TOP STORIES:

ಅಮ್ಮ ಹಚ್ಚಿದ ದೀಪಾವಳಿಯ ಹಣತೆ..!! ಬರಹ: ವಿಜೇತ್ ಪೂಜಾರಿ ಶಿಬಾಜೆ


ಬೆಳಗ್ಗೆ ಮಾಡಿದ್ದ ಒಣಗಿದ ರೊಟ್ಟಿಯ ತುಂಡನ್ನು ಸೂರ್ಯ ಇನ್ನೇನೋ ಮುಳುಗುವ ಹಂತಕ್ಕೆ ಬಂದಿದ್ದಾನೆ ಎನ್ನುವ ಅವಸರದಲ್ಲಿ ಕೈಯಲ್ಲಿ ಹಿಡಿದ ಮಗ,ಅದರ ಜೊತೆಗೆ ಬಿಟ್ಟು ಬಿಡದ ಹಾಳಾದ ತಲೆ ನೋವಿಗೆ ಇಳಿ ಸಂಜೆ ಮೂರರ ಹೊತ್ತಿಗೆ ಮಾಡಿದ ತಾಯಿಯ ಕರಿ “ಟೀ”ಯ ಉಳಿದ ಒಂದಿಷ್ಟನ್ನೂ ಕುಡಿಯುತ್ತಾ, ಸೊಟ್ಟಗಿನ ಪಾತ್ರೆಯ ತಳದಲ್ಲಿ ಇದ್ದ ಟೀ ಪುಡಿಯನ್ನು ಬಾಯಿಯಿಂದ ಉಫ್ ಉಫ್ ಎಂದು ಬದಿಗೆ ಸರಿಸಿ ತುಂಡು ರೊಟ್ಟಿಯ ಒಂದು ಭಾಗವನ್ನು ಇನ್ನೇನು ಅದರಲ್ಲಿ ಅದ್ದಿ ಬಾಯಿಗಿಡಬೇಕು ಎನ್ನುವಷ್ಟರಲ್ಲಿ ಅದೇ ಮರುಗಿದ ಧ್ವನಿಯ ಲಯದಲ್ಲಿ ಒಳಗಿಂದ ಕೇಳಿದ ಆ ಮಾತಿಗೆ ಇದ್ದ ರೊಟ್ಟಿಯನ್ನು ಮೂಲೆಯಲ್ಲಿ ಅರ್ಧ ಕಬ್ಬಿನ ಸರಪಳಿ ಮತ್ತು ಗೋಣಿ ಚೀಲದಲ್ಲಿ ಮಾಡಿದ ಹಗ್ಗದಲ್ಲಿ ಬಂಧಿಯಾದ ಟಾಮಿಗೆ ಕೂತಲ್ಲಿಂದ ಎಸೆದು ಬಿಟ್ಟ,ಆ ರೊಟ್ಟಿಯ ತುಂಡು ಪಕ್ಕದಲ್ಲಿ ಬೀಳದೆ ತನ್ನ ಕಾಲು ಮತ್ತು ಕೈಯಿಂದ ಹೇಗೋ ಮಾಡಿ ಮಣ್ಣಿನ ಮುದ್ದೆಯ ಜೊತೆಗೆ ಆ ರೊಟ್ಟಿಯ ತುಂಡನ್ನು ತಿಂದು ಬಿಟ್ಟ..!

ಮತ್ತೇ ಆ ಧ್ವನಿ ಬಿರುಸಾಗಿತ್ತು..

“ನಮ ನರಮನಿ ಲೆಕಾ ಏಪಾ ಆಪನ”(ನಾವು ಯಾವಾಗ ಮನುಷ್ಯರಂತೆ ಆಗುತ್ತಿವೋ).

ಇತ್ತ ಮಗ ಚಂದು ಅದೇನೋ ಟಾಮಿಯನ್ನು ನೋಡುತ್ತಿರುವಾಗ ಮುಂದಿನ ವಾರ ದೀಪಾವಳಿ ಅಲ್ಲವ ಎಂದು ಒಂದು ಸಲ ಆಲೋಚಿಸಿ,ಅಮ್ಮನಲ್ಲಿ “ಅಮ್ಮ ಬರ್ಪುನ ವಾರ ಪರ್ಬ ಅತ”(ಮುಂದಿನ ವಾರ ದೀಪಾವಳಿ ಅಲ್ಲವೇ) ಎಂದು ಬಳಲಿದ ಧ್ವನಿಯಲ್ಲಿ ಇತ್ತ ಹೇಳದಂತೆಯು ಇತ್ತ ಕಡೆ ಕೇಳದಂತೆಯು ಹೇಳಿ ಬಚ್ಚಲು ಮನೆಗೆ ಬಿಸಿ ನೀರು ಕಾಯಿಸಲು ನಿನ್ನೆ ಇಟ್ಟ ಚಿಮಿಣಿ ದೀಪದ ಕಡೆ ಕೈಯಾಡಿಸಿ ಮಸಿ ಬಳಿದ ಆ ದೀಪವನ್ನು ಎತ್ತಿಕೊಂಡು ಹೊರ ನಡೆದನು ಚಂದು..!

ಇತ್ತ ಕಡೆ ಚಂದುನ ಅಮ್ಮ ಒಲೆಯ ಮೇಲೆ ಮೂಲೆಯಲ್ಲಿ ಇದ್ದ ಮಣ್ಣಿನ ಪಾತ್ರೆ ಮಸಿಯಿಂದ ಕಪ್ಪಾಗಿದ್ದನ್ನು ತೊಳೆಯಲು ಎಟುಗದ ಕೈಯಿಂದ ಹೇಗೋ ಕೆಳಗೆ ಇಳಿಸಿ ಹೊರ ನಡೆದಳು.

ಬಚ್ಚಲು ಮನೆ ದಾಟಿ ಸಾಗುವಾಗ “ಒಂದು ಸಿಹಿ ಮಾಡಲು ಒಂದು ಬೆಲ್ಲ ಕೂಡ ಇಲ್ಲಿ ಇಲ್ಲ” ಎಂದು ಗೊಣಗುತ್ತಾ ಹಳೆಯ ಕಲ್ಲಿನ ಮೆಟ್ಟಿಲನ್ನು ದಾಟಿ ತೋಟದ ತೊರೆಯತ್ತ ಸಾಗಿದಳು.ಇತ್ತ ಕಡೆ ಚಂದು ಆ ಮಣ್ಣಿನ ಮಡಿಕೆಯನ್ನು ನೋಡುತ್ತಾ,ಕಳೆದ ಬಾರಿ ಅಕ್ಕ ಗಂಡನ ಮನೆಯಿಂದ ಬಂದಾಗ ರಫೀಕಜ್ಜನ ಅಂಗಡಿಯಿಂದ ತಂದ ಆ ಮಡಿಕೆಯ ಪಾತ್ರೆಗಳು,ಅದರ ಜೊತೆಗೆ ಒಂದಿಷ್ಟೂ ತಂದ ದಿನಸಿಯ ಹಣವನ್ನು ಮೊನ್ನೆ ಮೊನ್ನೆ ಇದ್ದ ಕರಿ ಮೆಣಸನ್ನು ಮಾರಿ ಕೊಟ್ಟು ಬಂದಾಗ,ಕೋಪದಿಂದ ಅಜ್ಜ ಬಾಯಿಗೆ ಬಂದ ಹಾಗೆ ಬೈದು ನೀನು ಇನ್ನು ಇಲ್ಲಿಗೆ ಬರಬೇಡ ಅಂದದ್ದು ಕೂಡ ನೆನಪಾಗಿ ಹೋಯಿತು..!

ಇಂತಹ ಕಷ್ಟದಿಂದ ಇನ್ಯಾವಾಗ ನಾವು ಬರುತ್ತೇವೆ ಎನ್ನುತ್ತಾ,ಈ ದೀಪಾವಳಿಗೂ ಅಕ್ಕಾ ಬರುವಳು ಎನ್ನುವ ಮಾಹಿತಿಯನ್ನೂ ಮೊನ್ನೆ ಮೊನ್ನೆ ಪಕ್ಕದ ಮನೆಯ ಗೌಡರು ಹೇಳಿದ್ದು ನೆನಪಾಯಿತು.!( ಅಲ್ಲಿ ಮಾತ್ರ ದೂರವಾಣಿಯ ಸಂಪರ್ಕ ಇತ್ತು.)

ಇತ್ತ ಕಡೆ ತಾಯಿ ಆ ಪಾತ್ರೆಯನ್ನು ಮೊದಲಿನಂತೆ ಸ್ವಚ್ಚ ಮಾಡಿ ಸುಸ್ತಾದ ದೇಹದಿಂದ ಮೆಟ್ಟಿಲು ಹತ್ತುತ್ತಾ ಮನೆಯ ಒಳಗಡೆ ನಡೆದಳು.

ಯಾವುದೋ ವಸ್ತುವನ್ನು ಹುಡುಕುತ್ತಾ ಸಾಗಿದ ಚಂದುನ ಅಮ್ಮನಿಗೆ ಎಂದೋ ಇಟ್ಟಿದ್ದ “ಹಣತೆ”ಯ ಕಟ್ಟು ಧೋಪ್ಪನೆ ಕೆಳಗೆ ಬಿದ್ದು ಬಿಡ್ತು..!
ಅದರಲ್ಲಿ ಒಡೆಯದೆ ಇದ್ದ ಎರಡೂ ಮೂರು ಹಣತೆಯನ್ನು ತೆಗೆದು ದೇವರ ಪಟದ ಹತ್ತಿರ ಇದ್ದ ನಿನ್ನೆ ಉಳಿದ ಬತ್ತಿಯ ತುಂಡನ್ನು ತೆಗೆದು ಎಣ್ಣೆ ಹಾಕಿ ಹಣತೆಯನ್ನು ಹಚ್ಚಿ ಬಿಟ್ಟಳು..!

ಇತ್ತ ಚಂದು ಆ ಹಣತೆಯ ಬೆಳಕನ್ನು ನೋಡಿ ಏನೋ ಖುಷಿಯಾಗಿ “ಅಮ್ಮ ಹಚ್ಚಿದ ದೀಪಾವಳಿಯ ಹಣತೆ “ಎಂದುಕೊಂಡು,ತೋಟದ ಬದಿಯಲ್ಲಿ ನೆಟ್ಟಿದ್ದ ಮರ ಗೆಣಸು ಎರಡು ಮೂರು ದಿನದಿಂದ ಹಂದಿ ಮತ್ತು ಹೆಗ್ಗಣದ ಬಾಯಿಗೆ ತುತ್ತಾಗಿದ್ದನು ಬೆಳಗ್ಗೆ ಕಂಡಿದ್ದನು.

ಸಿಕ್ಕಿದಷ್ಟು ಸಿಗಲಿ ಎಂಬ ಭಾವದಿಂದ ಹಳೆಯ ಹಾರೆಯನ್ನು ಕೊಟ್ಟಿಗೆಯ ಮೇಲಿಂದ ತೆಗೆದು ಹೆಗಲಿಗೆ ಇರಿಸಿ ಇನ್ನೇನೋ ಕತ್ತಲೆ ಆಗಬೇಕು ಎನ್ನುವ ಸಮಯದಲ್ಲೇ ಹೊರ ನಡೆದನು..

ಬರಹ: ವಿಜೇತ್ ಪೂಜಾರಿ ಶಿಬಾಜೆ


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »