TOP STORIES:

FOLLOW US

ಆರ್ಥಿಕವಾಗಿ ದಿಕ್ಕು ತೋಚದ ಪಡುಬಿದ್ರಿ ಕಂಚಿನಡ್ಕ ನಿವಾಸಿ ದಿ.ಉದಯ ಪೂಜಾರಿ ಕುಟುಂಬಕ್ಕೆ ಗುರುಬೆಳದಿಂಗಳು ಆಸರೆ


ಆರ್ಥಿಕವಾಗಿ ದಿಕ್ಕು ತೋಚದ ಕುಟುಂಬಕ್ಕೆ ಗುರುಬೆಳದಿಂಗಳು ಆಸರೆ

ಪಡುಬಿದ್ರಿ: ಅನಾರೋಗ್ಯ ಪೀಡಿತ ತಂದೆ ಹಾಗೂ ಇಬ್ಬರು ಸಹೋದರರನ್ನು ಕಳೆದುಕೊಂಡ ಕಂಚಿನಡ್ಕ ನಿವಾಸಿ ದಿ.ಉದಯ ಪೂಜಾರಿ ಕುಟುಂಬಕ್ಕೆ ಗುರುಬೆಳದಿಂಗಳು ಫೌಂಡೇಶನ್ ವತಿಯಿಂದ 50,000ರೂ. ನೆರವು ನೀಡಲಾಯಿತು.

ಕುಟುಂಬದ ಆಧಾರವಾಗಿದ್ದ ಸಹೋದರರನ್ನು ಕಳೆದುಕೊಂಡು ಆರ್ಥಿಕವಾಗಿ ತೀರಾ ಸಂಕಷ್ಟದಲ್ಲಿದ್ದ ವೃದ್ಧೆ ತಾಯಿ ಹಾಗೂ ಅವಿವಾಹಿತ ಸಹೋದರಿಯರ ಮನೆಗೆ ಭೇಟಿ ನೀಡಿ ಅವರ ಪರಿಸ್ಥಿತಿ ಅವಲೋಕಿಸಿ ಸಹಾಯಧನ ವಿತರಿಸಲಾಯಿತು.

ಅನಾರೋಗ್ಯಪೀಡಿತ ತಂದೆ ಹಾಗೂ ಸಹೋದರರ ಚಿಕಿತ್ಸೆಗೆ ಸಾಕಷ್ಟು ಹಣ ವ್ಯಯಿಸಿ, ಇದ್ದ ಮನೆಯ ಮೇಲೆ ಕೂಡ ಸಾಲ ಮಾಡಿ ದಿಕ್ಕೇ ತೋಚದಂತಿದ್ದ ಕುಟುಂಬದ ಪರಿಸ್ಥಿತಿ ಕರುಣಾಜನಕವಾಗಿತ್ತು. ಹಾಗಾಗಿ ನಮ್ಮ ಸಂಸ್ಥೆಯ ವತಿಯಿಂದ ಅವರ ಮನೆಗೆ ಭೇಟಿ ನೀಡಿ, ಧೈರ್ಯ ತುಂಬಿ, ಆರ್ಥಿಕ ಸಹಾಯ ನೀಡಿದ್ದೇವೆ ಎಂದು ಗುರುಬೆಳದಿಂಗಳು ಸಂಸ್ಥೆ ಅಧ್ಯಕ್ಷ ಪದ್ಮರಾಜ್ ಆರ್. ಹೇಳಿದರು.

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಪದಾಧಿಕಾರಿ ಯೋಗೀಶ್ ಕೋಟ್ಯಾನ್, ಗೆಜ್ಜೆಗಿರಿ ಕ್ಷೇತ್ರದ ಆಡಳಿತ ಮಂಡಳಿ ಉಪಾಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಯುವವಾಹಿನಿ ಪಡುಬಿದ್ರಿ ಘಟಕದ ಮಾಜಿ ಅಧ್ಯಕ್ಷ ಯೋಗೀಶ್ ಪೂಜಾರಿ ಪಾದೆಬೆಟ್ಟು, ಗುರುಬೆಳದಿಂಗಳು ಸಂಸ್ಥೆ ಸದಸ್ಯರಾದ ಪ್ರವೀಣ್ ಅಂಚನ್, ವಿವೇಕ್ ಕೋಟ್ಯಾನ್ ಉಪಸ್ಥಿತರಿದ್ದರು.

ನಮ್ಮೊಂದಿಗೆ ನೀವೂ ಕೈಜೋಡಿಸಬಹುದು:

ಜಾತಿ- ಮತ- ಪಕ್ಷ ಭೇದ ರಹಿತವಾಗಿ ಸಮಾಜಸೇವೆಗೆ ಕಟಿಬದ್ಧರಾಗುವ ನಿಟ್ಟಿನಲ್ಲಿ, ಶಿಕ್ಷಣ, ಆರೋಗ್ಯ, ಆಸರೆ ಎಂಬ ಧ್ಯೇಯಗಳೊಂದಿಗೆ ಗುರುಬೆಳದಿಂಗಳು ಯೋಜನೆ ಅನುಷ್ಠಾನಗೊಂಡಿದ್ದು, ವಿದ್ಯಾರ್ಥಿಗಳಿಗೆ ಸರಸ್ವತಿಯಾಗಿ, ರೋಗಿಗಳಿಗೆ ಸಂಜೀವಿನಿಯಾಗಿ, ನೊಂದವರಿಗೆ ಕರುಣಾಮಯಿಯಾಗಿರುವ ಯೋಜನೆಯೇ ಗುರುಬೆಳದಿಂಗಳು. ಈಗಾಗಲೇ ಗುರುಬೆಳದಿಂಗಳು ಫೌಂಡೇಶನ್ ಮೂಲಕ ನೊಂದವರಿಗೆ ಮನೆ ನಿರ್ಮಾಣ, ಬಡ ಹೆಣ್ಣುಮಕ್ಕಳ ಮದುವೆ, ನೂರಾರು ರೋಗಿಗಳಗೆ ಔಷಧಕ್ಕೆ ನೆರವು, ನೂರಾರು ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗಿದೆ. ನಮ್ಮ ಸಾರ್ಥಕ ಸೇವೆಗೆ ನೀವೂ ಕೈಜೋಡಿಸಬಹುದು.

Name : GURU BELADINGALU

Bank: CANARA BANK

Account No: 110000894880

IFSC Code: CNRB0010241

Google Pay Phone Pay :  919901246123

UPI : 301617062894880@cnrb


Share:

More Posts

Category

Send Us A Message

Related Posts

ಶ್ರೀ ಸತೀಶ್ ಕುಮಾರ್ ಬಜಾಲ್ ರಿಗೆ “ ಬಿಲ್ಲವ ಸಂಜೀವಿನಿ “ ಬಿರುದು ಗೌರವ ಪ್ರಧಾನ – ಬಿಲ್ಲವ ಸಂಘ ಪುಣೆ


Share       ವರ್ಲ್ಡ್ ಬಿಲ್ಲವಾಸ್ ಪ್ರೀಮಿಯರ್ ಲೀಗ್ 2025 ನ ಅದ್ಭುತ ಕಾರ್ಯಕ್ರಮದಲ್ಲಿ ಸೌಧಿ ಬಿಲ್ಲವಾಸ್ ದಮ್ಮಾಮ್ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್ ರಿಗೆ ಬಿಲ್ಲವ ಸಂಘ ಪುಣೆ ಯು ಅತಿಥಿ


Read More »

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ


Share       ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು


Read More »

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


Share       ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ


Read More »

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ


Share       ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ


Read More »

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ


Share       ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ,


Read More »

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »