TOP STORIES:

ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದ ಬಿಲ್ಲವ ಸಮಾನ ಮನಸ್ಕರು


ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದ ಬಿಲ್ಲವ ಸಮಾನ ಮನಸ್ಕರು

ಉಡುಪಿ : ಮಾರಣಾಂತಿಕವಾಗಿ ಹಲ್ಲೆಗೊಳಗಾದ ಬಾರಕೂರಿನ ಆರ್ ಟಿ ಐ ಕಾರ್ಯಕರ್ತ ಶಂಕರ ಶಾಂತಿಯವರು‌‌ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಉಡುಪಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯವರಿಗೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ಮತ್ತು ಪದಾಧಿಕಾರಿಗಳಿಂದ ಫೆಬ್ರವರಿ 25ರಂದು ಮನವಿ ಸಲ್ಲಿಸಲಾಗಿದ್ದರೂ ದುಷ್ಕರ್ಮಿಗಳನ್ನು ಇನ್ನೂ ಬಂಧಿಸದಿರುವುದರಿಂದ ಇಂದು ಉಡುಪಿ ಬನ್ನಂಜೆ ಬಿಲ್ಲವ ಸಂಘದಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ನೇತೃತ್ವದಲ್ಲಿ ಸಮಾನ ಮನಸ್ಕರು ಜೊತೆಯಾಗಿ ಸಭೆ ಸೇರಿದರು.

ಈ ಸಂದರ್ಭ ಮಾತನಾಡಿದ ಉಡುಪಿ ಜಿಲ್ಲಾ ನಗರ ಸಭೆಯ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಸಂಘಟಿತ ಹೋರಾಟದ ಮೂಲಕ ನಾವು ಮುಂದಿನ ಹೆಜ್ಜೆ ಇಡಬೇಕಾಗಿದೆ. ಹತಾಶೆ ಭಾವನೆಯನ್ನು ಬಿಟ್ಟು ಧನಾತ್ಮಕತೆಯಲ್ಲಿ ನಾವು ಮುನ್ನಡೆಯುವ ಎಂದರು.

ರಾಮ ಮಾಸ್ಟರ್ ಶಂಕರ್ ಶಾಂತಿಯವರಿಗೆ ಧೈರ್ಯ ತುಂಬುವ ಕಾರ್ಯದೊಂದಿಗೆ ದುಷ್ಕರ್ಮಿಗಳನ್ನು ಪೋಲಿಸ್ ಇಲಾಖೆ ಬಂಧಿಸಿ ಸರಿಯಾದ ಶಿಕ್ಷೆ ಸಿಗುವವರೆಗೆ ಹೋರಾಡಬೇಕಿದೆ ಎಂದರು.

ಸಮಾನ ಮನಸ್ಕರಾದ ಕಿರಣ್ ಮಾತನಾಡಿ ಶಂಕರ್‌ ಪೂಜಾರಿ ನಿಸ್ವಾರ್ಥ ಸಮಾಜ ಸೇವಕರಾಗಿ ಸಮಾಜದಲ್ಲಿಯ ಭೃಷ್ಟರ ಭೃಷ್ಟಾಚಾರವನ್ನು ಬಯಲಿಗೆಳೆಯುವ ಕಾರ್ಯ ಮಾಡುತ್ತಿದ್ದು ಅದರಿಂದ ಸಾರ್ವಜನಿಕರಿಗೆ ಉಪಯೋಗವಾಗಿದೆ. ಆದರೆ ಭೃಷ್ಟರಿಗೆ ಕಂಟಕವಾಗಿದೆ. ಹಲ್ಲೆ ಪೂರ್ವನಿಯೋಜಿತವಾಗಿದ್ದು, ಶಂಕರ ಶಾಂತಿಯವರಿಗೆ ನ್ಯಾಯ ಸಿಗುವವರೆಗೆ ಹೋರಾಡುವ ಎಂದರು.

ಬಿಲ್ಲವ ಚಿಂತಕ‌ ದಯಾನಂದ ಉಗ್ಗೆಲ್ ಬೆಟ್ಟು ಮಾತನಾಡಿ ಸಮಾಜದಲ್ಲಿಯ ಅನ್ಯಾಯಕ್ಕೆ ತುಡಿಯುವ ಮನಸ್ಥಿತಿಯ ಶಂಕರ್ ಶಾಂತಿಯವರ ಹೋರಾಟ ಮುಂದೆಯೂ ಸಾಗಲು ನಾವೆಲ್ಲ ಅವರಿಗೆ ಧೈರ್ಯ ತುಂಬಬೇಕಾಗಿದೆ. ಕೆಲವು ಕ್ಷುಲ್ಲಕ ಮನಸಿನ ವ್ಯಕ್ತಿಗಳು ಈ ಹೋರಾಟದ‌ ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದ್ದು

ಸಭೆಯ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ವಹಿಸಿ ಮಾತನಾಡಿ ಘಟನೆ ನಡೆದು 6 ದಿವಸವಾದರೂ ಇನ್ನೂ ದುಷ್ಕರ್ಮಿಗಳನ್ನು ಬಂಧಿಸದಿರುವುದು ಪೋಲಿಸ್ ಇಲಾಖೆಯ ಮೇಲೆ ನಮಗೆ ಅನುಮಾನ ಮೂಡಿಸುತ್ತಿದೆ. ಒಂದು ವೇಳೆ ಬಂಧಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಉಪಸ್ಥಿತರಿದ್ದ ಸಮಾಜ ಬಾಂಧವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಪದಾಧಿಕಾರಿಗಳು, ಬಿಲ್ಲವ ಸಮಾಜದ ಸಮಾನ ಮನಸ್ಕರು ಉಪಸ್ಥಿತರಿದ್ದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »