TOP STORIES:

ಅಮೇರಿಕಾದ ನೆಲದಲ್ಲಿ, ಭಾರತದ ಪ್ರಧಾನಿಗೆ ಆತಿಥ್ಯದ ಜವಾಬ್ದಾರಿಯನ್ನು ವಹಿಸಿಕೊಂಡ ತುಳುನಾಡ ಮನೆ ಮಗಳು ಸುಮಲ್ ಕೋಟ್ಯಾನ್


ಈ ತುಳುನಾಡಿನ ಮಣ್ಣಿನ ಗುಣವೇ ಹಾಗೇ, ಅದೇಷ್ಟೋ ಸಾಧಕರನ್ನು,ಉದ್ಯಮಿಗಳನ್ನು ಜಗತ್ತಿಗೆ ಬಳುವಳಿಯಾಗಿ ಕೊಟ್ಟ ಪುಣ್ಯ ಭೂಮಿ ಇದು. ಕೆಲವರು ಸದ್ದು ಮಾಡಿದರು,ಇನ್ನು ಕೆಲವರು ತನ್ನ ಕಾರ್ಯದಿಂದಲೇ ತನ್ನತ್ತ ತಿರುಗುವಂತೆ ಮಾಡಿದರು ಎಂಬುದನ್ನು ಹೇಳಲು ಯಾವುದೇ ಅಂಜಿಕೆಯಿಲ್ಲ.ಇಂದು ತುಳುನಾಡಿನ ಮನೆ ಮಗಳ ಸಣ್ಣ ಪರಿಚಯವನ್ನು ನಿಮ್ಮ ಎದುರಿಗೆ ತರಲೇಬೇಕು ಅನಿಸಿತು. ನಮ್ಮ ಪ್ರಧಾನಿಯಾದ ನರೇಂದ್ರ ಮೋದಿಯವರು ಇತ್ತೀಚೆಗೆ ಅಮೇರಿಕದ ಪ್ರವಾಸವನ್ನು ಕೈಗೊಂಡಿದ್ದರು.

ಪ್ರಧಾನಿ ಮತ್ತು ಭಾರತದ ಗಣ್ಯ ವ್ಯಕ್ತಿಗಳ ಆತಿಥ್ಯದ ಜವಾಬ್ದಾರಿಯನ್ನು ನಮ್ಮ ಕರಾವಳಿಯ ಆನಂದ್ ರೆಸ್ಟೋರೆಂಟ್ ಗೆ(ಆನಂದ್ ಪೂಜಾರಿ) ನೀಡಲಾಗಿತ್ತು. ಇವರು ಕ್ಯಾಪಿಟಲ್ ಹಿಲ್ ಮತ್ತು ವೈಟ್ ಹೌಸ್ಸ್ ಗೆ ಭಾರತೀಯ ಶೈಲಿಯ ಆಹಾರ ಕ್ರಮಕ್ಕೆ ಗುತ್ತಿಗೆ ಪಡೆದ ನಮ್ಮ ಹೆಮ್ಮೆಯ ಕರಾವಳಿಗರು. ಈ ಸಂದರ್ಭದಲ್ಲಿ ಸುಮಲ್ ಕೋಟ್ಯಾನ್ ಅವರು ನರೇಂದ್ರ ಮೋದಿ ಮತ್ತು ಗಣ್ಯ ವ್ಯಕ್ತಿಗಳಿಗೆ ಭಾರತೀಯ ಆತಿಥ್ಯ ನೀಡುವ ಜವಾಬ್ದಾರಿಯ ಹೊಣೆಯನ್ನು ಇವರು ವಹಿಸಿಕೊಂಡಿದ್ದರು.ಕರಾವಳಿಯ ಒಬ್ಬಳು ಮನೆ ಮಗಳು ದೂರದ ಅಮೆರಿಕದಲ್ಲಿ ಇಂತಹ ದೊಡ್ಡ ಜವಾಬ್ದಾರಿಯನ್ನು ನಿರ್ವಹಿಸಿದುದು ನಮಗೆಲ್ಲರಿಗೂ ಹೆಮ್ಮಯ ವಿಷಯವೇ. 2017 ಮತ್ತು 2021ರಲ್ಲೀ ಎರಡು ಬಾರಿ ಈ ಕಾರ್ಯವನ್ನು ಮಾಡಿದ ಸುಮಲ್ ಕೋಟ್ಯಾನ್ ರವರು ಮಂಗಳೂರಿನ ಮೇರಿ ಹಿಲ್ ನಲ್ಲಿ ಜನಿಸಿದವರು.

ಗೋಪಾಲ ಪೂಜಾರಿ ಮತ್ತು ಸುಫಲ ರವರ ಮಗಳಾಗಿ ಜನಿಸಿದ ಇವರು ಪ್ರಾಥಮಿಕ ಶಿಕ್ಷಣವನ್ನು ಅನಾಸ್ ನಲ್ಲಿ ಪ್ರೌಢ ಶಿಕ್ಷಣವನ್ನು ಕಾರ್ಮಲ್ ಶಾಲೆಯಲ್ಲಿ ಪೂರ್ಣಗೊಳಿಸಿದರು.ಹಾಗೆಯೇ ಪಿ.ಯು.ಸಿ.ಯನ್ನು ಸೈಂಟ್ ಅಲೋಶಿಸ್,ಬಯೋಟೆಕ್ನಾಲಜಿ ಎಂಜಿನಿಯರಿಂಗ್ ನ್ನು ನಿಟ್ಟೆ ಮಂಗಳೂರಿನಲ್ಲಿ ಮುಗಿಸಿದರು.

ಅಮೆರಿಕದಲ್ಲಿ 9 ವರುಷದಿಂದ ವಾಸವಾಗಿರುವ ಸುಮಲ್ ಅವರು ಸಂದೀಪ್ ಕೋಟ್ಯಾನ್ ರವರನ್ನು ವಿವಾಹವಾಗಿ ತಮ್ಮ ದಾಂಪತ್ಯ ಜೀವನವನ್ನು ಸಾಗಿಸುತ್ತಿದ್ದಾರೆ.ಹಾಗೆಯೇ ಎರಡು ಮುದ್ದಾದ ಮಕ್ಕಳ ತಾಯಿಯಾಗಿದ್ದಾರೆ.ಹೊಟೇಲ್ ಉದ್ಯಮದಲ್ಲಿ ಅತೀವ ಆಸಕ್ತಿ ಇದ್ದ ಇವರು ಆನಂದ್ ಪೂಜಾರಿಯವರ ಆನಂದ್ ರೆಸ್ಟೋರೆಂಟ್ ನ ಜೊತೆ ಸೇರಿದರು,ಆನಂದ್ ರೆಸ್ಟೋರೆಂಟ್ 4 ಬಾರಿ ಪ್ರಧಾನಿ ಮತ್ತು ಭದ್ರತ ದಳದ ಆತಿಥ್ಯವನ್ನು ವಹಿಸಿಕೊಂಡ ಹೆಮ್ಮೆ ಇವರದು.

ಮೋದಿಯವರು ಸುಮಲ್ ಕೋಟ್ಯಾನ್ ಜೋತೆ ಹಂಚಿಕೊಂಡ ಮಾತು:

ಪ್ರಧಾನಿ ಮೋದಿಯವರು “ಮಗಳೇ” ಎಂದು ಕರೆಯುತ್ತಿದ್ದರಂತೆ, ಖುದ್ದಾಗಿ ಮೋದಿಯವರೇ ಕಳೆದ ಕಾರ್ಯಕ್ರಮದಲ್ಲಿ (2017) ನೀವೇ ಇದ್ದುದು ಅಲ್ಲವೇ ಎಂದು ಕೇಳಿದರಂತೆ. ಹಾಗೆಯೇ ಮಂಗಳೂರು ಎಂದಾಗ ಕರ್ನಾಟಕ ಎಂಬುದನ್ನು ಹೇಳಿದರಂತೆ.

ಒಬ್ಬ ಮಹಿಳೆಯಾಗಿ ಅಷ್ಟು ದೊಡ್ಡ ಕಾರ್ಯಕ್ರಮದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ಕರಾವಳಿಗರ ಪಾಲಿಗೆ ಹೆಮ್ಮೆಯ ವಿಷಯವೇ. ಪ್ರಧಾನಿ ಮೋದಿಯವರ ಸರಳತೆಯನ್ನು ನೇರವಾಗಿ ಕಂಡ ಇವರು,ಇಂತಹ ಅವಕಾಶವನ್ನು ಪಡೆದು ಧನ್ಯನಾದೆ ಎನ್ನುತ್ತಾರೆ.

ವಿಜೇತ್ ಪೂಜಾರಿ ಶಿಬಾಜೆ.

 


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »