TOP STORIES:

FOLLOW US

ಅಶಕ್ತ ಕುಟುಂಬಕ್ಕೆ ಬಿರುವೆರ್ ಕುಡ್ಲದಿಂದ ರೂ: 50 ಸಾವಿರ ಆರ್ಥಿಕ ನೆರವು ಹಸ್ತಾಂತರ


ಕುದ್ರೋಳಿ:- ಫ್ರೆಂಡ್ಸ್ ಬಳ್ಳಾಲ್‍ಬಾಗ್ ಬಿರುವೆರ್ ಕುಡ್ಲ ಇದರ ವತಿಯಿಂದ ಕುಪ್ಪೆ ಪದವಿನ ಜಗದೀಶ್ ಜಯಶ್ರೀ ಅವರ ಪುತ್ರ ಎರಡುವರ್ಷದ ಶಮಿತ್ ಚಿಕಿತ್ಸೆಗಾಗಿ 50 ಸಾವಿರ ಆರ್ಥಿಕ ನೆರವನ್ನು ಬುಧವಾರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದವಠಾರದಲ್ಲಿ ಹಸ್ತಾಂತರಿಸಲಾಯಿತು.

ಕ್ಷೇತ್ರದ ಮೊಕ್ತೇಸರ ಸಾಯೀರಾಮ್ ಅವರು ನೆರವಿನ ಚೆಕ್ ಹಸ್ತಾಂತರಿಸಿ, ಬಿರುವೆರ್ ಕುಡ್ಲ  ಸಮಾಜಮುಖೀ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಬಿರುವೆರ್ ಕುಡ್ಲ ವಕ್ತಾರ ದಿನೇಶ್ ರಾಯಿ ಅವರು ಬಿರುವೆರ್ ಕುಡ್ಲದ ಕುರಿತಾಗಿ ಮಾಹಿತಿ ನೀಡಿ,

ಬಿರುವೆರ್ ಕುಡ್ಲದ  ಸ್ಥಾಪಕಾಧ್ಯಕ್ಷ ಉದಯಪೂಜಾರಿ ಬಳ್ಳಾಲ್‍ಬಾಗ್ ನೇತೃತ್ವದಲ್ಲಿ ಅವರ ಸದಸ್ಯರ,ಸ್ನೇಹಿತರ,ದಾನಿಗಳಕೊಡುಗೆಯಿದೆ.

ನಮ್ಮ ಸಂಘಟನೆಯು ಶಾರದಾ ಹುಲಿ ವೇಷ ಕುಣಿತ, ಕುದ್ರೋಳಿ ಕ್ಷೇತ್ರದ ದಸರದಲ್ಲಿ ಭಾಗವಹಿಸುತ್ತಾ ಬಂದಿದೆ. ಹುಲಿ ವೇಷದಲ್ಲಿಬಂದ ಹಣವನ್ನು ಸೇವಾ ರೂಪದಲ್ಲಿ ಖರ್ಚು ಮಾಡುತ್ತಿದ್ದೆವು. ಕಳೆದ 8 ವರ್ಷದಿಂದ ಸಂಸ್ಥೆಯು ಬಡ ವರ್ಗದ ಸೇವೆಗಾಗಿ  5 ಕೋಟಿರೂ.ನಷ್ಟು ನೆರವಿಗೆ ವಿನಿಯೋಗಿಸಿದ್ದೇವೆ. ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶದಲ್ಲಿ ಎಲ್ಲಾ ಜಾತಿ ಧರ್ಮದ ಕುಟುಂಬಕ್ಕೆನೆರವು ನೀಡಲಾಗಿದೆ.ಬೇರೆ ಬೇರೆ ಘಟಕಗಳು ತಮ್ಮ ಕರ್ತವ್ಯ ನಿರತವಾಗಿದೆ. ಕೊರೊನಾ ಸಂದರ್ಭದಲ್ಲಿ ನೀಡಿದ ಉಚಿತವಾಗಿ  ಸೇವೆನೀಡುವ ಆಂಬುಲೆನ್ಸ್  ನಿರ್ವಹಣೆ ಮಾಡುತ್ತಿದ್ದೇವೆ.ಹೀಗೆ ನಮ್ಮಿಂದಾದ ಸೇವೆ ಸಮಾಜಕ್ಕೆ ನಿರಂತರವಾಗಿ ಮಾಡುತ್ತಾ  ಬಂದಿದ್ದೇವೆಎಂದರು.

ನೆರವು ಪಡೆದ ಕುಟುಂಬದ ಸದಸ್ಯರಾದ ಸಂಜಿತ್ ಅಚಾರ್ಯ ಮನವಿ ಮಾಡಿ,

ಪ್ರತೀ ತಿಂಗಳು 50 ಸಾವಿರ ವೆಚ್ಚ  ಬರುತ್ತಿದ್ದು,ಬಡ ಕುಟುಂಬಕ್ಕೆ ಭರಿಸಲು ಕಷ್ಟವಾಗುತ್ತಿದೆ.

ಬಿರುವೆರ್ ಕುಡ್ಲದ ನೆರವಿಗೆ ಕೃತಜ್ಞತೆ ವ್ಯಕ್ತ ಪಡಿಸುತ್ತೇವೆ.

ಇತರರೂ ಮುಂದೆ ಬಂದು ಸಹಾಯ ಮಾಡಿದರೆ ನಮಗೆ ಮಗುವಿನ ರಕ್ಷಣೆಗೆ ಸಹಾಯವಾಗುತ್ತದೆ‌ ಎಂದು ಮನವಿ ಮಾಡಿದರು.

ಪ್ರಮುಖರಾದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್ ಬಾಗ್, ವಸಂತ ಪೂಜಾರಿ, ವೆಂಕಟೇಶ್ ಭಂಡಾರಿ,ರಾಧಕೃಷ್ಣಮುಂಬಾಯಿ ಅಧ್ಯಕ್ಷ  ರಾಕೇಶ್ ಪೂಜಾರಿ ಬಳ್ಳಾಲ್‍ಬಾಗ್,ವಿನು ಶೆಟ್ಟಿ  ತಲಪಾಡಿ,ಲತೀಶ್ ಪೂಜಾರಿ,ಕಿಶೋರ್ ಬಾಬು,ರಾಕೇಶ್ಚಿಲಿಂಬಿ,ಲೋಹಿತ್ ಗಟ್ಟಿ,ರಾಮ್‍ಪ್ರಸಾದ್ ಎಕ್ಕೂರ್,ಗಣೇಶ್ ಚಿಲಿಂಬಿ,ವಾಝಿ ಫೆರ್ನಾಂಡಿಸ್,ಪ್ರಾಣೇಶ್ ಬಂಗೇರ,ವಿಘ್ನೇಶ್  ಮತ್ತಿತರರು ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »