TOP STORIES:

ಅಮ್ಮ ಹಚ್ಚಿದ ದೀಪಾವಳಿಯ ಹಣತೆ..!! ಬರಹ: ವಿಜೇತ್ ಪೂಜಾರಿ ಶಿಬಾಜೆ


ಬೆಳಗ್ಗೆ ಮಾಡಿದ್ದ ಒಣಗಿದ ರೊಟ್ಟಿಯ ತುಂಡನ್ನು ಸೂರ್ಯ ಇನ್ನೇನೋ ಮುಳುಗುವ ಹಂತಕ್ಕೆ ಬಂದಿದ್ದಾನೆ ಎನ್ನುವ ಅವಸರದಲ್ಲಿ ಕೈಯಲ್ಲಿ ಹಿಡಿದ ಮಗ,ಅದರ ಜೊತೆಗೆ ಬಿಟ್ಟು ಬಿಡದ ಹಾಳಾದ ತಲೆ ನೋವಿಗೆ ಇಳಿ ಸಂಜೆ ಮೂರರ ಹೊತ್ತಿಗೆ ಮಾಡಿದ ತಾಯಿಯ ಕರಿ “ಟೀ”ಯ ಉಳಿದ ಒಂದಿಷ್ಟನ್ನೂ ಕುಡಿಯುತ್ತಾ, ಸೊಟ್ಟಗಿನ ಪಾತ್ರೆಯ ತಳದಲ್ಲಿ ಇದ್ದ ಟೀ ಪುಡಿಯನ್ನು ಬಾಯಿಯಿಂದ ಉಫ್ ಉಫ್ ಎಂದು ಬದಿಗೆ ಸರಿಸಿ ತುಂಡು ರೊಟ್ಟಿಯ ಒಂದು ಭಾಗವನ್ನು ಇನ್ನೇನು ಅದರಲ್ಲಿ ಅದ್ದಿ ಬಾಯಿಗಿಡಬೇಕು ಎನ್ನುವಷ್ಟರಲ್ಲಿ ಅದೇ ಮರುಗಿದ ಧ್ವನಿಯ ಲಯದಲ್ಲಿ ಒಳಗಿಂದ ಕೇಳಿದ ಆ ಮಾತಿಗೆ ಇದ್ದ ರೊಟ್ಟಿಯನ್ನು ಮೂಲೆಯಲ್ಲಿ ಅರ್ಧ ಕಬ್ಬಿನ ಸರಪಳಿ ಮತ್ತು ಗೋಣಿ ಚೀಲದಲ್ಲಿ ಮಾಡಿದ ಹಗ್ಗದಲ್ಲಿ ಬಂಧಿಯಾದ ಟಾಮಿಗೆ ಕೂತಲ್ಲಿಂದ ಎಸೆದು ಬಿಟ್ಟ,ಆ ರೊಟ್ಟಿಯ ತುಂಡು ಪಕ್ಕದಲ್ಲಿ ಬೀಳದೆ ತನ್ನ ಕಾಲು ಮತ್ತು ಕೈಯಿಂದ ಹೇಗೋ ಮಾಡಿ ಮಣ್ಣಿನ ಮುದ್ದೆಯ ಜೊತೆಗೆ ಆ ರೊಟ್ಟಿಯ ತುಂಡನ್ನು ತಿಂದು ಬಿಟ್ಟ..!

ಮತ್ತೇ ಆ ಧ್ವನಿ ಬಿರುಸಾಗಿತ್ತು..

“ನಮ ನರಮನಿ ಲೆಕಾ ಏಪಾ ಆಪನ”(ನಾವು ಯಾವಾಗ ಮನುಷ್ಯರಂತೆ ಆಗುತ್ತಿವೋ).

ಇತ್ತ ಮಗ ಚಂದು ಅದೇನೋ ಟಾಮಿಯನ್ನು ನೋಡುತ್ತಿರುವಾಗ ಮುಂದಿನ ವಾರ ದೀಪಾವಳಿ ಅಲ್ಲವ ಎಂದು ಒಂದು ಸಲ ಆಲೋಚಿಸಿ,ಅಮ್ಮನಲ್ಲಿ “ಅಮ್ಮ ಬರ್ಪುನ ವಾರ ಪರ್ಬ ಅತ”(ಮುಂದಿನ ವಾರ ದೀಪಾವಳಿ ಅಲ್ಲವೇ) ಎಂದು ಬಳಲಿದ ಧ್ವನಿಯಲ್ಲಿ ಇತ್ತ ಹೇಳದಂತೆಯು ಇತ್ತ ಕಡೆ ಕೇಳದಂತೆಯು ಹೇಳಿ ಬಚ್ಚಲು ಮನೆಗೆ ಬಿಸಿ ನೀರು ಕಾಯಿಸಲು ನಿನ್ನೆ ಇಟ್ಟ ಚಿಮಿಣಿ ದೀಪದ ಕಡೆ ಕೈಯಾಡಿಸಿ ಮಸಿ ಬಳಿದ ಆ ದೀಪವನ್ನು ಎತ್ತಿಕೊಂಡು ಹೊರ ನಡೆದನು ಚಂದು..!

ಇತ್ತ ಕಡೆ ಚಂದುನ ಅಮ್ಮ ಒಲೆಯ ಮೇಲೆ ಮೂಲೆಯಲ್ಲಿ ಇದ್ದ ಮಣ್ಣಿನ ಪಾತ್ರೆ ಮಸಿಯಿಂದ ಕಪ್ಪಾಗಿದ್ದನ್ನು ತೊಳೆಯಲು ಎಟುಗದ ಕೈಯಿಂದ ಹೇಗೋ ಕೆಳಗೆ ಇಳಿಸಿ ಹೊರ ನಡೆದಳು.

ಬಚ್ಚಲು ಮನೆ ದಾಟಿ ಸಾಗುವಾಗ “ಒಂದು ಸಿಹಿ ಮಾಡಲು ಒಂದು ಬೆಲ್ಲ ಕೂಡ ಇಲ್ಲಿ ಇಲ್ಲ” ಎಂದು ಗೊಣಗುತ್ತಾ ಹಳೆಯ ಕಲ್ಲಿನ ಮೆಟ್ಟಿಲನ್ನು ದಾಟಿ ತೋಟದ ತೊರೆಯತ್ತ ಸಾಗಿದಳು.ಇತ್ತ ಕಡೆ ಚಂದು ಆ ಮಣ್ಣಿನ ಮಡಿಕೆಯನ್ನು ನೋಡುತ್ತಾ,ಕಳೆದ ಬಾರಿ ಅಕ್ಕ ಗಂಡನ ಮನೆಯಿಂದ ಬಂದಾಗ ರಫೀಕಜ್ಜನ ಅಂಗಡಿಯಿಂದ ತಂದ ಆ ಮಡಿಕೆಯ ಪಾತ್ರೆಗಳು,ಅದರ ಜೊತೆಗೆ ಒಂದಿಷ್ಟೂ ತಂದ ದಿನಸಿಯ ಹಣವನ್ನು ಮೊನ್ನೆ ಮೊನ್ನೆ ಇದ್ದ ಕರಿ ಮೆಣಸನ್ನು ಮಾರಿ ಕೊಟ್ಟು ಬಂದಾಗ,ಕೋಪದಿಂದ ಅಜ್ಜ ಬಾಯಿಗೆ ಬಂದ ಹಾಗೆ ಬೈದು ನೀನು ಇನ್ನು ಇಲ್ಲಿಗೆ ಬರಬೇಡ ಅಂದದ್ದು ಕೂಡ ನೆನಪಾಗಿ ಹೋಯಿತು..!

ಇಂತಹ ಕಷ್ಟದಿಂದ ಇನ್ಯಾವಾಗ ನಾವು ಬರುತ್ತೇವೆ ಎನ್ನುತ್ತಾ,ಈ ದೀಪಾವಳಿಗೂ ಅಕ್ಕಾ ಬರುವಳು ಎನ್ನುವ ಮಾಹಿತಿಯನ್ನೂ ಮೊನ್ನೆ ಮೊನ್ನೆ ಪಕ್ಕದ ಮನೆಯ ಗೌಡರು ಹೇಳಿದ್ದು ನೆನಪಾಯಿತು.!( ಅಲ್ಲಿ ಮಾತ್ರ ದೂರವಾಣಿಯ ಸಂಪರ್ಕ ಇತ್ತು.)

ಇತ್ತ ಕಡೆ ತಾಯಿ ಆ ಪಾತ್ರೆಯನ್ನು ಮೊದಲಿನಂತೆ ಸ್ವಚ್ಚ ಮಾಡಿ ಸುಸ್ತಾದ ದೇಹದಿಂದ ಮೆಟ್ಟಿಲು ಹತ್ತುತ್ತಾ ಮನೆಯ ಒಳಗಡೆ ನಡೆದಳು.

ಯಾವುದೋ ವಸ್ತುವನ್ನು ಹುಡುಕುತ್ತಾ ಸಾಗಿದ ಚಂದುನ ಅಮ್ಮನಿಗೆ ಎಂದೋ ಇಟ್ಟಿದ್ದ “ಹಣತೆ”ಯ ಕಟ್ಟು ಧೋಪ್ಪನೆ ಕೆಳಗೆ ಬಿದ್ದು ಬಿಡ್ತು..!
ಅದರಲ್ಲಿ ಒಡೆಯದೆ ಇದ್ದ ಎರಡೂ ಮೂರು ಹಣತೆಯನ್ನು ತೆಗೆದು ದೇವರ ಪಟದ ಹತ್ತಿರ ಇದ್ದ ನಿನ್ನೆ ಉಳಿದ ಬತ್ತಿಯ ತುಂಡನ್ನು ತೆಗೆದು ಎಣ್ಣೆ ಹಾಕಿ ಹಣತೆಯನ್ನು ಹಚ್ಚಿ ಬಿಟ್ಟಳು..!

ಇತ್ತ ಚಂದು ಆ ಹಣತೆಯ ಬೆಳಕನ್ನು ನೋಡಿ ಏನೋ ಖುಷಿಯಾಗಿ “ಅಮ್ಮ ಹಚ್ಚಿದ ದೀಪಾವಳಿಯ ಹಣತೆ “ಎಂದುಕೊಂಡು,ತೋಟದ ಬದಿಯಲ್ಲಿ ನೆಟ್ಟಿದ್ದ ಮರ ಗೆಣಸು ಎರಡು ಮೂರು ದಿನದಿಂದ ಹಂದಿ ಮತ್ತು ಹೆಗ್ಗಣದ ಬಾಯಿಗೆ ತುತ್ತಾಗಿದ್ದನು ಬೆಳಗ್ಗೆ ಕಂಡಿದ್ದನು.

ಸಿಕ್ಕಿದಷ್ಟು ಸಿಗಲಿ ಎಂಬ ಭಾವದಿಂದ ಹಳೆಯ ಹಾರೆಯನ್ನು ಕೊಟ್ಟಿಗೆಯ ಮೇಲಿಂದ ತೆಗೆದು ಹೆಗಲಿಗೆ ಇರಿಸಿ ಇನ್ನೇನೋ ಕತ್ತಲೆ ಆಗಬೇಕು ಎನ್ನುವ ಸಮಯದಲ್ಲೇ ಹೊರ ನಡೆದನು..

ಬರಹ: ವಿಜೇತ್ ಪೂಜಾರಿ ಶಿಬಾಜೆ


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »