TOP STORIES:

ಅವರು ನಾರಾಯಣ ಗುರುಗಳನ್ನು ಹಿಂದೆಯೂ ತಿರಸ್ಕರಿಸಿದ್ದರು, ಮುಂದೆಯೂ ತಿರಸ್ಕರಿಸುತ್ತಾರೆ-ದಿನೇಶ್ ಅಮೀನ್ ಮಟ್ಟು


ಗಣರಾಜ್ಯೋತ್ಸವ ಪರೇಡ್ ನಲ್ಲಿ ನಾರಾಯಣ ಗುರುಗಳ ಮೂರ್ತಿ ಇದ್ದ ಸ್ಥಬ್ದಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದರಲ್ಲಿ ಯಾವ ಆಶ್ಚರ್ಯವೂ ಇಲ್ಲ. ಇದನ್ನು ಯಾರೂ ವಿರೋಧಿಸಬೇಕಾಗಿಲ್ಲ, ಬದಲಿಗೆ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಆಡಳಿತಾರೂಢ ಬಿಜೆಪಿಯ ಪ್ರಾಮಾಣಿಕ ನಡವಳಿಕೆಗಾಗಿ ಎಲ್ಲರೂ ಅಭಿನಂದಿಸಬೇಕು.
ಇದೇ ರೀತಿಯ ಪ್ರಾಮಾಣಿಕತೆಯಿಂದ ಬುದ್ದ,ಬಸವ, ಅಂಬೇಡ್ಕರ್, ಕನಕ, ಕಬೀರ, ವಾಲ್ಮೀಕಿಯೂ ಸೇರಿದಂತೆ ಎಲ್ಲ ಮಹಾ ಪುರುಷರ ಬಗೆಗಿನ ತಮ್ಮ ವಿರೋಧವನ್ನು ಬಿಜೆಪಿ ಮತ್ತು ಅದರ ಸರ್ಕಾರಗಳು ಮುಕ್ತವಾಗಿ ದಾಖಲಿಸಬೇಕು ಎಂದು ನಾವೆಲ್ಲರೂ ಕೂಡಿ ಒತ್ತಾಯಿಸಬೇಕು.
ಸಾವರ್ಕರ್, ಗೋಲ್ವಾಲ್ಕರ್, ಹೆಗಡೆವಾರ್ , ಗೋಡ್ಸೆ ಸೇರಿದಂತೆ ರಾಜಕೀಯ ಹಿಂದುತ್ವದ ಪ್ರಚಾರಕರ ವಿರುದ್ದ ನಮ್ಮ ವಿರೋಧವನ್ನು ನಾವು ಹೇಗೆ ಮುಕ್ತವಾಗಿ ಮಂಡಿಸುತ್ತೇವೆಯೋ ಹಾಗೆ ಅವರು ಆತ್ಮವಂಚನೆ ಮಾಡಿಕೊಳ್ಳದೆ ನಾವು ಆದರ್ಶಪ್ರಾಯರೆಂದು ತಿಳಿದುಕೊಂಡ ಮತ್ತು ಅವರು ಮನಸ್ಸಿನೊಳಗೆ ವಿರೋಧಿಸುತ್ತಿರುವ ಮಹಾಪುರುಷರ ವಿರುದ್ದದ ತಮ್ಮ ಅಭಿಪ್ರಾಯವನ್ನು ಪ್ರಾಮಾಣಿಕತೆಯಿಂದ ಮುಕ್ತವಾಗಿ ಹೇಳಿಕೊಳ್ಳಬೇಕು.
ನಡೆಯಲಿ ಇಂತಹದ್ದೊಂದು ಸೈದ್ದಾಂತಿಕ ಸಂಘರ್ಷ. ಗಟ್ಟಿಯಾಗಿರುವುದು ಉಳಿಯುತ್ತದೆ, ಉಳಿದದ್ದು ಇತಿಹಾಸದ ಕಸದ ಬುಟ್ಟಿಗೆ ಸೇರುತ್ತದೆ. ಹೊಡೆದು, ಬಡಿದು, ಕಡಿದು ಯಾವ ಸಿದ್ದಾಂತವನ್ನೂ ನೆಲೆ ಗೊಳಿಸಲಾಗುವುದಿಲ್ಲ.
ಇಂತಹದ್ದೊಂದು ದಾರಿಯನ್ನು ಹೇಳಿಕೊಟ್ಟವರೇ ನಾರಾಯಣ ಗುರುಗಳು. ಅವರು ತನ್ನ ಜನರಿಗೆ ಉಳಿದ ಸಮಾಜ ಸುಧಾರಕರಂತೆ ದೇವಸ್ಥಾನದೊಳಗೆ ಪ್ರವೇಶ ನೀಡಿ ಎಂದು ಅಂಗಲಾಚಲಿಲ್ಲ. ಅಲ್ಲಿಯೇ ಇದ್ದ ನದಿಯೊಳಗೆ ಧುಮುಕಿ ಶಿವಲಿಂಗವನ್ನು ಎದೆಗಪ್ಪಿಕೊಂಡು ಬಂದು ಅರವಿಪುರಂನಲ್ಲಿ ಸ್ಥಾಪಿಸಿ ಇದು ನಿಮ್ಮ ಶಿವ ಎಂದು ತನ್ನ ಜನರಿಗೆ ಹೇಳಿದರು.
ಪ್ರಶ್ನಿಸಿದ ಪುರೋಹಿತರಿಗೆ ‘ನಿಮ್ಮ ಶಿವ ನಿಮ್ಮಲ್ಲಿಯೇ ಇದ್ದಾನೆ, ಇದು ಈಳವರ ಶಿವ. ನೀವು ನಿಮ್ಮ ಪಾಡಿಗೆ ನಿಮ್ಮ ದೇವರನ್ನು ಪೂಜಿಸಿ, ನನ್ನ ಜನ ಅವರು ನಂಬಿದ ದೇವರನ್ನು ಪೂಜಿಸುತ್ತಾರೆ.. ’’ ಎಂದು ಬಾಯಿ ಮುಚ್ಚಿಸಿದ್ದರು.
ಅವರು ದೇವಾಲಯದೊಳಗೆ ಜನರನ್ನು ನುಗ್ಗಿಸಲಿಲ್ಲ, ದೇವರಮೂರ್ತಿಯನ್ನು ಒಡೆದುಹಾಕಲಿಲ್ಲ, ಅರ್ಚಕರನ್ನು ಪ್ರಶ್ನಿಸಲೂ ಇಲ್ಲ.. ಇದು ಯುದ್ಧದಲ್ಲಿ ಶಸ್ತ್ರ ಪ್ರಯೋಗ ಮಾಡದೆ ಶತ್ರುವನ್ನು ನಿಶಸ್ತ್ರಗೊಳಿಸುವ ಅಪರೂಪದ ಹೋರಾಟ.
ತಿರುವಾಂಕೂರು ಸಂಸ್ಥಾನದಲ್ಲಿ ಇಂದು ಕೇಂದ್ರ ಸರ್ಕಾರದಲ್ಲಿರುವಂತಹರದ್ದೇ ಪ್ರಭುತ್ವ ಇತ್ತು. ಅವರೊಡನೆ ನಾರಾಯಣ ಗುರುಗಳು ಸಂಘರ್ಷಕ್ಕಿಳಿದಿರಲಿಲ್ಲ. ವೈಕಂ ನಲ್ಲಿ ದೇವಸ್ಥಾನದ ಎದುರಿನ ಹಾದಿಯಲ್ಲಿ ನಡೆದುಕೊಂಡು ಹೋಗುವ ಸ್ವಾತಂತ್ರ್ಯಕ್ಕಾಗಿ ನಡೆದ ಸತ್ಯಾಗ್ರಹದ ಬಗ್ಗೆಯೂ ನಾರಾಯಣ ಗುರುಗಳ ವಿರೋಧ ಇತ್ತು. ‘’ಅವರು ಕಟ್ಟಿಕೊಂಡ ದೇವಸ್ಥಾನ, ಅದರ ಎದುರಿನ ಹಾದಿಯನ್ನು ಕಟ್ಟಿಕೊಂಡು ನೀವ್ಯಾಕೆ ಬಡಿದಾಡಿಕೊಳ್ಳುತ್ತೀರಿ,ನಿಮ್ಮ ದೇವಸ್ಥಾನವನ್ನು ನೀವೇ ಕಟ್ಟಿಕೊಳ್ಳಿ’’, ಎಂದು ಹೇಳುತ್ತಿದ್ದರು ನಾರಾಯಣ ಗುರುಗಳು.
ಆದರೆ ನಾರಾಯಣ ಗುರುಗಳು ಕಟ್ಟಿದ ದೇವಸ್ಥಾನಗಳನ್ನಷ್ಟೇ ಉಳಿಸಿಕೊಂಡಿರುವ ಅವರ ಅನುಯಾಯಿಗಳು ಅವರು ಹೇಳಿಕೊಟ್ಟಿರುವ ಚಿಂತನೆಯ ಪಾಠವನ್ನು ಮರೆತುಬಿಟ್ಟಿದ್ದಾರೆ.
ಮಂಗಳೂರಿನ ಕುದ್ರೋಳಿಯಲ್ಲಿ ಅಸ್ಪೃಶ್ಯ ಬಿಲ್ಲವರಿಗಾಗಿ ನಾರಾಯಣ ಗುರುಗಳೂ ಬಂದು ಸ್ಥಾಪಿಸಿದ್ದ ದೇವಸ್ಥಾನವನ್ನು ಹತ್ತಾರು ಕೋಟಿ ರೂಪಾಯಿ ವೆಚ್ಚದಲ್ಲಿ ನವೀಕರಿಸಲಾಗಿದೆ. ಆದರೆ ಬಿಲ್ಲವರು ಧಾರ್ಮಿಕ ಪ್ರವಾಸಕ್ಕೆ ಹೋದ ರೀತಿ ಅಲ್ಲಿಗೆ ಹೋಗಿ ಕೊಂಡಾಡಿ ಸೆಲ್ಪಿ ತೆಗೆಸಿಕೊಂಡು ಬರುತ್ತಾರೆ. ಅಲ್ಲಿಂದ ಉಡುಪಿ ಮಠ, ಕಟೀಲು, ಧರ್ಮಸ್ಥಳಗಳಿಗೆ ಹೋಗಿ ತಾವು ಕಷ್ಟ ಪಟ್ಟು ದುಡಿದ ದುಡ್ಡನ್ನು ಸುರಿದು ಬರುತ್ತಾರೆ.
ಉಡುಪಿ ಮಠದ ಸ್ವಾಮಿಗಳು, ಕಟೀಲಿನ ಆಸ್ರಣ್ಣರು ಮತ್ತು ಧರ್ಮಸ್ಥಳದ ಹೆಗಡೆಯವರು ಇಲ್ಲವೆ ಅವರ ಸಮುದಾಯದವರು ಎಂದಾದರೂ ಕುದ್ರೋಳಿ ದೇವಸ್ಥಾನಕ್ಕೆ ಭಕ್ತರಂತೆ ಬಂದು ಕೈಮುಗಿದು ನಾರಾಯಣ ಗುರುಗಳಿಗೆ ನಮಿಸಿ ಹೋಗಿದ್ದಾರೆಯೇ?
ಮತ್ತೆ ಯಾಕೆ ಗಣರಾಜ್ಯೋತ್ಸವದಲ್ಲಿ ನಾರಾಯಣ ಗುರುಗಳ ಸ್ಥಬ್ದಚಿತ್ರವನ್ನು ತಿರಸ್ಕರಿಸಿದ್ದಾರೆ ಎಂದು ಗೋಳು ಹೋಯ್ಕೊಳ್ತೀರಿ? ಅವರು ನಾರಾಯಣ ಗುರುಗಳನ್ನು ಹಿಂದೆಯೂ ತಿರಸ್ಕರಿಸಿದ್ದರು, ಮುಂದೆಯೂ ತಿರಸ್ಕರಿಸುತ್ತಾರೆ. ಅವರನ್ನು ವಿರೋಧಿಸುವುದನ್ನು ಬಿಟ್ಟು ನಾರಾಯಣ ಗುರುಗಳ ಅನುಯಾಯಿಗಳು ನಿಜವಾಗಿ ತಮ್ಮನ್ನು ತಾವೇ ಪ್ರಶ್ನೆ ಮಾಡಬೇಕಾಗಿದೆ. ನಾರಾಯಣ ಗುರುಗಳನ್ನು ತಿರಸ್ಕರಿಸಿದವರನ್ನು ನಾವು ಯಾಕೆ ಪುರಸ್ಕರಿಸುತ್ತಿದ್ದೇವೆ? ಎಂದು.
ಇದಕ್ಕಾಗಿಯೇ ಕುವೆಂಪು “…ಹುಲಿಗೆ ಗುಂಡು ಹೊಡೆಯುವ ಮೊದಲು ನಿಮ್ಮ ಮೆದುಳಿಗೆ ಹೊಡೆಯಬೇಕು..” ಹೇಳಿದ್ದು.

Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »