TOP STORIES:

FOLLOW US

ಇಂಡಿಯನ್ ಟಾಯ್ಲೆಟ್ V/s ವೆಸ್ಟರ್ನ್ ಟಾಯ್ಲೆಟ್ ಸೀಟ್, ಆರೋಗ್ಯಕ್ಕೆ ಯಾವುದು ಬೆಸ್ಟ್?


ಬದಲಾದ ಕಾಲಕ್ಕೆ ತಕ್ಕಂತೆ ಎಲ್ಲವೂ ಬದಲಾಗುತ್ತದೆ. ಹಾಗೆಯೇ ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲಾ ಮನೆಗಳಲ್ಲಿ ವೆಸ್ಟರ್ನ್‌ ಟಾಯ್ಲೆಟ್‌ಗಳ ಬಳಕೆ ಹೆಚ್ಚುತ್ತಿದೆ. ಹಳೆಯ ಕಾಲದ ಕೆಲವೇ ಕೆಲವು ಮನೆಗಳಲ್ಲಿ ಮಾತ್ರ ಇಂಡಿಯನ್‌ ಟಾಯ್ಲೆಟ್ ಬಳಕೆಯಲ್ಲಿದೆ. ಆದ್ರೆ ಇವೆರಡರಲ್ಲೂ ಆರೋಗ್ಯಕ್ಕೆ ಯಾವ ರೀತಿಯ ಟಾಯ್ಲೆಟ್ ಬಳಸೋದು ಉತ್ತಮ ತಿಳಿಯೋಣ.

ಭಾರತೀಯ ಶೌಚಾಲಯ ಬಳಕೆಯ ಪ್ರಯೋಜನಗಳು
ಭಾರತೀಯ ಶೌಚಾಲಯ ದೇಹ (Body)ವನ್ನು ಸದೃಢವಾಗಿರಿಸುತ್ತದೆ: ಭಾರತೀಯ ಶೌಚಾಲಯಗಳಲ್ಲಿ ಕುಳಿತುಕೊಳ್ಳುವ, ಏಳುವ ಅಭ್ಯಾಸ ಪ್ರತಿದಿನದ ವ್ಯಾಯಾಮ (Exercise)ದಂತೆ ಆಗುತ್ತದೆ. ಇದು ಒಟ್ಟಾರೆ ಆರೋಗ್ಯಕ್ಕೆ (Health) ಒಳ್ಳೆಯದು. ನಮ್ಮಲ್ಲಿ ಹೆಚ್ಚಿನವರು ವ್ಯಾಯಾಮದ ಪ್ರಾಮುಖ್ಯತೆಯನ್ನು ತಿಳಿದಿದ್ದರೂ, ಅದನ್ನು ನಿರ್ಲಕ್ಷಿಸುತ್ತಾರೆ. ಭಾರತೀಯ ಟಾಯ್ಲೆಟ್‌ಗಳಲ್ಲಿ ಕುಳಿತುಕೊಳ್ಳುವುದು ಸಣ್ಣ ಮಟ್ಟಿನ ವ್ಯಾಯಾಮ ಚಟುವಟಿಕೆಯಂತೆ ಆಗುತ್ತದೆ. ಇದು ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ ಮತ್ತು ನಿಮ್ಮ ಕೈ ಮತ್ತು ಕಾಲುಗಳಿಗೆ ಉತ್ತಮ ವ್ಯಾಯಾಮವಾಗಿದೆ ಎಂದು ಹೇಳಲಾಗುತ್ತದೆ.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ: ಸ್ಕ್ವಾಟಿಂಗ್ ನಿಮ್ಮ ಹೊಟ್ಟೆಯನ್ನು ಹಿಂಡುತ್ತದೆ, ಇದು ಹೊಟ್ಟೆಯಲ್ಲಿರುವ ಆಹಾರವನ್ನು ಒತ್ತುವ, ಒತ್ತಡದ ಮೂಲಕ ಜೀರ್ಣಕ್ರಿಯೆಗೆ (Digestion) ಸಹಾಯ ಮಾಡುತ್ತದೆ. ಪಾಶ್ಚಿಮಾತ್ಯ ಶೈಲಿಯ ಶೌಚಾಲಯದಲ್ಲಿ ಕುಳಿತುಕೊಳ್ಳುವುದು ಹೊಟ್ಟೆಯ ಮೇಲೆ ಯಾವುದೇ ಒತ್ತಡವನ್ನು ಬೀರುವುದಿಲ್ಲ.

ಭಾರತೀಯ ಶೌಚಾಲಯಗಳು ಪರಿಸರ ಸ್ನೇಹಿ: ಪಾಶ್ಚಿಮಾತ್ಯ ಶೌಚಾಲಯಗಳಲ್ಲಿ ಟಾಯ್ಲೆಟ್ ಪೇಪರ್‌ನ್ನು ಬಳಸಬೇಕಾಗುತ್ತದೆ. ಇದು ಕಾಗದದ ವ್ಯರ್ಥಕ್ಕೆ ಕಾರಣವಾಗುತ್ತದೆ. ಭಾರತೀಯ ಶೌಚಾಲಯಗಳಲ್ಲಿ ಪೇಪರ್ ವೇಸ್ಟ್ ಆಗುವುದಿಲ್ಲ. ಭಾರತೀಯ ಶೌಚಾಲಯಗಳಿಗೆ ಹೋಲಿಸಿದರೆ ಪಾಶ್ಚಿಮಾತ್ಯ ಶೌಚಾಲಯಗಳಿಗೆ ಇನ್ನೂ ಹೆಚ್ಚಿನ ನೀರಿನ ಅಗತ್ಯವಿರುತ್ತದೆ.

ಹೊತ್ತು ಗೊತ್ತಿಲ್ಲದ ಹೊತ್ತಲ್ಲಿ ಟಾಯ್ಲೆಟ್‌ಗೆ ಹೋಗೋದು ಅನಾರೋಗ್ಯದ ಲಕ್ಷಣ!

ಭಾರತೀಯ ಶೌಚಾಲಯಗಳು ಗರ್ಭಿಣಿಯರಿಗೆ ಒಳ್ಳೆಯದು: ಭಾರತೀಯ ಶೌಚಾಲಯಗಳನ್ನು ಬಳಸುವುದು ಗರ್ಭಿಣಿಯರಿಗೆ (Pregnant) ಪ್ರಯೋಜನಕಾರಿಯಾಗಿದೆ ಏಕೆಂದರೆ ಅವುಗಳನ್ನು ಬಳಸುವಾಗ ಅವರು ಕುಳಿತುಕೊಳ್ಳಬೇಕಾಗುತ್ತದೆ. ಗರ್ಭಿಣಿ ಮಹಿಳೆ ಭಾರತೀಯ ಶೌಚಾಲಯದಲ್ಲಿ ಕುಳಿತುಕೊಳ್ಳುವಾಗ ಗರ್ಭಾಶಯದ ಮೇಲೆ ಯಾವುದೇ ಒತ್ತಡವಿಲ್ಲ. ಭಾರತೀಯ ಶೌಚಾಲಯವನ್ನು ನಿಯಮಿತವಾಗಿ ಬಳಸುವುದರಿಂದ ಗರ್ಭಿಣಿಯರು ಸುಗಮ ಮತ್ತು ನೈಸರ್ಗಿಕ ಹೆರಿಗೆಗೆ ಸಿದ್ಧರಾಗುತ್ತಾರೆ ಎಂದು ಹೇಳಲಾಗುತ್ತದೆ.

ಕರುಳಿನ ಕ್ಯಾನ್ಸರ್ ಮತ್ತು ಇತರ ಕಾಯಿಲೆಗಳನ್ನು ತಡೆಯುತ್ತದೆ: ಸ್ಕ್ವಾಟಿಂಗ್ ನಮ್ಮ ದೇಹದಲ್ಲಿನ ಕೊಲೊನ್‌ನಿಂದ ಮಲವನ್ನು ಸಂಪೂರ್ಣವಾಗಿ ಹೊರಹಾಕಲು ಸಹಾಯ ಮಾಡುತ್ತದೆ. ಇದು ಮಲಬದ್ಧತೆ, ಅಪೆಂಡಿಸೈಟಿಸ್ ಮತ್ತು ಕರುಳಿನ ಕ್ಯಾನ್ಸರ್‌ಗೆ ಕಾರಣವಾಗುವ ಇತರ ಅಂಶಗಳ ಸಾಧ್ಯತೆಗಳನ್ನು ತಡೆಯುತ್ತದೆ.

ವೆಸ್ಟರ್ನ್ ಶೌಚಾಲಯ ಬಳಕೆಯಿಂದಾಗುವ ತೊಂದರೆಗಳು
ವೆಸ್ಟರ್ನ್ ಟಾಯ್ಲೆಟ್ ಶೀಟ್ ಕೂಡ ಅನೇಕ ಪ್ರಯೋಜನಗಳನ್ನ ಹೊಂದಿದೆ. ವೆಸ್ಟರ್ನ್ ಟಾಯ್ಲೆಟ್ ವಿಶೇಷವಾಗಿ ಕಾಲುನೋವಿನ ಸಮಸ್ಯೆಯಿಂದ ಕುಳಿತುಕೊಳ್ಳಲು ಸಾಧ್ಯವಾಗದವರಿಗೆ, ಕೀಲು ನೋವಿನಿಂದ ಬಳಲುತ್ತಿರುವ ಜನರಿಗೆ ತುಂಬಾ ಆರಾಮದಾಯಕವಾಗಿದೆ. ಆದರೆ ಇದರಿಂದಾಗುವ ಅನಾನುಕೂಲಗಳು ಹೆಚ್ಚು. ವಿಪರ್ಯಾಸವೆಂದರೆ ಆರೋಗ್ಯವಂತರೂ ಇದನ್ನು ಬಳಸುತ್ತಿದ್ದಾರೆ. ಆದ್ರೆ, ವಸ್ಟರ್ನ್ ಶೌಚಾಲಯವು ಅನುಕೂಲಗಳನ್ನ ಹೊಂದಿದೆ. ಈ ಕಾರಣದಿಂದಾಗಿ, ವ್ಯಕ್ತಿಯು ಅನಾರೋಗ್ಯಕ್ಕೆ ಒಳಗಾಗುತ್ತಾನೆ. ಪಾಶ್ಚಿಮಾತ್ಯ ಶೌಚಾಲಯಕ್ಕೆ ಹೋಗುವ ಅಭ್ಯಾಸ ದೇಹದ ಸೋಂಕಿನ ಅಪಾಯವನ್ನ ಹೆಚ್ಚಿಸುತ್ತದೆ. ಇದು ಅತಿಸಾರ ಮತ್ತು ಅನೇಕ ಹೊಟ್ಟೆ ಸಮಸ್ಯೆಗಳನ್ನ ಉಂಟು ಮಾಡಬಹುದು. ಯಾಕಂದ್ರೆ, ವೆಸ್ಟರ್ನ್ ಟಾಯ್ಲೆಟ್ ಸೀಟ್ ಬಳಸುವಾಗ ಚರ್ಮ ಸಂಪರ್ಕಕ್ಕೆ ಬರುತ್ತದೆ. ಇದರಿಂದ ರೋಗಾಣುಗಳು ಸುಲಭವಾಗಿ ಹರಡಬಹುದು.


Share:

More Posts

Category

Send Us A Message

Related Posts

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »