TOP STORIES:

FOLLOW US

ಆರ್ಥಿಕವಾಗಿ ದಿಕ್ಕು ತೋಚದ ಪಡುಬಿದ್ರಿ ಕಂಚಿನಡ್ಕ ನಿವಾಸಿ ದಿ.ಉದಯ ಪೂಜಾರಿ ಕುಟುಂಬಕ್ಕೆ ಗುರುಬೆಳದಿಂಗಳು ಆಸರೆ


ಆರ್ಥಿಕವಾಗಿ ದಿಕ್ಕು ತೋಚದ ಕುಟುಂಬಕ್ಕೆ ಗುರುಬೆಳದಿಂಗಳು ಆಸರೆ

ಪಡುಬಿದ್ರಿ: ಅನಾರೋಗ್ಯ ಪೀಡಿತ ತಂದೆ ಹಾಗೂ ಇಬ್ಬರು ಸಹೋದರರನ್ನು ಕಳೆದುಕೊಂಡ ಕಂಚಿನಡ್ಕ ನಿವಾಸಿ ದಿ.ಉದಯ ಪೂಜಾರಿ ಕುಟುಂಬಕ್ಕೆ ಗುರುಬೆಳದಿಂಗಳು ಫೌಂಡೇಶನ್ ವತಿಯಿಂದ 50,000ರೂ. ನೆರವು ನೀಡಲಾಯಿತು.

ಕುಟುಂಬದ ಆಧಾರವಾಗಿದ್ದ ಸಹೋದರರನ್ನು ಕಳೆದುಕೊಂಡು ಆರ್ಥಿಕವಾಗಿ ತೀರಾ ಸಂಕಷ್ಟದಲ್ಲಿದ್ದ ವೃದ್ಧೆ ತಾಯಿ ಹಾಗೂ ಅವಿವಾಹಿತ ಸಹೋದರಿಯರ ಮನೆಗೆ ಭೇಟಿ ನೀಡಿ ಅವರ ಪರಿಸ್ಥಿತಿ ಅವಲೋಕಿಸಿ ಸಹಾಯಧನ ವಿತರಿಸಲಾಯಿತು.

ಅನಾರೋಗ್ಯಪೀಡಿತ ತಂದೆ ಹಾಗೂ ಸಹೋದರರ ಚಿಕಿತ್ಸೆಗೆ ಸಾಕಷ್ಟು ಹಣ ವ್ಯಯಿಸಿ, ಇದ್ದ ಮನೆಯ ಮೇಲೆ ಕೂಡ ಸಾಲ ಮಾಡಿ ದಿಕ್ಕೇ ತೋಚದಂತಿದ್ದ ಕುಟುಂಬದ ಪರಿಸ್ಥಿತಿ ಕರುಣಾಜನಕವಾಗಿತ್ತು. ಹಾಗಾಗಿ ನಮ್ಮ ಸಂಸ್ಥೆಯ ವತಿಯಿಂದ ಅವರ ಮನೆಗೆ ಭೇಟಿ ನೀಡಿ, ಧೈರ್ಯ ತುಂಬಿ, ಆರ್ಥಿಕ ಸಹಾಯ ನೀಡಿದ್ದೇವೆ ಎಂದು ಗುರುಬೆಳದಿಂಗಳು ಸಂಸ್ಥೆ ಅಧ್ಯಕ್ಷ ಪದ್ಮರಾಜ್ ಆರ್. ಹೇಳಿದರು.

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಪದಾಧಿಕಾರಿ ಯೋಗೀಶ್ ಕೋಟ್ಯಾನ್, ಗೆಜ್ಜೆಗಿರಿ ಕ್ಷೇತ್ರದ ಆಡಳಿತ ಮಂಡಳಿ ಉಪಾಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಯುವವಾಹಿನಿ ಪಡುಬಿದ್ರಿ ಘಟಕದ ಮಾಜಿ ಅಧ್ಯಕ್ಷ ಯೋಗೀಶ್ ಪೂಜಾರಿ ಪಾದೆಬೆಟ್ಟು, ಗುರುಬೆಳದಿಂಗಳು ಸಂಸ್ಥೆ ಸದಸ್ಯರಾದ ಪ್ರವೀಣ್ ಅಂಚನ್, ವಿವೇಕ್ ಕೋಟ್ಯಾನ್ ಉಪಸ್ಥಿತರಿದ್ದರು.

ನಮ್ಮೊಂದಿಗೆ ನೀವೂ ಕೈಜೋಡಿಸಬಹುದು:

ಜಾತಿ- ಮತ- ಪಕ್ಷ ಭೇದ ರಹಿತವಾಗಿ ಸಮಾಜಸೇವೆಗೆ ಕಟಿಬದ್ಧರಾಗುವ ನಿಟ್ಟಿನಲ್ಲಿ, ಶಿಕ್ಷಣ, ಆರೋಗ್ಯ, ಆಸರೆ ಎಂಬ ಧ್ಯೇಯಗಳೊಂದಿಗೆ ಗುರುಬೆಳದಿಂಗಳು ಯೋಜನೆ ಅನುಷ್ಠಾನಗೊಂಡಿದ್ದು, ವಿದ್ಯಾರ್ಥಿಗಳಿಗೆ ಸರಸ್ವತಿಯಾಗಿ, ರೋಗಿಗಳಿಗೆ ಸಂಜೀವಿನಿಯಾಗಿ, ನೊಂದವರಿಗೆ ಕರುಣಾಮಯಿಯಾಗಿರುವ ಯೋಜನೆಯೇ ಗುರುಬೆಳದಿಂಗಳು. ಈಗಾಗಲೇ ಗುರುಬೆಳದಿಂಗಳು ಫೌಂಡೇಶನ್ ಮೂಲಕ ನೊಂದವರಿಗೆ ಮನೆ ನಿರ್ಮಾಣ, ಬಡ ಹೆಣ್ಣುಮಕ್ಕಳ ಮದುವೆ, ನೂರಾರು ರೋಗಿಗಳಗೆ ಔಷಧಕ್ಕೆ ನೆರವು, ನೂರಾರು ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗಿದೆ. ನಮ್ಮ ಸಾರ್ಥಕ ಸೇವೆಗೆ ನೀವೂ ಕೈಜೋಡಿಸಬಹುದು.

Name : GURU BELADINGALU

Bank: CANARA BANK

Account No: 110000894880

IFSC Code: CNRB0010241

Google Pay Phone Pay :  919901246123

UPI : 301617062894880@cnrb


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »