TOP STORIES:

ಆರ್ಥಿಕವಾಗಿ ದಿಕ್ಕು ತೋಚದ ಪಡುಬಿದ್ರಿ ಕಂಚಿನಡ್ಕ ನಿವಾಸಿ ದಿ.ಉದಯ ಪೂಜಾರಿ ಕುಟುಂಬಕ್ಕೆ ಗುರುಬೆಳದಿಂಗಳು ಆಸರೆ


ಆರ್ಥಿಕವಾಗಿ ದಿಕ್ಕು ತೋಚದ ಕುಟುಂಬಕ್ಕೆ ಗುರುಬೆಳದಿಂಗಳು ಆಸರೆ

ಪಡುಬಿದ್ರಿ: ಅನಾರೋಗ್ಯ ಪೀಡಿತ ತಂದೆ ಹಾಗೂ ಇಬ್ಬರು ಸಹೋದರರನ್ನು ಕಳೆದುಕೊಂಡ ಕಂಚಿನಡ್ಕ ನಿವಾಸಿ ದಿ.ಉದಯ ಪೂಜಾರಿ ಕುಟುಂಬಕ್ಕೆ ಗುರುಬೆಳದಿಂಗಳು ಫೌಂಡೇಶನ್ ವತಿಯಿಂದ 50,000ರೂ. ನೆರವು ನೀಡಲಾಯಿತು.

ಕುಟುಂಬದ ಆಧಾರವಾಗಿದ್ದ ಸಹೋದರರನ್ನು ಕಳೆದುಕೊಂಡು ಆರ್ಥಿಕವಾಗಿ ತೀರಾ ಸಂಕಷ್ಟದಲ್ಲಿದ್ದ ವೃದ್ಧೆ ತಾಯಿ ಹಾಗೂ ಅವಿವಾಹಿತ ಸಹೋದರಿಯರ ಮನೆಗೆ ಭೇಟಿ ನೀಡಿ ಅವರ ಪರಿಸ್ಥಿತಿ ಅವಲೋಕಿಸಿ ಸಹಾಯಧನ ವಿತರಿಸಲಾಯಿತು.

ಅನಾರೋಗ್ಯಪೀಡಿತ ತಂದೆ ಹಾಗೂ ಸಹೋದರರ ಚಿಕಿತ್ಸೆಗೆ ಸಾಕಷ್ಟು ಹಣ ವ್ಯಯಿಸಿ, ಇದ್ದ ಮನೆಯ ಮೇಲೆ ಕೂಡ ಸಾಲ ಮಾಡಿ ದಿಕ್ಕೇ ತೋಚದಂತಿದ್ದ ಕುಟುಂಬದ ಪರಿಸ್ಥಿತಿ ಕರುಣಾಜನಕವಾಗಿತ್ತು. ಹಾಗಾಗಿ ನಮ್ಮ ಸಂಸ್ಥೆಯ ವತಿಯಿಂದ ಅವರ ಮನೆಗೆ ಭೇಟಿ ನೀಡಿ, ಧೈರ್ಯ ತುಂಬಿ, ಆರ್ಥಿಕ ಸಹಾಯ ನೀಡಿದ್ದೇವೆ ಎಂದು ಗುರುಬೆಳದಿಂಗಳು ಸಂಸ್ಥೆ ಅಧ್ಯಕ್ಷ ಪದ್ಮರಾಜ್ ಆರ್. ಹೇಳಿದರು.

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಪದಾಧಿಕಾರಿ ಯೋಗೀಶ್ ಕೋಟ್ಯಾನ್, ಗೆಜ್ಜೆಗಿರಿ ಕ್ಷೇತ್ರದ ಆಡಳಿತ ಮಂಡಳಿ ಉಪಾಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಯುವವಾಹಿನಿ ಪಡುಬಿದ್ರಿ ಘಟಕದ ಮಾಜಿ ಅಧ್ಯಕ್ಷ ಯೋಗೀಶ್ ಪೂಜಾರಿ ಪಾದೆಬೆಟ್ಟು, ಗುರುಬೆಳದಿಂಗಳು ಸಂಸ್ಥೆ ಸದಸ್ಯರಾದ ಪ್ರವೀಣ್ ಅಂಚನ್, ವಿವೇಕ್ ಕೋಟ್ಯಾನ್ ಉಪಸ್ಥಿತರಿದ್ದರು.

ನಮ್ಮೊಂದಿಗೆ ನೀವೂ ಕೈಜೋಡಿಸಬಹುದು:

ಜಾತಿ- ಮತ- ಪಕ್ಷ ಭೇದ ರಹಿತವಾಗಿ ಸಮಾಜಸೇವೆಗೆ ಕಟಿಬದ್ಧರಾಗುವ ನಿಟ್ಟಿನಲ್ಲಿ, ಶಿಕ್ಷಣ, ಆರೋಗ್ಯ, ಆಸರೆ ಎಂಬ ಧ್ಯೇಯಗಳೊಂದಿಗೆ ಗುರುಬೆಳದಿಂಗಳು ಯೋಜನೆ ಅನುಷ್ಠಾನಗೊಂಡಿದ್ದು, ವಿದ್ಯಾರ್ಥಿಗಳಿಗೆ ಸರಸ್ವತಿಯಾಗಿ, ರೋಗಿಗಳಿಗೆ ಸಂಜೀವಿನಿಯಾಗಿ, ನೊಂದವರಿಗೆ ಕರುಣಾಮಯಿಯಾಗಿರುವ ಯೋಜನೆಯೇ ಗುರುಬೆಳದಿಂಗಳು. ಈಗಾಗಲೇ ಗುರುಬೆಳದಿಂಗಳು ಫೌಂಡೇಶನ್ ಮೂಲಕ ನೊಂದವರಿಗೆ ಮನೆ ನಿರ್ಮಾಣ, ಬಡ ಹೆಣ್ಣುಮಕ್ಕಳ ಮದುವೆ, ನೂರಾರು ರೋಗಿಗಳಗೆ ಔಷಧಕ್ಕೆ ನೆರವು, ನೂರಾರು ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗಿದೆ. ನಮ್ಮ ಸಾರ್ಥಕ ಸೇವೆಗೆ ನೀವೂ ಕೈಜೋಡಿಸಬಹುದು.

Name : GURU BELADINGALU

Bank: CANARA BANK

Account No: 110000894880

IFSC Code: CNRB0010241

Google Pay Phone Pay :  919901246123

UPI : 301617062894880@cnrb


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »