TOP STORIES:

ಇಂಡಿಯನ್ ಟಾಯ್ಲೆಟ್ V/s ವೆಸ್ಟರ್ನ್ ಟಾಯ್ಲೆಟ್ ಸೀಟ್, ಆರೋಗ್ಯಕ್ಕೆ ಯಾವುದು ಬೆಸ್ಟ್?


ಬದಲಾದ ಕಾಲಕ್ಕೆ ತಕ್ಕಂತೆ ಎಲ್ಲವೂ ಬದಲಾಗುತ್ತದೆ. ಹಾಗೆಯೇ ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲಾ ಮನೆಗಳಲ್ಲಿ ವೆಸ್ಟರ್ನ್‌ ಟಾಯ್ಲೆಟ್‌ಗಳ ಬಳಕೆ ಹೆಚ್ಚುತ್ತಿದೆ. ಹಳೆಯ ಕಾಲದ ಕೆಲವೇ ಕೆಲವು ಮನೆಗಳಲ್ಲಿ ಮಾತ್ರ ಇಂಡಿಯನ್‌ ಟಾಯ್ಲೆಟ್ ಬಳಕೆಯಲ್ಲಿದೆ. ಆದ್ರೆ ಇವೆರಡರಲ್ಲೂ ಆರೋಗ್ಯಕ್ಕೆ ಯಾವ ರೀತಿಯ ಟಾಯ್ಲೆಟ್ ಬಳಸೋದು ಉತ್ತಮ ತಿಳಿಯೋಣ.

ಭಾರತೀಯ ಶೌಚಾಲಯ ಬಳಕೆಯ ಪ್ರಯೋಜನಗಳು
ಭಾರತೀಯ ಶೌಚಾಲಯ ದೇಹ (Body)ವನ್ನು ಸದೃಢವಾಗಿರಿಸುತ್ತದೆ: ಭಾರತೀಯ ಶೌಚಾಲಯಗಳಲ್ಲಿ ಕುಳಿತುಕೊಳ್ಳುವ, ಏಳುವ ಅಭ್ಯಾಸ ಪ್ರತಿದಿನದ ವ್ಯಾಯಾಮ (Exercise)ದಂತೆ ಆಗುತ್ತದೆ. ಇದು ಒಟ್ಟಾರೆ ಆರೋಗ್ಯಕ್ಕೆ (Health) ಒಳ್ಳೆಯದು. ನಮ್ಮಲ್ಲಿ ಹೆಚ್ಚಿನವರು ವ್ಯಾಯಾಮದ ಪ್ರಾಮುಖ್ಯತೆಯನ್ನು ತಿಳಿದಿದ್ದರೂ, ಅದನ್ನು ನಿರ್ಲಕ್ಷಿಸುತ್ತಾರೆ. ಭಾರತೀಯ ಟಾಯ್ಲೆಟ್‌ಗಳಲ್ಲಿ ಕುಳಿತುಕೊಳ್ಳುವುದು ಸಣ್ಣ ಮಟ್ಟಿನ ವ್ಯಾಯಾಮ ಚಟುವಟಿಕೆಯಂತೆ ಆಗುತ್ತದೆ. ಇದು ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ ಮತ್ತು ನಿಮ್ಮ ಕೈ ಮತ್ತು ಕಾಲುಗಳಿಗೆ ಉತ್ತಮ ವ್ಯಾಯಾಮವಾಗಿದೆ ಎಂದು ಹೇಳಲಾಗುತ್ತದೆ.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ: ಸ್ಕ್ವಾಟಿಂಗ್ ನಿಮ್ಮ ಹೊಟ್ಟೆಯನ್ನು ಹಿಂಡುತ್ತದೆ, ಇದು ಹೊಟ್ಟೆಯಲ್ಲಿರುವ ಆಹಾರವನ್ನು ಒತ್ತುವ, ಒತ್ತಡದ ಮೂಲಕ ಜೀರ್ಣಕ್ರಿಯೆಗೆ (Digestion) ಸಹಾಯ ಮಾಡುತ್ತದೆ. ಪಾಶ್ಚಿಮಾತ್ಯ ಶೈಲಿಯ ಶೌಚಾಲಯದಲ್ಲಿ ಕುಳಿತುಕೊಳ್ಳುವುದು ಹೊಟ್ಟೆಯ ಮೇಲೆ ಯಾವುದೇ ಒತ್ತಡವನ್ನು ಬೀರುವುದಿಲ್ಲ.

ಭಾರತೀಯ ಶೌಚಾಲಯಗಳು ಪರಿಸರ ಸ್ನೇಹಿ: ಪಾಶ್ಚಿಮಾತ್ಯ ಶೌಚಾಲಯಗಳಲ್ಲಿ ಟಾಯ್ಲೆಟ್ ಪೇಪರ್‌ನ್ನು ಬಳಸಬೇಕಾಗುತ್ತದೆ. ಇದು ಕಾಗದದ ವ್ಯರ್ಥಕ್ಕೆ ಕಾರಣವಾಗುತ್ತದೆ. ಭಾರತೀಯ ಶೌಚಾಲಯಗಳಲ್ಲಿ ಪೇಪರ್ ವೇಸ್ಟ್ ಆಗುವುದಿಲ್ಲ. ಭಾರತೀಯ ಶೌಚಾಲಯಗಳಿಗೆ ಹೋಲಿಸಿದರೆ ಪಾಶ್ಚಿಮಾತ್ಯ ಶೌಚಾಲಯಗಳಿಗೆ ಇನ್ನೂ ಹೆಚ್ಚಿನ ನೀರಿನ ಅಗತ್ಯವಿರುತ್ತದೆ.

ಹೊತ್ತು ಗೊತ್ತಿಲ್ಲದ ಹೊತ್ತಲ್ಲಿ ಟಾಯ್ಲೆಟ್‌ಗೆ ಹೋಗೋದು ಅನಾರೋಗ್ಯದ ಲಕ್ಷಣ!

ಭಾರತೀಯ ಶೌಚಾಲಯಗಳು ಗರ್ಭಿಣಿಯರಿಗೆ ಒಳ್ಳೆಯದು: ಭಾರತೀಯ ಶೌಚಾಲಯಗಳನ್ನು ಬಳಸುವುದು ಗರ್ಭಿಣಿಯರಿಗೆ (Pregnant) ಪ್ರಯೋಜನಕಾರಿಯಾಗಿದೆ ಏಕೆಂದರೆ ಅವುಗಳನ್ನು ಬಳಸುವಾಗ ಅವರು ಕುಳಿತುಕೊಳ್ಳಬೇಕಾಗುತ್ತದೆ. ಗರ್ಭಿಣಿ ಮಹಿಳೆ ಭಾರತೀಯ ಶೌಚಾಲಯದಲ್ಲಿ ಕುಳಿತುಕೊಳ್ಳುವಾಗ ಗರ್ಭಾಶಯದ ಮೇಲೆ ಯಾವುದೇ ಒತ್ತಡವಿಲ್ಲ. ಭಾರತೀಯ ಶೌಚಾಲಯವನ್ನು ನಿಯಮಿತವಾಗಿ ಬಳಸುವುದರಿಂದ ಗರ್ಭಿಣಿಯರು ಸುಗಮ ಮತ್ತು ನೈಸರ್ಗಿಕ ಹೆರಿಗೆಗೆ ಸಿದ್ಧರಾಗುತ್ತಾರೆ ಎಂದು ಹೇಳಲಾಗುತ್ತದೆ.

ಕರುಳಿನ ಕ್ಯಾನ್ಸರ್ ಮತ್ತು ಇತರ ಕಾಯಿಲೆಗಳನ್ನು ತಡೆಯುತ್ತದೆ: ಸ್ಕ್ವಾಟಿಂಗ್ ನಮ್ಮ ದೇಹದಲ್ಲಿನ ಕೊಲೊನ್‌ನಿಂದ ಮಲವನ್ನು ಸಂಪೂರ್ಣವಾಗಿ ಹೊರಹಾಕಲು ಸಹಾಯ ಮಾಡುತ್ತದೆ. ಇದು ಮಲಬದ್ಧತೆ, ಅಪೆಂಡಿಸೈಟಿಸ್ ಮತ್ತು ಕರುಳಿನ ಕ್ಯಾನ್ಸರ್‌ಗೆ ಕಾರಣವಾಗುವ ಇತರ ಅಂಶಗಳ ಸಾಧ್ಯತೆಗಳನ್ನು ತಡೆಯುತ್ತದೆ.

ವೆಸ್ಟರ್ನ್ ಶೌಚಾಲಯ ಬಳಕೆಯಿಂದಾಗುವ ತೊಂದರೆಗಳು
ವೆಸ್ಟರ್ನ್ ಟಾಯ್ಲೆಟ್ ಶೀಟ್ ಕೂಡ ಅನೇಕ ಪ್ರಯೋಜನಗಳನ್ನ ಹೊಂದಿದೆ. ವೆಸ್ಟರ್ನ್ ಟಾಯ್ಲೆಟ್ ವಿಶೇಷವಾಗಿ ಕಾಲುನೋವಿನ ಸಮಸ್ಯೆಯಿಂದ ಕುಳಿತುಕೊಳ್ಳಲು ಸಾಧ್ಯವಾಗದವರಿಗೆ, ಕೀಲು ನೋವಿನಿಂದ ಬಳಲುತ್ತಿರುವ ಜನರಿಗೆ ತುಂಬಾ ಆರಾಮದಾಯಕವಾಗಿದೆ. ಆದರೆ ಇದರಿಂದಾಗುವ ಅನಾನುಕೂಲಗಳು ಹೆಚ್ಚು. ವಿಪರ್ಯಾಸವೆಂದರೆ ಆರೋಗ್ಯವಂತರೂ ಇದನ್ನು ಬಳಸುತ್ತಿದ್ದಾರೆ. ಆದ್ರೆ, ವಸ್ಟರ್ನ್ ಶೌಚಾಲಯವು ಅನುಕೂಲಗಳನ್ನ ಹೊಂದಿದೆ. ಈ ಕಾರಣದಿಂದಾಗಿ, ವ್ಯಕ್ತಿಯು ಅನಾರೋಗ್ಯಕ್ಕೆ ಒಳಗಾಗುತ್ತಾನೆ. ಪಾಶ್ಚಿಮಾತ್ಯ ಶೌಚಾಲಯಕ್ಕೆ ಹೋಗುವ ಅಭ್ಯಾಸ ದೇಹದ ಸೋಂಕಿನ ಅಪಾಯವನ್ನ ಹೆಚ್ಚಿಸುತ್ತದೆ. ಇದು ಅತಿಸಾರ ಮತ್ತು ಅನೇಕ ಹೊಟ್ಟೆ ಸಮಸ್ಯೆಗಳನ್ನ ಉಂಟು ಮಾಡಬಹುದು. ಯಾಕಂದ್ರೆ, ವೆಸ್ಟರ್ನ್ ಟಾಯ್ಲೆಟ್ ಸೀಟ್ ಬಳಸುವಾಗ ಚರ್ಮ ಸಂಪರ್ಕಕ್ಕೆ ಬರುತ್ತದೆ. ಇದರಿಂದ ರೋಗಾಣುಗಳು ಸುಲಭವಾಗಿ ಹರಡಬಹುದು.


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »