TOP STORIES:

FOLLOW US

ಅರ್ಹ ಮಗುವಿಗೆ ಗುರುಬೆಳದಿಂಗಳು(ರಿ) ಕುದ್ರೋಳಿ ಮೂಲಕ ಶ್ರವಣ ಯಂತ್ರ ಕೊಡುಗೆ


ಸತೀಶ್ ಪೂಜಾರಿ ಬೆಳಪು, ದುಬೈ ಪಿತೃಶ್ರೀ ದಿ|ಸೂರು ಪೂಜಾರಿ ಪುಣ್ಯತಿಥಿ ಸ್ಮರಣಾರ್ಥ ಸಮಾಜಮುಖಿ ಕೊಡುಗೆ

ಸುಂದರ ಜೀವನ, ಜೀವನಕ್ಕಾಗಿ ದಾರಿ, ದಾರಿಗಾಗಿ ಕನಸು, ಕನಸಿಗಾಗಿ ಬದುಕು. ಎಲ್ಲವನ್ನು ರೂಪಿಸುವುದು ನಮ್ಮ ದೇಹ, ದೇಹದ ಪ್ರತಿಯೊಂದು ಅಂಗಗಳು , ಜ್ಞಾನೇಂದ್ರಿಯಗಳು ನಮ್ಮ ಜೀವನವನ್ನು ರೂಪಿಸುವ ಅಂಶವಾಗಿದೆ. ನೋವು, ಕಷ್ಟಗಳು ನಮ್ಮ ಜೀವಕ್ಕೆ ಮತ್ತು ಜೀವನಕ್ಕೆ ಯಾವ ಸಂದರ್ಭದಲ್ಲಿಯೂ, ಯಾವ ರೂಪದಲ್ಲಿಯೂ ಬರಬಹುದು. ಅದನ್ನು ನಿರ್ಣಯಿಸುವುದು ಸಮಯ. ಅದಕ್ಕೆ ವಯಸ್ಸಿನ ಅಂತರವಿಲ್ಲ ಜಾತಿಯ ಬೇಧವಿಲ್ಲ.

ಅಂಗಗಳ ನ್ಯೂನ್ಯತೆ ಬಂದಾಗ ಹತ್ತಿರದವರು ದೂರವಾಗುವುದು ಸಹಜ ಮತ್ತು ಅದನ್ನು ಸರಿಪಡಿಸುವುದು ಕಠಿಣ. ಈ ರೀತಿ ಸಮಸ್ಯೆಯೊಂದಿಗೆ ಮೂಲ್ಕಿಯ ಒಂದು ಪುಟ್ಟ ದ್ವೀಪದಲ್ಲಿ ಹುಟ್ಟಿದ ಮಗು ಶೌರ್ಯ. ಸುಂದರ ಮುಖ, ಮುಖದಲ್ಲಿ ನಿಷ್ಕಲ್ಮಶ ನಗು ಮತ್ತು ಶ್ರವಣ ಸಮಸ್ಯೆ. ಹುಟ್ಟಿದ ಮಗುವಿಗೆ ತನ್ನ ಒಂದು ವರ್ಷದ ಜೀವನದಲ್ಲಿ ಸಿಕ್ಕಿದ್ದು ಬಡತನ, ಕಂಡಿದ್ದು ತಂದೆಯ ಮರಣ, ತಾಯಿಯ ದುಃಖ ಕೇಳಿದ್ದು ಶೂನ್ಯ. ತಾಯಿ ಆಸ್ಪತ್ರೆಗೆ ಹೋದಾಗ ವೈದ್ಯರು ನೀಡಿದ್ದು 54000 ರೂ. ವೆಚ್ಚದ ಕಿವಿಯ ಯಂತ್ರ, ಮಾತಿನ ತರಬೇತಿಯ ಸಲಹೆ. ಅದು ಸಾಧ್ಯವಿಲ್ಲದ್ದಾಗ ಆ ತಾಯಿಯ ದಿಕ್ಕೇ ತೋಚದ ಭಾವ.

ಜೀವನವಿಡೀ ನೋವಿನ ಚೀಲವಾಗಿರುವಾಗ ನಂಬಿಕೆ ಮಾತ್ರ ಬದುಕಲು ದಾರಿ ತೋರುತ್ತದೆ. ಆದರೆ ಆ ನಂಬಿಕೆಯ ಹಸ್ತ ಮಾತ್ರ ವಿರಳವಾಗಿರುತ್ತದೆ. ಆ ನೊಂದ ತಾಯಿ ಮತ್ತು ಶೌರ್ಯನಿಗೆ ನಂಬಿಕೆಯ ಹಸ್ತವಾಗಿದ್ದು, ನಾರಾಯಣ ಗುರುಗಳ ಧ್ಯೇಯ ಹಾಗೂ ವಿಚಾರದಂತೆ ಕಾರ್ಯ ನಿರ್ವಹಿಸುತ್ತಿರುವ ಗುರುಬೆಳದಿಂಗಳು (ರಿ.) ಕುದ್ರೋಳಿ ಸಂಸ್ಥೆಯ ಪ್ರಮುಖ ದಾನಿಗಳಲ್ಲೋರ್ವರಾದ ಸದಾಕಾಲ ನೊಂದವರ ಮನಕ್ಕೆ ಸಾಂತ್ವನ ನೀಡುವ ಹಂಬಲವುಳ್ಳ, ಸಹೃದಯಿ ಸಮಾಜ ಸೇವಕ, ಕೊಡುಗೈ ದಾನಿ ಸತೀಶ್ ಪೂಜಾರಿ ಬೆಳಪು, ದುಬೈ ಇವರ ಪೂಜ್ಯ ತಂದೆಯವರಾದ ದಿ| ಸೂರು ಪೂಜಾರಿ ಇವರ ಪುಣ್ಯತಿಥಿಯ ಸ್ಮರಣಾರ್ಥ ಪುಟ್ಟ ಮಗು ಶೌರ್ಯನಿಗೆ ಶ್ರವಣ ಯಂತ್ರ ನೀಡುವ ಸಾರ್ಥಕ ಸೇವಾಕಾರ್ಯದ ಮೂಲಕ ತಮ್ಮ ಪಿತೃಶ್ರೀಯವರ ಹೆಸರು ಚಿರಕಾಲ ನೆನೆಯುವಂತೆ ಪುಣ್ಯತಿಥಿ ಆಚರಿಸಿದರು.

ಎರಡು ಜೀವನಕ್ಕೆ, ಎರಡು ಕನಸುಗಳಿಗೆ ಕಿವಿಕೊಟ್ಟು ಶೌರ್ಯನಿಗೆ ಆಧುನಿಕ ಯಂತ್ರ ನೀಡಿದ ದಾನಿಗಳಿಗೆ ನಾವು ಅಭಾರಿಯಾಗಿರುತ್ತೇವೆ.
ಮಗುವಿಗೆ ಇನ್ನೂ ಜೀವವಿದೆ, ಎಲ್ಲರಂತೆ ಓದುವ, ಬರೆಯುವ, ಕಲಿಯುವ ಅವಕಾಶವಿದೆ ಎಂದು ತೋರಿಸಿಕೊಟ್ಟ ದಾನಿಗಳಿಗೆ ಹೃದಯ ಪೂರ್ವಕ ಧನ್ಯವಾದಗಳು. ನೀಡಿದ ನೆರವು ಮುಂದೊಂದು ದಿನ ಮರವಾಗಿ ಸಿಹಿಯಾದ ಫಲ ನಿಮ್ಮ ಮುಂದಿರುತ್ತದೆ ಎಂಬುದು ನಮ್ಮ ನಂಬಿಕೆ ಮತ್ತು ಆಶಯ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »