TOP STORIES:

ಅರ್ಹ ಮಗುವಿಗೆ ಗುರುಬೆಳದಿಂಗಳು(ರಿ) ಕುದ್ರೋಳಿ ಮೂಲಕ ಶ್ರವಣ ಯಂತ್ರ ಕೊಡುಗೆ


ಸತೀಶ್ ಪೂಜಾರಿ ಬೆಳಪು, ದುಬೈ ಪಿತೃಶ್ರೀ ದಿ|ಸೂರು ಪೂಜಾರಿ ಪುಣ್ಯತಿಥಿ ಸ್ಮರಣಾರ್ಥ ಸಮಾಜಮುಖಿ ಕೊಡುಗೆ

ಸುಂದರ ಜೀವನ, ಜೀವನಕ್ಕಾಗಿ ದಾರಿ, ದಾರಿಗಾಗಿ ಕನಸು, ಕನಸಿಗಾಗಿ ಬದುಕು. ಎಲ್ಲವನ್ನು ರೂಪಿಸುವುದು ನಮ್ಮ ದೇಹ, ದೇಹದ ಪ್ರತಿಯೊಂದು ಅಂಗಗಳು , ಜ್ಞಾನೇಂದ್ರಿಯಗಳು ನಮ್ಮ ಜೀವನವನ್ನು ರೂಪಿಸುವ ಅಂಶವಾಗಿದೆ. ನೋವು, ಕಷ್ಟಗಳು ನಮ್ಮ ಜೀವಕ್ಕೆ ಮತ್ತು ಜೀವನಕ್ಕೆ ಯಾವ ಸಂದರ್ಭದಲ್ಲಿಯೂ, ಯಾವ ರೂಪದಲ್ಲಿಯೂ ಬರಬಹುದು. ಅದನ್ನು ನಿರ್ಣಯಿಸುವುದು ಸಮಯ. ಅದಕ್ಕೆ ವಯಸ್ಸಿನ ಅಂತರವಿಲ್ಲ ಜಾತಿಯ ಬೇಧವಿಲ್ಲ.

ಅಂಗಗಳ ನ್ಯೂನ್ಯತೆ ಬಂದಾಗ ಹತ್ತಿರದವರು ದೂರವಾಗುವುದು ಸಹಜ ಮತ್ತು ಅದನ್ನು ಸರಿಪಡಿಸುವುದು ಕಠಿಣ. ಈ ರೀತಿ ಸಮಸ್ಯೆಯೊಂದಿಗೆ ಮೂಲ್ಕಿಯ ಒಂದು ಪುಟ್ಟ ದ್ವೀಪದಲ್ಲಿ ಹುಟ್ಟಿದ ಮಗು ಶೌರ್ಯ. ಸುಂದರ ಮುಖ, ಮುಖದಲ್ಲಿ ನಿಷ್ಕಲ್ಮಶ ನಗು ಮತ್ತು ಶ್ರವಣ ಸಮಸ್ಯೆ. ಹುಟ್ಟಿದ ಮಗುವಿಗೆ ತನ್ನ ಒಂದು ವರ್ಷದ ಜೀವನದಲ್ಲಿ ಸಿಕ್ಕಿದ್ದು ಬಡತನ, ಕಂಡಿದ್ದು ತಂದೆಯ ಮರಣ, ತಾಯಿಯ ದುಃಖ ಕೇಳಿದ್ದು ಶೂನ್ಯ. ತಾಯಿ ಆಸ್ಪತ್ರೆಗೆ ಹೋದಾಗ ವೈದ್ಯರು ನೀಡಿದ್ದು 54000 ರೂ. ವೆಚ್ಚದ ಕಿವಿಯ ಯಂತ್ರ, ಮಾತಿನ ತರಬೇತಿಯ ಸಲಹೆ. ಅದು ಸಾಧ್ಯವಿಲ್ಲದ್ದಾಗ ಆ ತಾಯಿಯ ದಿಕ್ಕೇ ತೋಚದ ಭಾವ.

ಜೀವನವಿಡೀ ನೋವಿನ ಚೀಲವಾಗಿರುವಾಗ ನಂಬಿಕೆ ಮಾತ್ರ ಬದುಕಲು ದಾರಿ ತೋರುತ್ತದೆ. ಆದರೆ ಆ ನಂಬಿಕೆಯ ಹಸ್ತ ಮಾತ್ರ ವಿರಳವಾಗಿರುತ್ತದೆ. ಆ ನೊಂದ ತಾಯಿ ಮತ್ತು ಶೌರ್ಯನಿಗೆ ನಂಬಿಕೆಯ ಹಸ್ತವಾಗಿದ್ದು, ನಾರಾಯಣ ಗುರುಗಳ ಧ್ಯೇಯ ಹಾಗೂ ವಿಚಾರದಂತೆ ಕಾರ್ಯ ನಿರ್ವಹಿಸುತ್ತಿರುವ ಗುರುಬೆಳದಿಂಗಳು (ರಿ.) ಕುದ್ರೋಳಿ ಸಂಸ್ಥೆಯ ಪ್ರಮುಖ ದಾನಿಗಳಲ್ಲೋರ್ವರಾದ ಸದಾಕಾಲ ನೊಂದವರ ಮನಕ್ಕೆ ಸಾಂತ್ವನ ನೀಡುವ ಹಂಬಲವುಳ್ಳ, ಸಹೃದಯಿ ಸಮಾಜ ಸೇವಕ, ಕೊಡುಗೈ ದಾನಿ ಸತೀಶ್ ಪೂಜಾರಿ ಬೆಳಪು, ದುಬೈ ಇವರ ಪೂಜ್ಯ ತಂದೆಯವರಾದ ದಿ| ಸೂರು ಪೂಜಾರಿ ಇವರ ಪುಣ್ಯತಿಥಿಯ ಸ್ಮರಣಾರ್ಥ ಪುಟ್ಟ ಮಗು ಶೌರ್ಯನಿಗೆ ಶ್ರವಣ ಯಂತ್ರ ನೀಡುವ ಸಾರ್ಥಕ ಸೇವಾಕಾರ್ಯದ ಮೂಲಕ ತಮ್ಮ ಪಿತೃಶ್ರೀಯವರ ಹೆಸರು ಚಿರಕಾಲ ನೆನೆಯುವಂತೆ ಪುಣ್ಯತಿಥಿ ಆಚರಿಸಿದರು.

ಎರಡು ಜೀವನಕ್ಕೆ, ಎರಡು ಕನಸುಗಳಿಗೆ ಕಿವಿಕೊಟ್ಟು ಶೌರ್ಯನಿಗೆ ಆಧುನಿಕ ಯಂತ್ರ ನೀಡಿದ ದಾನಿಗಳಿಗೆ ನಾವು ಅಭಾರಿಯಾಗಿರುತ್ತೇವೆ.
ಮಗುವಿಗೆ ಇನ್ನೂ ಜೀವವಿದೆ, ಎಲ್ಲರಂತೆ ಓದುವ, ಬರೆಯುವ, ಕಲಿಯುವ ಅವಕಾಶವಿದೆ ಎಂದು ತೋರಿಸಿಕೊಟ್ಟ ದಾನಿಗಳಿಗೆ ಹೃದಯ ಪೂರ್ವಕ ಧನ್ಯವಾದಗಳು. ನೀಡಿದ ನೆರವು ಮುಂದೊಂದು ದಿನ ಮರವಾಗಿ ಸಿಹಿಯಾದ ಫಲ ನಿಮ್ಮ ಮುಂದಿರುತ್ತದೆ ಎಂಬುದು ನಮ್ಮ ನಂಬಿಕೆ ಮತ್ತು ಆಶಯ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »