TOP STORIES:

ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದ ಬಿಲ್ಲವ ಸಮಾನ ಮನಸ್ಕರು


ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದ ಬಿಲ್ಲವ ಸಮಾನ ಮನಸ್ಕರು

ಉಡುಪಿ : ಮಾರಣಾಂತಿಕವಾಗಿ ಹಲ್ಲೆಗೊಳಗಾದ ಬಾರಕೂರಿನ ಆರ್ ಟಿ ಐ ಕಾರ್ಯಕರ್ತ ಶಂಕರ ಶಾಂತಿಯವರು‌‌ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಉಡುಪಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯವರಿಗೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ಮತ್ತು ಪದಾಧಿಕಾರಿಗಳಿಂದ ಫೆಬ್ರವರಿ 25ರಂದು ಮನವಿ ಸಲ್ಲಿಸಲಾಗಿದ್ದರೂ ದುಷ್ಕರ್ಮಿಗಳನ್ನು ಇನ್ನೂ ಬಂಧಿಸದಿರುವುದರಿಂದ ಇಂದು ಉಡುಪಿ ಬನ್ನಂಜೆ ಬಿಲ್ಲವ ಸಂಘದಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ನೇತೃತ್ವದಲ್ಲಿ ಸಮಾನ ಮನಸ್ಕರು ಜೊತೆಯಾಗಿ ಸಭೆ ಸೇರಿದರು.

ಈ ಸಂದರ್ಭ ಮಾತನಾಡಿದ ಉಡುಪಿ ಜಿಲ್ಲಾ ನಗರ ಸಭೆಯ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಸಂಘಟಿತ ಹೋರಾಟದ ಮೂಲಕ ನಾವು ಮುಂದಿನ ಹೆಜ್ಜೆ ಇಡಬೇಕಾಗಿದೆ. ಹತಾಶೆ ಭಾವನೆಯನ್ನು ಬಿಟ್ಟು ಧನಾತ್ಮಕತೆಯಲ್ಲಿ ನಾವು ಮುನ್ನಡೆಯುವ ಎಂದರು.

ರಾಮ ಮಾಸ್ಟರ್ ಶಂಕರ್ ಶಾಂತಿಯವರಿಗೆ ಧೈರ್ಯ ತುಂಬುವ ಕಾರ್ಯದೊಂದಿಗೆ ದುಷ್ಕರ್ಮಿಗಳನ್ನು ಪೋಲಿಸ್ ಇಲಾಖೆ ಬಂಧಿಸಿ ಸರಿಯಾದ ಶಿಕ್ಷೆ ಸಿಗುವವರೆಗೆ ಹೋರಾಡಬೇಕಿದೆ ಎಂದರು.

ಸಮಾನ ಮನಸ್ಕರಾದ ಕಿರಣ್ ಮಾತನಾಡಿ ಶಂಕರ್‌ ಪೂಜಾರಿ ನಿಸ್ವಾರ್ಥ ಸಮಾಜ ಸೇವಕರಾಗಿ ಸಮಾಜದಲ್ಲಿಯ ಭೃಷ್ಟರ ಭೃಷ್ಟಾಚಾರವನ್ನು ಬಯಲಿಗೆಳೆಯುವ ಕಾರ್ಯ ಮಾಡುತ್ತಿದ್ದು ಅದರಿಂದ ಸಾರ್ವಜನಿಕರಿಗೆ ಉಪಯೋಗವಾಗಿದೆ. ಆದರೆ ಭೃಷ್ಟರಿಗೆ ಕಂಟಕವಾಗಿದೆ. ಹಲ್ಲೆ ಪೂರ್ವನಿಯೋಜಿತವಾಗಿದ್ದು, ಶಂಕರ ಶಾಂತಿಯವರಿಗೆ ನ್ಯಾಯ ಸಿಗುವವರೆಗೆ ಹೋರಾಡುವ ಎಂದರು.

ಬಿಲ್ಲವ ಚಿಂತಕ‌ ದಯಾನಂದ ಉಗ್ಗೆಲ್ ಬೆಟ್ಟು ಮಾತನಾಡಿ ಸಮಾಜದಲ್ಲಿಯ ಅನ್ಯಾಯಕ್ಕೆ ತುಡಿಯುವ ಮನಸ್ಥಿತಿಯ ಶಂಕರ್ ಶಾಂತಿಯವರ ಹೋರಾಟ ಮುಂದೆಯೂ ಸಾಗಲು ನಾವೆಲ್ಲ ಅವರಿಗೆ ಧೈರ್ಯ ತುಂಬಬೇಕಾಗಿದೆ. ಕೆಲವು ಕ್ಷುಲ್ಲಕ ಮನಸಿನ ವ್ಯಕ್ತಿಗಳು ಈ ಹೋರಾಟದ‌ ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದ್ದು

ಸಭೆಯ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ವಹಿಸಿ ಮಾತನಾಡಿ ಘಟನೆ ನಡೆದು 6 ದಿವಸವಾದರೂ ಇನ್ನೂ ದುಷ್ಕರ್ಮಿಗಳನ್ನು ಬಂಧಿಸದಿರುವುದು ಪೋಲಿಸ್ ಇಲಾಖೆಯ ಮೇಲೆ ನಮಗೆ ಅನುಮಾನ ಮೂಡಿಸುತ್ತಿದೆ. ಒಂದು ವೇಳೆ ಬಂಧಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಉಪಸ್ಥಿತರಿದ್ದ ಸಮಾಜ ಬಾಂಧವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಪದಾಧಿಕಾರಿಗಳು, ಬಿಲ್ಲವ ಸಮಾಜದ ಸಮಾನ ಮನಸ್ಕರು ಉಪಸ್ಥಿತರಿದ್ದರು.


Related Posts

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ  ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ   ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ   ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್


Read More »

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »