TOP STORIES:

ಅಮೇರಿಕಾದ ನೆಲದಲ್ಲಿ, ಭಾರತದ ಪ್ರಧಾನಿಗೆ ಆತಿಥ್ಯದ ಜವಾಬ್ದಾರಿಯನ್ನು ವಹಿಸಿಕೊಂಡ ತುಳುನಾಡ ಮನೆ ಮಗಳು ಸುಮಲ್ ಕೋಟ್ಯಾನ್


ಈ ತುಳುನಾಡಿನ ಮಣ್ಣಿನ ಗುಣವೇ ಹಾಗೇ, ಅದೇಷ್ಟೋ ಸಾಧಕರನ್ನು,ಉದ್ಯಮಿಗಳನ್ನು ಜಗತ್ತಿಗೆ ಬಳುವಳಿಯಾಗಿ ಕೊಟ್ಟ ಪುಣ್ಯ ಭೂಮಿ ಇದು. ಕೆಲವರು ಸದ್ದು ಮಾಡಿದರು,ಇನ್ನು ಕೆಲವರು ತನ್ನ ಕಾರ್ಯದಿಂದಲೇ ತನ್ನತ್ತ ತಿರುಗುವಂತೆ ಮಾಡಿದರು ಎಂಬುದನ್ನು ಹೇಳಲು ಯಾವುದೇ ಅಂಜಿಕೆಯಿಲ್ಲ.ಇಂದು ತುಳುನಾಡಿನ ಮನೆ ಮಗಳ ಸಣ್ಣ ಪರಿಚಯವನ್ನು ನಿಮ್ಮ ಎದುರಿಗೆ ತರಲೇಬೇಕು ಅನಿಸಿತು. ನಮ್ಮ ಪ್ರಧಾನಿಯಾದ ನರೇಂದ್ರ ಮೋದಿಯವರು ಇತ್ತೀಚೆಗೆ ಅಮೇರಿಕದ ಪ್ರವಾಸವನ್ನು ಕೈಗೊಂಡಿದ್ದರು.

ಪ್ರಧಾನಿ ಮತ್ತು ಭಾರತದ ಗಣ್ಯ ವ್ಯಕ್ತಿಗಳ ಆತಿಥ್ಯದ ಜವಾಬ್ದಾರಿಯನ್ನು ನಮ್ಮ ಕರಾವಳಿಯ ಆನಂದ್ ರೆಸ್ಟೋರೆಂಟ್ ಗೆ(ಆನಂದ್ ಪೂಜಾರಿ) ನೀಡಲಾಗಿತ್ತು. ಇವರು ಕ್ಯಾಪಿಟಲ್ ಹಿಲ್ ಮತ್ತು ವೈಟ್ ಹೌಸ್ಸ್ ಗೆ ಭಾರತೀಯ ಶೈಲಿಯ ಆಹಾರ ಕ್ರಮಕ್ಕೆ ಗುತ್ತಿಗೆ ಪಡೆದ ನಮ್ಮ ಹೆಮ್ಮೆಯ ಕರಾವಳಿಗರು. ಈ ಸಂದರ್ಭದಲ್ಲಿ ಸುಮಲ್ ಕೋಟ್ಯಾನ್ ಅವರು ನರೇಂದ್ರ ಮೋದಿ ಮತ್ತು ಗಣ್ಯ ವ್ಯಕ್ತಿಗಳಿಗೆ ಭಾರತೀಯ ಆತಿಥ್ಯ ನೀಡುವ ಜವಾಬ್ದಾರಿಯ ಹೊಣೆಯನ್ನು ಇವರು ವಹಿಸಿಕೊಂಡಿದ್ದರು.ಕರಾವಳಿಯ ಒಬ್ಬಳು ಮನೆ ಮಗಳು ದೂರದ ಅಮೆರಿಕದಲ್ಲಿ ಇಂತಹ ದೊಡ್ಡ ಜವಾಬ್ದಾರಿಯನ್ನು ನಿರ್ವಹಿಸಿದುದು ನಮಗೆಲ್ಲರಿಗೂ ಹೆಮ್ಮಯ ವಿಷಯವೇ. 2017 ಮತ್ತು 2021ರಲ್ಲೀ ಎರಡು ಬಾರಿ ಈ ಕಾರ್ಯವನ್ನು ಮಾಡಿದ ಸುಮಲ್ ಕೋಟ್ಯಾನ್ ರವರು ಮಂಗಳೂರಿನ ಮೇರಿ ಹಿಲ್ ನಲ್ಲಿ ಜನಿಸಿದವರು.

ಗೋಪಾಲ ಪೂಜಾರಿ ಮತ್ತು ಸುಫಲ ರವರ ಮಗಳಾಗಿ ಜನಿಸಿದ ಇವರು ಪ್ರಾಥಮಿಕ ಶಿಕ್ಷಣವನ್ನು ಅನಾಸ್ ನಲ್ಲಿ ಪ್ರೌಢ ಶಿಕ್ಷಣವನ್ನು ಕಾರ್ಮಲ್ ಶಾಲೆಯಲ್ಲಿ ಪೂರ್ಣಗೊಳಿಸಿದರು.ಹಾಗೆಯೇ ಪಿ.ಯು.ಸಿ.ಯನ್ನು ಸೈಂಟ್ ಅಲೋಶಿಸ್,ಬಯೋಟೆಕ್ನಾಲಜಿ ಎಂಜಿನಿಯರಿಂಗ್ ನ್ನು ನಿಟ್ಟೆ ಮಂಗಳೂರಿನಲ್ಲಿ ಮುಗಿಸಿದರು.

ಅಮೆರಿಕದಲ್ಲಿ 9 ವರುಷದಿಂದ ವಾಸವಾಗಿರುವ ಸುಮಲ್ ಅವರು ಸಂದೀಪ್ ಕೋಟ್ಯಾನ್ ರವರನ್ನು ವಿವಾಹವಾಗಿ ತಮ್ಮ ದಾಂಪತ್ಯ ಜೀವನವನ್ನು ಸಾಗಿಸುತ್ತಿದ್ದಾರೆ.ಹಾಗೆಯೇ ಎರಡು ಮುದ್ದಾದ ಮಕ್ಕಳ ತಾಯಿಯಾಗಿದ್ದಾರೆ.ಹೊಟೇಲ್ ಉದ್ಯಮದಲ್ಲಿ ಅತೀವ ಆಸಕ್ತಿ ಇದ್ದ ಇವರು ಆನಂದ್ ಪೂಜಾರಿಯವರ ಆನಂದ್ ರೆಸ್ಟೋರೆಂಟ್ ನ ಜೊತೆ ಸೇರಿದರು,ಆನಂದ್ ರೆಸ್ಟೋರೆಂಟ್ 4 ಬಾರಿ ಪ್ರಧಾನಿ ಮತ್ತು ಭದ್ರತ ದಳದ ಆತಿಥ್ಯವನ್ನು ವಹಿಸಿಕೊಂಡ ಹೆಮ್ಮೆ ಇವರದು.

ಮೋದಿಯವರು ಸುಮಲ್ ಕೋಟ್ಯಾನ್ ಜೋತೆ ಹಂಚಿಕೊಂಡ ಮಾತು:

ಪ್ರಧಾನಿ ಮೋದಿಯವರು “ಮಗಳೇ” ಎಂದು ಕರೆಯುತ್ತಿದ್ದರಂತೆ, ಖುದ್ದಾಗಿ ಮೋದಿಯವರೇ ಕಳೆದ ಕಾರ್ಯಕ್ರಮದಲ್ಲಿ (2017) ನೀವೇ ಇದ್ದುದು ಅಲ್ಲವೇ ಎಂದು ಕೇಳಿದರಂತೆ. ಹಾಗೆಯೇ ಮಂಗಳೂರು ಎಂದಾಗ ಕರ್ನಾಟಕ ಎಂಬುದನ್ನು ಹೇಳಿದರಂತೆ.

ಒಬ್ಬ ಮಹಿಳೆಯಾಗಿ ಅಷ್ಟು ದೊಡ್ಡ ಕಾರ್ಯಕ್ರಮದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ಕರಾವಳಿಗರ ಪಾಲಿಗೆ ಹೆಮ್ಮೆಯ ವಿಷಯವೇ. ಪ್ರಧಾನಿ ಮೋದಿಯವರ ಸರಳತೆಯನ್ನು ನೇರವಾಗಿ ಕಂಡ ಇವರು,ಇಂತಹ ಅವಕಾಶವನ್ನು ಪಡೆದು ಧನ್ಯನಾದೆ ಎನ್ನುತ್ತಾರೆ.

ವಿಜೇತ್ ಪೂಜಾರಿ ಶಿಬಾಜೆ.

 


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »