TOP STORIES:

ಅರ್ಹ ಮಗುವಿಗೆ ಗುರುಬೆಳದಿಂಗಳು(ರಿ) ಕುದ್ರೋಳಿ ಮೂಲಕ ಶ್ರವಣ ಯಂತ್ರ ಕೊಡುಗೆ


ಸತೀಶ್ ಪೂಜಾರಿ ಬೆಳಪು, ದುಬೈ ಪಿತೃಶ್ರೀ ದಿ|ಸೂರು ಪೂಜಾರಿ ಪುಣ್ಯತಿಥಿ ಸ್ಮರಣಾರ್ಥ ಸಮಾಜಮುಖಿ ಕೊಡುಗೆ

ಸುಂದರ ಜೀವನ, ಜೀವನಕ್ಕಾಗಿ ದಾರಿ, ದಾರಿಗಾಗಿ ಕನಸು, ಕನಸಿಗಾಗಿ ಬದುಕು. ಎಲ್ಲವನ್ನು ರೂಪಿಸುವುದು ನಮ್ಮ ದೇಹ, ದೇಹದ ಪ್ರತಿಯೊಂದು ಅಂಗಗಳು , ಜ್ಞಾನೇಂದ್ರಿಯಗಳು ನಮ್ಮ ಜೀವನವನ್ನು ರೂಪಿಸುವ ಅಂಶವಾಗಿದೆ. ನೋವು, ಕಷ್ಟಗಳು ನಮ್ಮ ಜೀವಕ್ಕೆ ಮತ್ತು ಜೀವನಕ್ಕೆ ಯಾವ ಸಂದರ್ಭದಲ್ಲಿಯೂ, ಯಾವ ರೂಪದಲ್ಲಿಯೂ ಬರಬಹುದು. ಅದನ್ನು ನಿರ್ಣಯಿಸುವುದು ಸಮಯ. ಅದಕ್ಕೆ ವಯಸ್ಸಿನ ಅಂತರವಿಲ್ಲ ಜಾತಿಯ ಬೇಧವಿಲ್ಲ.

ಅಂಗಗಳ ನ್ಯೂನ್ಯತೆ ಬಂದಾಗ ಹತ್ತಿರದವರು ದೂರವಾಗುವುದು ಸಹಜ ಮತ್ತು ಅದನ್ನು ಸರಿಪಡಿಸುವುದು ಕಠಿಣ. ಈ ರೀತಿ ಸಮಸ್ಯೆಯೊಂದಿಗೆ ಮೂಲ್ಕಿಯ ಒಂದು ಪುಟ್ಟ ದ್ವೀಪದಲ್ಲಿ ಹುಟ್ಟಿದ ಮಗು ಶೌರ್ಯ. ಸುಂದರ ಮುಖ, ಮುಖದಲ್ಲಿ ನಿಷ್ಕಲ್ಮಶ ನಗು ಮತ್ತು ಶ್ರವಣ ಸಮಸ್ಯೆ. ಹುಟ್ಟಿದ ಮಗುವಿಗೆ ತನ್ನ ಒಂದು ವರ್ಷದ ಜೀವನದಲ್ಲಿ ಸಿಕ್ಕಿದ್ದು ಬಡತನ, ಕಂಡಿದ್ದು ತಂದೆಯ ಮರಣ, ತಾಯಿಯ ದುಃಖ ಕೇಳಿದ್ದು ಶೂನ್ಯ. ತಾಯಿ ಆಸ್ಪತ್ರೆಗೆ ಹೋದಾಗ ವೈದ್ಯರು ನೀಡಿದ್ದು 54000 ರೂ. ವೆಚ್ಚದ ಕಿವಿಯ ಯಂತ್ರ, ಮಾತಿನ ತರಬೇತಿಯ ಸಲಹೆ. ಅದು ಸಾಧ್ಯವಿಲ್ಲದ್ದಾಗ ಆ ತಾಯಿಯ ದಿಕ್ಕೇ ತೋಚದ ಭಾವ.

ಜೀವನವಿಡೀ ನೋವಿನ ಚೀಲವಾಗಿರುವಾಗ ನಂಬಿಕೆ ಮಾತ್ರ ಬದುಕಲು ದಾರಿ ತೋರುತ್ತದೆ. ಆದರೆ ಆ ನಂಬಿಕೆಯ ಹಸ್ತ ಮಾತ್ರ ವಿರಳವಾಗಿರುತ್ತದೆ. ಆ ನೊಂದ ತಾಯಿ ಮತ್ತು ಶೌರ್ಯನಿಗೆ ನಂಬಿಕೆಯ ಹಸ್ತವಾಗಿದ್ದು, ನಾರಾಯಣ ಗುರುಗಳ ಧ್ಯೇಯ ಹಾಗೂ ವಿಚಾರದಂತೆ ಕಾರ್ಯ ನಿರ್ವಹಿಸುತ್ತಿರುವ ಗುರುಬೆಳದಿಂಗಳು (ರಿ.) ಕುದ್ರೋಳಿ ಸಂಸ್ಥೆಯ ಪ್ರಮುಖ ದಾನಿಗಳಲ್ಲೋರ್ವರಾದ ಸದಾಕಾಲ ನೊಂದವರ ಮನಕ್ಕೆ ಸಾಂತ್ವನ ನೀಡುವ ಹಂಬಲವುಳ್ಳ, ಸಹೃದಯಿ ಸಮಾಜ ಸೇವಕ, ಕೊಡುಗೈ ದಾನಿ ಸತೀಶ್ ಪೂಜಾರಿ ಬೆಳಪು, ದುಬೈ ಇವರ ಪೂಜ್ಯ ತಂದೆಯವರಾದ ದಿ| ಸೂರು ಪೂಜಾರಿ ಇವರ ಪುಣ್ಯತಿಥಿಯ ಸ್ಮರಣಾರ್ಥ ಪುಟ್ಟ ಮಗು ಶೌರ್ಯನಿಗೆ ಶ್ರವಣ ಯಂತ್ರ ನೀಡುವ ಸಾರ್ಥಕ ಸೇವಾಕಾರ್ಯದ ಮೂಲಕ ತಮ್ಮ ಪಿತೃಶ್ರೀಯವರ ಹೆಸರು ಚಿರಕಾಲ ನೆನೆಯುವಂತೆ ಪುಣ್ಯತಿಥಿ ಆಚರಿಸಿದರು.

ಎರಡು ಜೀವನಕ್ಕೆ, ಎರಡು ಕನಸುಗಳಿಗೆ ಕಿವಿಕೊಟ್ಟು ಶೌರ್ಯನಿಗೆ ಆಧುನಿಕ ಯಂತ್ರ ನೀಡಿದ ದಾನಿಗಳಿಗೆ ನಾವು ಅಭಾರಿಯಾಗಿರುತ್ತೇವೆ.
ಮಗುವಿಗೆ ಇನ್ನೂ ಜೀವವಿದೆ, ಎಲ್ಲರಂತೆ ಓದುವ, ಬರೆಯುವ, ಕಲಿಯುವ ಅವಕಾಶವಿದೆ ಎಂದು ತೋರಿಸಿಕೊಟ್ಟ ದಾನಿಗಳಿಗೆ ಹೃದಯ ಪೂರ್ವಕ ಧನ್ಯವಾದಗಳು. ನೀಡಿದ ನೆರವು ಮುಂದೊಂದು ದಿನ ಮರವಾಗಿ ಸಿಹಿಯಾದ ಫಲ ನಿಮ್ಮ ಮುಂದಿರುತ್ತದೆ ಎಂಬುದು ನಮ್ಮ ನಂಬಿಕೆ ಮತ್ತು ಆಶಯ.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »