TOP STORIES:

ಅಳಿವಿನಿಂದ ಉಳಿವಿನೆಡೆಗೆ – ರಶ್ಮಿ ಸನಿಲ್


ಪ್ರತಿಯೊಂದು ಜೀವಿಯೂ ಈ ಸೃಷ್ಟಿಯ ಕೂಸು. ಬುದ್ಧಿಜೀವಿ ಮಾನವನಿಂದ ಹಿಡಿದು ಇತರ ಕೋಟ್ಯಾಂತರ ಜೀವ-ಜಂತುಗಳವರೆಗೆ, ಒಂದನ್ನೊಂದು ಅನುಸರಿಸಿಯೇ ಬಾಳುವುದು ಈ ಸೃಷ್ಟಿಯ ಮೂಲಭೂತ ಸಹಕಾರ ತತ್ವ. ಆದರೆ ಮಾನವ ತನ್ನ ಹಣದ ಹಸಿವಿಗಾಗಿ ಉಸಿರನ್ನು ಕೊಡುವ ಗಿಡ-ಮರಗಳನ್ನು ನಶಿಸಿ, ತನ್ನ ಕಾಲಿಗೆ ತಾನೇ ಕೊಡಲಿ ಏಟು ಹಾಕಿಕೊಂಡಿದ್ದಾನೆ.


ಇದರಿಂದಾಗಿ ಎಷ್ಟೋ ಪ್ರಾಣಿ ಸಂಕುಲಗಳು ಅಳಿವಿನ ಅಂಚಿನಲ್ಲಿವೆ. “ಹಸಿರೇ ಉಸಿರು” ಅನ್ನುವುದನ್ನು ಮರೆತು, ಉಸಿರನ್ನು ಕೊಂದು ಹಸಿವನ್ನು ನೀಗಿಸಲು ಹೊರಟಂತಿದೆ ಆತನ ಪರಿಸ್ಥಿತಿ. ಜಾಗತಿಕ ತಾಪಮಾನವೂ ವಿನಾಶದ ಅಂಚಿಗೆ ಕಾರಣವಾಗಿದೆ. ಈ ಶತಮಾನದ ಅಂತ್ಯದ ವೇಳೆಗೆ ಭೂಮಿಯ ಉಷ್ಣಾಂಶ ೪ ಡಿಗ್ರಿಯಷ್ಟು ಹೆಚ್ಚಾಗುತ್ತದೆಯೆಂದು ವಿಜ್ಞಾನಿಗಳು ಹಾಗೂ ವಿಶ್ವಸಂಸ್ಥೆಯ ವಾಯುಗುಣ ಬದಲಾವಣೆ ಕುರಿತಾದ ಅಂತರರಾಷ್ಟ್ರೀಯ ಸಂಸ್ಥೆಯು ತಿಳಿಸಿದೆ. ಆದರೆ, ಉಷ್ಣಾಂಶ ಇನ್ನೆರಡು ಡಿಗ್ರಿಯಷ್ಟು ಹೆಚ್ಚಾದರೂ ಮನುಷ್ಯರು ಬದುಕುವುದೂ ಕೂಡ ದುಸ್ತರ.

ಇಡೀ ಜೈವಿಕ ವ್ಯವಸ್ಥೆ ಹಾಳಾದ ಬಳಿಕವೂ ತಾನು ಉಳಿಯುತ್ತೇನೆ ಅನ್ನೋದು ಕೇವಲ ಭ್ರಮೆ. ನಮ್ಮ ಸಾವಿಗೆ ನಾವೇ ಮುನ್ನುಡಿ ಬರೆದಂತೆ. ಇನ್ನಾದರೂ ನಾವು ಎಚ್ಚೆತ್ತುಕೊಂಡು ನಮ್ಮ ದುರಾಸೆಗಳಿಗೆ ಕಡಿವಾಣ ಹಾಕಿ, ಜೀವಿಗಳ ಅಳಿವು ಉಳಿವಿನ ಮಹತ್ವ ಹಾಗೂ ಪ್ರಕೃತಿಯ ಸಮತೋಲನದ ಅಗತ್ಯದ ಬಗ್ಗೆ ಅರಿತುಕೊಂಡು, ಪರಿಸರ ಸಂರಕ್ಷಣೆಯಲ್ಲಿ ಕ್ರಿಯಾಶೀಲರಾಗಿ ಪಾಲ್ಗೊಳ್ಳೋಣ.

✍️ರಶ್ಮಿ ಸನಿಲ್
(ರಶ್ಮಿತಾ ಮಂಗಳೂರು)
ಲೆಕ್ಕ ಪರಿಶೋಧಕಿ


Related Posts

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »