋಪಚಾರದ ನೇತೃತ್ವ ವಹಿಸಿದವರು ಆಲೂರುಆನಂದ ಪೂಜಾರಿ. ಮೂಲಕ ಆನಂದ್‌ ಅವರು ಮೋದಿ ಅವರಿಗೆ ಐದನೇ ಬಾರಿಗೆ ಊಟದ ಆತಿಥ್ಯದ ಜವಾಬ್ದಾರಿನೋಡಿಕೊಂಡಂತಾಗಿದೆ.

ವಾಷಿಂಗ್ಟನ್‌ ಡಿಸಿಯಲ್ಲಿ 35 ವರ್ಷಗಳಿಂದ ನೆಲೆಸಿರುವ ಆನಂದ ಪೂಜಾರಿ ಮತ್ತು ಪತ್ನಿ ಸುಮಿತಾ ದಂಪತಿ 25 ವರ್ಷಗಳಿಗೂ ಹೆಚ್ಚುಕಾಲದಿಂದ ವುಡ್‌ಲ್ಯಾಂಡ್ಸ್‌ ಹೊಟೇಲನ್ನು ನಡೆಸುತ್ತಿದ್ದಾರೆ. ಇವರು ಬೈಂದೂರು ತಾಲೂಕಿನ ಆಲೂರು ಗ್ರಾಮದ ಕಲ್ಲಂಗಡಿ ಮನೆಯನಿವಾಸಿ ಬಡಿಯ ಪೂಜಾರಿ ಹಾಗೂ ಗಿರಿಜಾ ದಂಪತಿಯ ಪುತ್ರ.

ವಾಷಿಂಗ್ಟನ್‌ ಡಿಸಿಯಲ್ಲಿಯೇ ಇವರ ಹೊಟೇಲ್‌ ಇರುವುದರಿಂದ ಭಾರತದಿಂದ ಅಮೆರಿಕಕ್ಕೆ ಕೇಂದ್ರ ಸಚಿವರ ಸಹಿತ ಗಣ್ಯರು ಭೇಟಿನೀಡಿದರೆ, ಅವರಿಗೆಲ್ಲ ಆತಿಥ್ಯ ಇವರದೇ ಆಗಿದೆ.2023 ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವಾದ್ದರಿಂದ ಮೊದಲ ದಿನ ರಾತ್ರಿಯೂಟಕ್ಕೆ ಸಿರಿಧಾನ್ಯಗಳದೇ ಬಿಸಿಬೇಳೆ ಬಾತ್‌ಮಾಡಿದ್ದರು. ಉಳಿದಂತೆ ಮೋದಿಯವರು ಗುಜರಾತಿ ಶೈಲಿಯಲ್ಲಿ ಕಿಚಡಿ, ಢೋಕ್ಲಾ, ಹಸಿ ಅಥವಾ ಬೇಯಿಸಿದ ತಾಜಾ ತರಕಾರಿಗಳು, ಹಣ್ಣುಗಳು ಇತ್ಯಾದಿಯನ್ನಷ್ಟೇ ಬಯಸುವುದರಿಂದ ಮತ್ತು . ಭಾರತೀಯ ವಿಶೇಷಗಳಾದ ಇಡ್ಲಿಚಟ್ನಿ, ವಡೆಸಾಂಬಾರ್‌ ಸಹಅವರಿಗೆ ಇಷ್ಟವೇ ಆದ್ದರಿಂದ, ಪುನರಾವರ್ತನೆ ಆಗದಂತೆ ನೋಡಿಕೊಂಡು ಶುದ್ಧ ಸಸ್ಯಹಾರ ಆಹಾರವನ್ನೇ ಒದಗಿಸಿದ್ದಾರೆ. “ತರಕಾರಿಗಳೆಲ್ಲ ಭಾರತದವೇ ಆಗಬೇಕೆಂದು ಎಲ್ಲೆಲ್ಲಿಂದ ಹುಡುಕಿ ತರುವ ಕಷ್ಟ ತಗೋಬೇಡಿ. ಸ್ಥಳೀಯವಾಗಿ ಬೆಳೆದ, ಇದುವರೆಗೆನನಗೆ ಅಪರಿಚಿತ ತರಕಾರಿಗಳಿದ್ದರೆ ದಯವಿಟ್ಟು ಅವುಗಳನ್ನೇ ಬಳಸಿಎಂದು ಮೋದಿಯವರು ಸೂಚನೆ ಕೊಟ್ಟಿದ್ದರು ಎನ್ನಲಾಗಿದೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »