TOP STORIES:

ಅಶಕ್ತ ಕುಟುಂಬಕ್ಕೆ ಬಿರುವೆರ್ ಕುಡ್ಲದಿಂದ ರೂ: 50 ಸಾವಿರ ಆರ್ಥಿಕ ನೆರವು ಹಸ್ತಾಂತರ


ಕುದ್ರೋಳಿ:- ಫ್ರೆಂಡ್ಸ್ ಬಳ್ಳಾಲ್‍ಬಾಗ್ ಬಿರುವೆರ್ ಕುಡ್ಲ ಇದರ ವತಿಯಿಂದ ಕುಪ್ಪೆ ಪದವಿನ ಜಗದೀಶ್ ಜಯಶ್ರೀ ಅವರ ಪುತ್ರ ಎರಡುವರ್ಷದ ಶಮಿತ್ ಚಿಕಿತ್ಸೆಗಾಗಿ 50 ಸಾವಿರ ಆರ್ಥಿಕ ನೆರವನ್ನು ಬುಧವಾರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದವಠಾರದಲ್ಲಿ ಹಸ್ತಾಂತರಿಸಲಾಯಿತು.

ಕ್ಷೇತ್ರದ ಮೊಕ್ತೇಸರ ಸಾಯೀರಾಮ್ ಅವರು ನೆರವಿನ ಚೆಕ್ ಹಸ್ತಾಂತರಿಸಿ, ಬಿರುವೆರ್ ಕುಡ್ಲ  ಸಮಾಜಮುಖೀ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಬಿರುವೆರ್ ಕುಡ್ಲ ವಕ್ತಾರ ದಿನೇಶ್ ರಾಯಿ ಅವರು ಬಿರುವೆರ್ ಕುಡ್ಲದ ಕುರಿತಾಗಿ ಮಾಹಿತಿ ನೀಡಿ,

ಬಿರುವೆರ್ ಕುಡ್ಲದ  ಸ್ಥಾಪಕಾಧ್ಯಕ್ಷ ಉದಯಪೂಜಾರಿ ಬಳ್ಳಾಲ್‍ಬಾಗ್ ನೇತೃತ್ವದಲ್ಲಿ ಅವರ ಸದಸ್ಯರ,ಸ್ನೇಹಿತರ,ದಾನಿಗಳಕೊಡುಗೆಯಿದೆ.

ನಮ್ಮ ಸಂಘಟನೆಯು ಶಾರದಾ ಹುಲಿ ವೇಷ ಕುಣಿತ, ಕುದ್ರೋಳಿ ಕ್ಷೇತ್ರದ ದಸರದಲ್ಲಿ ಭಾಗವಹಿಸುತ್ತಾ ಬಂದಿದೆ. ಹುಲಿ ವೇಷದಲ್ಲಿಬಂದ ಹಣವನ್ನು ಸೇವಾ ರೂಪದಲ್ಲಿ ಖರ್ಚು ಮಾಡುತ್ತಿದ್ದೆವು. ಕಳೆದ 8 ವರ್ಷದಿಂದ ಸಂಸ್ಥೆಯು ಬಡ ವರ್ಗದ ಸೇವೆಗಾಗಿ  5 ಕೋಟಿರೂ.ನಷ್ಟು ನೆರವಿಗೆ ವಿನಿಯೋಗಿಸಿದ್ದೇವೆ. ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶದಲ್ಲಿ ಎಲ್ಲಾ ಜಾತಿ ಧರ್ಮದ ಕುಟುಂಬಕ್ಕೆನೆರವು ನೀಡಲಾಗಿದೆ.ಬೇರೆ ಬೇರೆ ಘಟಕಗಳು ತಮ್ಮ ಕರ್ತವ್ಯ ನಿರತವಾಗಿದೆ. ಕೊರೊನಾ ಸಂದರ್ಭದಲ್ಲಿ ನೀಡಿದ ಉಚಿತವಾಗಿ  ಸೇವೆನೀಡುವ ಆಂಬುಲೆನ್ಸ್  ನಿರ್ವಹಣೆ ಮಾಡುತ್ತಿದ್ದೇವೆ.ಹೀಗೆ ನಮ್ಮಿಂದಾದ ಸೇವೆ ಸಮಾಜಕ್ಕೆ ನಿರಂತರವಾಗಿ ಮಾಡುತ್ತಾ  ಬಂದಿದ್ದೇವೆಎಂದರು.

ನೆರವು ಪಡೆದ ಕುಟುಂಬದ ಸದಸ್ಯರಾದ ಸಂಜಿತ್ ಅಚಾರ್ಯ ಮನವಿ ಮಾಡಿ,

ಪ್ರತೀ ತಿಂಗಳು 50 ಸಾವಿರ ವೆಚ್ಚ  ಬರುತ್ತಿದ್ದು,ಬಡ ಕುಟುಂಬಕ್ಕೆ ಭರಿಸಲು ಕಷ್ಟವಾಗುತ್ತಿದೆ.

ಬಿರುವೆರ್ ಕುಡ್ಲದ ನೆರವಿಗೆ ಕೃತಜ್ಞತೆ ವ್ಯಕ್ತ ಪಡಿಸುತ್ತೇವೆ.

ಇತರರೂ ಮುಂದೆ ಬಂದು ಸಹಾಯ ಮಾಡಿದರೆ ನಮಗೆ ಮಗುವಿನ ರಕ್ಷಣೆಗೆ ಸಹಾಯವಾಗುತ್ತದೆ‌ ಎಂದು ಮನವಿ ಮಾಡಿದರು.

ಪ್ರಮುಖರಾದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್ ಬಾಗ್, ವಸಂತ ಪೂಜಾರಿ, ವೆಂಕಟೇಶ್ ಭಂಡಾರಿ,ರಾಧಕೃಷ್ಣಮುಂಬಾಯಿ ಅಧ್ಯಕ್ಷ  ರಾಕೇಶ್ ಪೂಜಾರಿ ಬಳ್ಳಾಲ್‍ಬಾಗ್,ವಿನು ಶೆಟ್ಟಿ  ತಲಪಾಡಿ,ಲತೀಶ್ ಪೂಜಾರಿ,ಕಿಶೋರ್ ಬಾಬು,ರಾಕೇಶ್ಚಿಲಿಂಬಿ,ಲೋಹಿತ್ ಗಟ್ಟಿ,ರಾಮ್‍ಪ್ರಸಾದ್ ಎಕ್ಕೂರ್,ಗಣೇಶ್ ಚಿಲಿಂಬಿ,ವಾಝಿ ಫೆರ್ನಾಂಡಿಸ್,ಪ್ರಾಣೇಶ್ ಬಂಗೇರ,ವಿಘ್ನೇಶ್  ಮತ್ತಿತರರು ಉಪಸ್ಥಿತರಿದ್ದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »