TOP STORIES:

FOLLOW US

ಇಂಡಿಯನ್ ಟಾಯ್ಲೆಟ್ V/s ವೆಸ್ಟರ್ನ್ ಟಾಯ್ಲೆಟ್ ಸೀಟ್, ಆರೋಗ್ಯಕ್ಕೆ ಯಾವುದು ಬೆಸ್ಟ್?


ಬದಲಾದ ಕಾಲಕ್ಕೆ ತಕ್ಕಂತೆ ಎಲ್ಲವೂ ಬದಲಾಗುತ್ತದೆ. ಹಾಗೆಯೇ ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲಾ ಮನೆಗಳಲ್ಲಿ ವೆಸ್ಟರ್ನ್‌ ಟಾಯ್ಲೆಟ್‌ಗಳ ಬಳಕೆ ಹೆಚ್ಚುತ್ತಿದೆ. ಹಳೆಯ ಕಾಲದ ಕೆಲವೇ ಕೆಲವು ಮನೆಗಳಲ್ಲಿ ಮಾತ್ರ ಇಂಡಿಯನ್‌ ಟಾಯ್ಲೆಟ್ ಬಳಕೆಯಲ್ಲಿದೆ. ಆದ್ರೆ ಇವೆರಡರಲ್ಲೂ ಆರೋಗ್ಯಕ್ಕೆ ಯಾವ ರೀತಿಯ ಟಾಯ್ಲೆಟ್ ಬಳಸೋದು ಉತ್ತಮ ತಿಳಿಯೋಣ.

ಭಾರತೀಯ ಶೌಚಾಲಯ ಬಳಕೆಯ ಪ್ರಯೋಜನಗಳು
ಭಾರತೀಯ ಶೌಚಾಲಯ ದೇಹ (Body)ವನ್ನು ಸದೃಢವಾಗಿರಿಸುತ್ತದೆ: ಭಾರತೀಯ ಶೌಚಾಲಯಗಳಲ್ಲಿ ಕುಳಿತುಕೊಳ್ಳುವ, ಏಳುವ ಅಭ್ಯಾಸ ಪ್ರತಿದಿನದ ವ್ಯಾಯಾಮ (Exercise)ದಂತೆ ಆಗುತ್ತದೆ. ಇದು ಒಟ್ಟಾರೆ ಆರೋಗ್ಯಕ್ಕೆ (Health) ಒಳ್ಳೆಯದು. ನಮ್ಮಲ್ಲಿ ಹೆಚ್ಚಿನವರು ವ್ಯಾಯಾಮದ ಪ್ರಾಮುಖ್ಯತೆಯನ್ನು ತಿಳಿದಿದ್ದರೂ, ಅದನ್ನು ನಿರ್ಲಕ್ಷಿಸುತ್ತಾರೆ. ಭಾರತೀಯ ಟಾಯ್ಲೆಟ್‌ಗಳಲ್ಲಿ ಕುಳಿತುಕೊಳ್ಳುವುದು ಸಣ್ಣ ಮಟ್ಟಿನ ವ್ಯಾಯಾಮ ಚಟುವಟಿಕೆಯಂತೆ ಆಗುತ್ತದೆ. ಇದು ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ ಮತ್ತು ನಿಮ್ಮ ಕೈ ಮತ್ತು ಕಾಲುಗಳಿಗೆ ಉತ್ತಮ ವ್ಯಾಯಾಮವಾಗಿದೆ ಎಂದು ಹೇಳಲಾಗುತ್ತದೆ.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ: ಸ್ಕ್ವಾಟಿಂಗ್ ನಿಮ್ಮ ಹೊಟ್ಟೆಯನ್ನು ಹಿಂಡುತ್ತದೆ, ಇದು ಹೊಟ್ಟೆಯಲ್ಲಿರುವ ಆಹಾರವನ್ನು ಒತ್ತುವ, ಒತ್ತಡದ ಮೂಲಕ ಜೀರ್ಣಕ್ರಿಯೆಗೆ (Digestion) ಸಹಾಯ ಮಾಡುತ್ತದೆ. ಪಾಶ್ಚಿಮಾತ್ಯ ಶೈಲಿಯ ಶೌಚಾಲಯದಲ್ಲಿ ಕುಳಿತುಕೊಳ್ಳುವುದು ಹೊಟ್ಟೆಯ ಮೇಲೆ ಯಾವುದೇ ಒತ್ತಡವನ್ನು ಬೀರುವುದಿಲ್ಲ.

ಭಾರತೀಯ ಶೌಚಾಲಯಗಳು ಪರಿಸರ ಸ್ನೇಹಿ: ಪಾಶ್ಚಿಮಾತ್ಯ ಶೌಚಾಲಯಗಳಲ್ಲಿ ಟಾಯ್ಲೆಟ್ ಪೇಪರ್‌ನ್ನು ಬಳಸಬೇಕಾಗುತ್ತದೆ. ಇದು ಕಾಗದದ ವ್ಯರ್ಥಕ್ಕೆ ಕಾರಣವಾಗುತ್ತದೆ. ಭಾರತೀಯ ಶೌಚಾಲಯಗಳಲ್ಲಿ ಪೇಪರ್ ವೇಸ್ಟ್ ಆಗುವುದಿಲ್ಲ. ಭಾರತೀಯ ಶೌಚಾಲಯಗಳಿಗೆ ಹೋಲಿಸಿದರೆ ಪಾಶ್ಚಿಮಾತ್ಯ ಶೌಚಾಲಯಗಳಿಗೆ ಇನ್ನೂ ಹೆಚ್ಚಿನ ನೀರಿನ ಅಗತ್ಯವಿರುತ್ತದೆ.

ಹೊತ್ತು ಗೊತ್ತಿಲ್ಲದ ಹೊತ್ತಲ್ಲಿ ಟಾಯ್ಲೆಟ್‌ಗೆ ಹೋಗೋದು ಅನಾರೋಗ್ಯದ ಲಕ್ಷಣ!

ಭಾರತೀಯ ಶೌಚಾಲಯಗಳು ಗರ್ಭಿಣಿಯರಿಗೆ ಒಳ್ಳೆಯದು: ಭಾರತೀಯ ಶೌಚಾಲಯಗಳನ್ನು ಬಳಸುವುದು ಗರ್ಭಿಣಿಯರಿಗೆ (Pregnant) ಪ್ರಯೋಜನಕಾರಿಯಾಗಿದೆ ಏಕೆಂದರೆ ಅವುಗಳನ್ನು ಬಳಸುವಾಗ ಅವರು ಕುಳಿತುಕೊಳ್ಳಬೇಕಾಗುತ್ತದೆ. ಗರ್ಭಿಣಿ ಮಹಿಳೆ ಭಾರತೀಯ ಶೌಚಾಲಯದಲ್ಲಿ ಕುಳಿತುಕೊಳ್ಳುವಾಗ ಗರ್ಭಾಶಯದ ಮೇಲೆ ಯಾವುದೇ ಒತ್ತಡವಿಲ್ಲ. ಭಾರತೀಯ ಶೌಚಾಲಯವನ್ನು ನಿಯಮಿತವಾಗಿ ಬಳಸುವುದರಿಂದ ಗರ್ಭಿಣಿಯರು ಸುಗಮ ಮತ್ತು ನೈಸರ್ಗಿಕ ಹೆರಿಗೆಗೆ ಸಿದ್ಧರಾಗುತ್ತಾರೆ ಎಂದು ಹೇಳಲಾಗುತ್ತದೆ.

ಕರುಳಿನ ಕ್ಯಾನ್ಸರ್ ಮತ್ತು ಇತರ ಕಾಯಿಲೆಗಳನ್ನು ತಡೆಯುತ್ತದೆ: ಸ್ಕ್ವಾಟಿಂಗ್ ನಮ್ಮ ದೇಹದಲ್ಲಿನ ಕೊಲೊನ್‌ನಿಂದ ಮಲವನ್ನು ಸಂಪೂರ್ಣವಾಗಿ ಹೊರಹಾಕಲು ಸಹಾಯ ಮಾಡುತ್ತದೆ. ಇದು ಮಲಬದ್ಧತೆ, ಅಪೆಂಡಿಸೈಟಿಸ್ ಮತ್ತು ಕರುಳಿನ ಕ್ಯಾನ್ಸರ್‌ಗೆ ಕಾರಣವಾಗುವ ಇತರ ಅಂಶಗಳ ಸಾಧ್ಯತೆಗಳನ್ನು ತಡೆಯುತ್ತದೆ.

ವೆಸ್ಟರ್ನ್ ಶೌಚಾಲಯ ಬಳಕೆಯಿಂದಾಗುವ ತೊಂದರೆಗಳು
ವೆಸ್ಟರ್ನ್ ಟಾಯ್ಲೆಟ್ ಶೀಟ್ ಕೂಡ ಅನೇಕ ಪ್ರಯೋಜನಗಳನ್ನ ಹೊಂದಿದೆ. ವೆಸ್ಟರ್ನ್ ಟಾಯ್ಲೆಟ್ ವಿಶೇಷವಾಗಿ ಕಾಲುನೋವಿನ ಸಮಸ್ಯೆಯಿಂದ ಕುಳಿತುಕೊಳ್ಳಲು ಸಾಧ್ಯವಾಗದವರಿಗೆ, ಕೀಲು ನೋವಿನಿಂದ ಬಳಲುತ್ತಿರುವ ಜನರಿಗೆ ತುಂಬಾ ಆರಾಮದಾಯಕವಾಗಿದೆ. ಆದರೆ ಇದರಿಂದಾಗುವ ಅನಾನುಕೂಲಗಳು ಹೆಚ್ಚು. ವಿಪರ್ಯಾಸವೆಂದರೆ ಆರೋಗ್ಯವಂತರೂ ಇದನ್ನು ಬಳಸುತ್ತಿದ್ದಾರೆ. ಆದ್ರೆ, ವಸ್ಟರ್ನ್ ಶೌಚಾಲಯವು ಅನುಕೂಲಗಳನ್ನ ಹೊಂದಿದೆ. ಈ ಕಾರಣದಿಂದಾಗಿ, ವ್ಯಕ್ತಿಯು ಅನಾರೋಗ್ಯಕ್ಕೆ ಒಳಗಾಗುತ್ತಾನೆ. ಪಾಶ್ಚಿಮಾತ್ಯ ಶೌಚಾಲಯಕ್ಕೆ ಹೋಗುವ ಅಭ್ಯಾಸ ದೇಹದ ಸೋಂಕಿನ ಅಪಾಯವನ್ನ ಹೆಚ್ಚಿಸುತ್ತದೆ. ಇದು ಅತಿಸಾರ ಮತ್ತು ಅನೇಕ ಹೊಟ್ಟೆ ಸಮಸ್ಯೆಗಳನ್ನ ಉಂಟು ಮಾಡಬಹುದು. ಯಾಕಂದ್ರೆ, ವೆಸ್ಟರ್ನ್ ಟಾಯ್ಲೆಟ್ ಸೀಟ್ ಬಳಸುವಾಗ ಚರ್ಮ ಸಂಪರ್ಕಕ್ಕೆ ಬರುತ್ತದೆ. ಇದರಿಂದ ರೋಗಾಣುಗಳು ಸುಲಭವಾಗಿ ಹರಡಬಹುದು.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »