TOP STORIES:

FOLLOW US

ಅಶಕ್ತ ಕುಟುಂಬಕ್ಕೆ ಬಿರುವೆರ್ ಕುಡ್ಲದಿಂದ ರೂ: 50 ಸಾವಿರ ಆರ್ಥಿಕ ನೆರವು ಹಸ್ತಾಂತರ


ಕುದ್ರೋಳಿ:- ಫ್ರೆಂಡ್ಸ್ ಬಳ್ಳಾಲ್‍ಬಾಗ್ ಬಿರುವೆರ್ ಕುಡ್ಲ ಇದರ ವತಿಯಿಂದ ಕುಪ್ಪೆ ಪದವಿನ ಜಗದೀಶ್ ಜಯಶ್ರೀ ಅವರ ಪುತ್ರ ಎರಡುವರ್ಷದ ಶಮಿತ್ ಚಿಕಿತ್ಸೆಗಾಗಿ 50 ಸಾವಿರ ಆರ್ಥಿಕ ನೆರವನ್ನು ಬುಧವಾರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದವಠಾರದಲ್ಲಿ ಹಸ್ತಾಂತರಿಸಲಾಯಿತು.

ಕ್ಷೇತ್ರದ ಮೊಕ್ತೇಸರ ಸಾಯೀರಾಮ್ ಅವರು ನೆರವಿನ ಚೆಕ್ ಹಸ್ತಾಂತರಿಸಿ, ಬಿರುವೆರ್ ಕುಡ್ಲ  ಸಮಾಜಮುಖೀ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಬಿರುವೆರ್ ಕುಡ್ಲ ವಕ್ತಾರ ದಿನೇಶ್ ರಾಯಿ ಅವರು ಬಿರುವೆರ್ ಕುಡ್ಲದ ಕುರಿತಾಗಿ ಮಾಹಿತಿ ನೀಡಿ,

ಬಿರುವೆರ್ ಕುಡ್ಲದ  ಸ್ಥಾಪಕಾಧ್ಯಕ್ಷ ಉದಯಪೂಜಾರಿ ಬಳ್ಳಾಲ್‍ಬಾಗ್ ನೇತೃತ್ವದಲ್ಲಿ ಅವರ ಸದಸ್ಯರ,ಸ್ನೇಹಿತರ,ದಾನಿಗಳಕೊಡುಗೆಯಿದೆ.

ನಮ್ಮ ಸಂಘಟನೆಯು ಶಾರದಾ ಹುಲಿ ವೇಷ ಕುಣಿತ, ಕುದ್ರೋಳಿ ಕ್ಷೇತ್ರದ ದಸರದಲ್ಲಿ ಭಾಗವಹಿಸುತ್ತಾ ಬಂದಿದೆ. ಹುಲಿ ವೇಷದಲ್ಲಿಬಂದ ಹಣವನ್ನು ಸೇವಾ ರೂಪದಲ್ಲಿ ಖರ್ಚು ಮಾಡುತ್ತಿದ್ದೆವು. ಕಳೆದ 8 ವರ್ಷದಿಂದ ಸಂಸ್ಥೆಯು ಬಡ ವರ್ಗದ ಸೇವೆಗಾಗಿ  5 ಕೋಟಿರೂ.ನಷ್ಟು ನೆರವಿಗೆ ವಿನಿಯೋಗಿಸಿದ್ದೇವೆ. ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶದಲ್ಲಿ ಎಲ್ಲಾ ಜಾತಿ ಧರ್ಮದ ಕುಟುಂಬಕ್ಕೆನೆರವು ನೀಡಲಾಗಿದೆ.ಬೇರೆ ಬೇರೆ ಘಟಕಗಳು ತಮ್ಮ ಕರ್ತವ್ಯ ನಿರತವಾಗಿದೆ. ಕೊರೊನಾ ಸಂದರ್ಭದಲ್ಲಿ ನೀಡಿದ ಉಚಿತವಾಗಿ  ಸೇವೆನೀಡುವ ಆಂಬುಲೆನ್ಸ್  ನಿರ್ವಹಣೆ ಮಾಡುತ್ತಿದ್ದೇವೆ.ಹೀಗೆ ನಮ್ಮಿಂದಾದ ಸೇವೆ ಸಮಾಜಕ್ಕೆ ನಿರಂತರವಾಗಿ ಮಾಡುತ್ತಾ  ಬಂದಿದ್ದೇವೆಎಂದರು.

ನೆರವು ಪಡೆದ ಕುಟುಂಬದ ಸದಸ್ಯರಾದ ಸಂಜಿತ್ ಅಚಾರ್ಯ ಮನವಿ ಮಾಡಿ,

ಪ್ರತೀ ತಿಂಗಳು 50 ಸಾವಿರ ವೆಚ್ಚ  ಬರುತ್ತಿದ್ದು,ಬಡ ಕುಟುಂಬಕ್ಕೆ ಭರಿಸಲು ಕಷ್ಟವಾಗುತ್ತಿದೆ.

ಬಿರುವೆರ್ ಕುಡ್ಲದ ನೆರವಿಗೆ ಕೃತಜ್ಞತೆ ವ್ಯಕ್ತ ಪಡಿಸುತ್ತೇವೆ.

ಇತರರೂ ಮುಂದೆ ಬಂದು ಸಹಾಯ ಮಾಡಿದರೆ ನಮಗೆ ಮಗುವಿನ ರಕ್ಷಣೆಗೆ ಸಹಾಯವಾಗುತ್ತದೆ‌ ಎಂದು ಮನವಿ ಮಾಡಿದರು.

ಪ್ರಮುಖರಾದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್ ಬಾಗ್, ವಸಂತ ಪೂಜಾರಿ, ವೆಂಕಟೇಶ್ ಭಂಡಾರಿ,ರಾಧಕೃಷ್ಣಮುಂಬಾಯಿ ಅಧ್ಯಕ್ಷ  ರಾಕೇಶ್ ಪೂಜಾರಿ ಬಳ್ಳಾಲ್‍ಬಾಗ್,ವಿನು ಶೆಟ್ಟಿ  ತಲಪಾಡಿ,ಲತೀಶ್ ಪೂಜಾರಿ,ಕಿಶೋರ್ ಬಾಬು,ರಾಕೇಶ್ಚಿಲಿಂಬಿ,ಲೋಹಿತ್ ಗಟ್ಟಿ,ರಾಮ್‍ಪ್ರಸಾದ್ ಎಕ್ಕೂರ್,ಗಣೇಶ್ ಚಿಲಿಂಬಿ,ವಾಝಿ ಫೆರ್ನಾಂಡಿಸ್,ಪ್ರಾಣೇಶ್ ಬಂಗೇರ,ವಿಘ್ನೇಶ್  ಮತ್ತಿತರರು ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »