TOP STORIES:

FOLLOW US

ಅಮ್ಮ ಹಚ್ಚಿದ ದೀಪಾವಳಿಯ ಹಣತೆ..!! ಬರಹ: ವಿಜೇತ್ ಪೂಜಾರಿ ಶಿಬಾಜೆ


ಬೆಳಗ್ಗೆ ಮಾಡಿದ್ದ ಒಣಗಿದ ರೊಟ್ಟಿಯ ತುಂಡನ್ನು ಸೂರ್ಯ ಇನ್ನೇನೋ ಮುಳುಗುವ ಹಂತಕ್ಕೆ ಬಂದಿದ್ದಾನೆ ಎನ್ನುವ ಅವಸರದಲ್ಲಿ ಕೈಯಲ್ಲಿ ಹಿಡಿದ ಮಗ,ಅದರ ಜೊತೆಗೆ ಬಿಟ್ಟು ಬಿಡದ ಹಾಳಾದ ತಲೆ ನೋವಿಗೆ ಇಳಿ ಸಂಜೆ ಮೂರರ ಹೊತ್ತಿಗೆ ಮಾಡಿದ ತಾಯಿಯ ಕರಿ “ಟೀ”ಯ ಉಳಿದ ಒಂದಿಷ್ಟನ್ನೂ ಕುಡಿಯುತ್ತಾ, ಸೊಟ್ಟಗಿನ ಪಾತ್ರೆಯ ತಳದಲ್ಲಿ ಇದ್ದ ಟೀ ಪುಡಿಯನ್ನು ಬಾಯಿಯಿಂದ ಉಫ್ ಉಫ್ ಎಂದು ಬದಿಗೆ ಸರಿಸಿ ತುಂಡು ರೊಟ್ಟಿಯ ಒಂದು ಭಾಗವನ್ನು ಇನ್ನೇನು ಅದರಲ್ಲಿ ಅದ್ದಿ ಬಾಯಿಗಿಡಬೇಕು ಎನ್ನುವಷ್ಟರಲ್ಲಿ ಅದೇ ಮರುಗಿದ ಧ್ವನಿಯ ಲಯದಲ್ಲಿ ಒಳಗಿಂದ ಕೇಳಿದ ಆ ಮಾತಿಗೆ ಇದ್ದ ರೊಟ್ಟಿಯನ್ನು ಮೂಲೆಯಲ್ಲಿ ಅರ್ಧ ಕಬ್ಬಿನ ಸರಪಳಿ ಮತ್ತು ಗೋಣಿ ಚೀಲದಲ್ಲಿ ಮಾಡಿದ ಹಗ್ಗದಲ್ಲಿ ಬಂಧಿಯಾದ ಟಾಮಿಗೆ ಕೂತಲ್ಲಿಂದ ಎಸೆದು ಬಿಟ್ಟ,ಆ ರೊಟ್ಟಿಯ ತುಂಡು ಪಕ್ಕದಲ್ಲಿ ಬೀಳದೆ ತನ್ನ ಕಾಲು ಮತ್ತು ಕೈಯಿಂದ ಹೇಗೋ ಮಾಡಿ ಮಣ್ಣಿನ ಮುದ್ದೆಯ ಜೊತೆಗೆ ಆ ರೊಟ್ಟಿಯ ತುಂಡನ್ನು ತಿಂದು ಬಿಟ್ಟ..!

ಮತ್ತೇ ಆ ಧ್ವನಿ ಬಿರುಸಾಗಿತ್ತು..

“ನಮ ನರಮನಿ ಲೆಕಾ ಏಪಾ ಆಪನ”(ನಾವು ಯಾವಾಗ ಮನುಷ್ಯರಂತೆ ಆಗುತ್ತಿವೋ).

ಇತ್ತ ಮಗ ಚಂದು ಅದೇನೋ ಟಾಮಿಯನ್ನು ನೋಡುತ್ತಿರುವಾಗ ಮುಂದಿನ ವಾರ ದೀಪಾವಳಿ ಅಲ್ಲವ ಎಂದು ಒಂದು ಸಲ ಆಲೋಚಿಸಿ,ಅಮ್ಮನಲ್ಲಿ “ಅಮ್ಮ ಬರ್ಪುನ ವಾರ ಪರ್ಬ ಅತ”(ಮುಂದಿನ ವಾರ ದೀಪಾವಳಿ ಅಲ್ಲವೇ) ಎಂದು ಬಳಲಿದ ಧ್ವನಿಯಲ್ಲಿ ಇತ್ತ ಹೇಳದಂತೆಯು ಇತ್ತ ಕಡೆ ಕೇಳದಂತೆಯು ಹೇಳಿ ಬಚ್ಚಲು ಮನೆಗೆ ಬಿಸಿ ನೀರು ಕಾಯಿಸಲು ನಿನ್ನೆ ಇಟ್ಟ ಚಿಮಿಣಿ ದೀಪದ ಕಡೆ ಕೈಯಾಡಿಸಿ ಮಸಿ ಬಳಿದ ಆ ದೀಪವನ್ನು ಎತ್ತಿಕೊಂಡು ಹೊರ ನಡೆದನು ಚಂದು..!

ಇತ್ತ ಕಡೆ ಚಂದುನ ಅಮ್ಮ ಒಲೆಯ ಮೇಲೆ ಮೂಲೆಯಲ್ಲಿ ಇದ್ದ ಮಣ್ಣಿನ ಪಾತ್ರೆ ಮಸಿಯಿಂದ ಕಪ್ಪಾಗಿದ್ದನ್ನು ತೊಳೆಯಲು ಎಟುಗದ ಕೈಯಿಂದ ಹೇಗೋ ಕೆಳಗೆ ಇಳಿಸಿ ಹೊರ ನಡೆದಳು.

ಬಚ್ಚಲು ಮನೆ ದಾಟಿ ಸಾಗುವಾಗ “ಒಂದು ಸಿಹಿ ಮಾಡಲು ಒಂದು ಬೆಲ್ಲ ಕೂಡ ಇಲ್ಲಿ ಇಲ್ಲ” ಎಂದು ಗೊಣಗುತ್ತಾ ಹಳೆಯ ಕಲ್ಲಿನ ಮೆಟ್ಟಿಲನ್ನು ದಾಟಿ ತೋಟದ ತೊರೆಯತ್ತ ಸಾಗಿದಳು.ಇತ್ತ ಕಡೆ ಚಂದು ಆ ಮಣ್ಣಿನ ಮಡಿಕೆಯನ್ನು ನೋಡುತ್ತಾ,ಕಳೆದ ಬಾರಿ ಅಕ್ಕ ಗಂಡನ ಮನೆಯಿಂದ ಬಂದಾಗ ರಫೀಕಜ್ಜನ ಅಂಗಡಿಯಿಂದ ತಂದ ಆ ಮಡಿಕೆಯ ಪಾತ್ರೆಗಳು,ಅದರ ಜೊತೆಗೆ ಒಂದಿಷ್ಟೂ ತಂದ ದಿನಸಿಯ ಹಣವನ್ನು ಮೊನ್ನೆ ಮೊನ್ನೆ ಇದ್ದ ಕರಿ ಮೆಣಸನ್ನು ಮಾರಿ ಕೊಟ್ಟು ಬಂದಾಗ,ಕೋಪದಿಂದ ಅಜ್ಜ ಬಾಯಿಗೆ ಬಂದ ಹಾಗೆ ಬೈದು ನೀನು ಇನ್ನು ಇಲ್ಲಿಗೆ ಬರಬೇಡ ಅಂದದ್ದು ಕೂಡ ನೆನಪಾಗಿ ಹೋಯಿತು..!

ಇಂತಹ ಕಷ್ಟದಿಂದ ಇನ್ಯಾವಾಗ ನಾವು ಬರುತ್ತೇವೆ ಎನ್ನುತ್ತಾ,ಈ ದೀಪಾವಳಿಗೂ ಅಕ್ಕಾ ಬರುವಳು ಎನ್ನುವ ಮಾಹಿತಿಯನ್ನೂ ಮೊನ್ನೆ ಮೊನ್ನೆ ಪಕ್ಕದ ಮನೆಯ ಗೌಡರು ಹೇಳಿದ್ದು ನೆನಪಾಯಿತು.!( ಅಲ್ಲಿ ಮಾತ್ರ ದೂರವಾಣಿಯ ಸಂಪರ್ಕ ಇತ್ತು.)

ಇತ್ತ ಕಡೆ ತಾಯಿ ಆ ಪಾತ್ರೆಯನ್ನು ಮೊದಲಿನಂತೆ ಸ್ವಚ್ಚ ಮಾಡಿ ಸುಸ್ತಾದ ದೇಹದಿಂದ ಮೆಟ್ಟಿಲು ಹತ್ತುತ್ತಾ ಮನೆಯ ಒಳಗಡೆ ನಡೆದಳು.

ಯಾವುದೋ ವಸ್ತುವನ್ನು ಹುಡುಕುತ್ತಾ ಸಾಗಿದ ಚಂದುನ ಅಮ್ಮನಿಗೆ ಎಂದೋ ಇಟ್ಟಿದ್ದ “ಹಣತೆ”ಯ ಕಟ್ಟು ಧೋಪ್ಪನೆ ಕೆಳಗೆ ಬಿದ್ದು ಬಿಡ್ತು..!
ಅದರಲ್ಲಿ ಒಡೆಯದೆ ಇದ್ದ ಎರಡೂ ಮೂರು ಹಣತೆಯನ್ನು ತೆಗೆದು ದೇವರ ಪಟದ ಹತ್ತಿರ ಇದ್ದ ನಿನ್ನೆ ಉಳಿದ ಬತ್ತಿಯ ತುಂಡನ್ನು ತೆಗೆದು ಎಣ್ಣೆ ಹಾಕಿ ಹಣತೆಯನ್ನು ಹಚ್ಚಿ ಬಿಟ್ಟಳು..!

ಇತ್ತ ಚಂದು ಆ ಹಣತೆಯ ಬೆಳಕನ್ನು ನೋಡಿ ಏನೋ ಖುಷಿಯಾಗಿ “ಅಮ್ಮ ಹಚ್ಚಿದ ದೀಪಾವಳಿಯ ಹಣತೆ “ಎಂದುಕೊಂಡು,ತೋಟದ ಬದಿಯಲ್ಲಿ ನೆಟ್ಟಿದ್ದ ಮರ ಗೆಣಸು ಎರಡು ಮೂರು ದಿನದಿಂದ ಹಂದಿ ಮತ್ತು ಹೆಗ್ಗಣದ ಬಾಯಿಗೆ ತುತ್ತಾಗಿದ್ದನು ಬೆಳಗ್ಗೆ ಕಂಡಿದ್ದನು.

ಸಿಕ್ಕಿದಷ್ಟು ಸಿಗಲಿ ಎಂಬ ಭಾವದಿಂದ ಹಳೆಯ ಹಾರೆಯನ್ನು ಕೊಟ್ಟಿಗೆಯ ಮೇಲಿಂದ ತೆಗೆದು ಹೆಗಲಿಗೆ ಇರಿಸಿ ಇನ್ನೇನೋ ಕತ್ತಲೆ ಆಗಬೇಕು ಎನ್ನುವ ಸಮಯದಲ್ಲೇ ಹೊರ ನಡೆದನು..

ಬರಹ: ವಿಜೇತ್ ಪೂಜಾರಿ ಶಿಬಾಜೆ


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »