TOP STORIES:

FOLLOW US

ಇಂಡಿಯನ್ ಟಾಯ್ಲೆಟ್ V/s ವೆಸ್ಟರ್ನ್ ಟಾಯ್ಲೆಟ್ ಸೀಟ್, ಆರೋಗ್ಯಕ್ಕೆ ಯಾವುದು ಬೆಸ್ಟ್?


ಬದಲಾದ ಕಾಲಕ್ಕೆ ತಕ್ಕಂತೆ ಎಲ್ಲವೂ ಬದಲಾಗುತ್ತದೆ. ಹಾಗೆಯೇ ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲಾ ಮನೆಗಳಲ್ಲಿ ವೆಸ್ಟರ್ನ್‌ ಟಾಯ್ಲೆಟ್‌ಗಳ ಬಳಕೆ ಹೆಚ್ಚುತ್ತಿದೆ. ಹಳೆಯ ಕಾಲದ ಕೆಲವೇ ಕೆಲವು ಮನೆಗಳಲ್ಲಿ ಮಾತ್ರ ಇಂಡಿಯನ್‌ ಟಾಯ್ಲೆಟ್ ಬಳಕೆಯಲ್ಲಿದೆ. ಆದ್ರೆ ಇವೆರಡರಲ್ಲೂ ಆರೋಗ್ಯಕ್ಕೆ ಯಾವ ರೀತಿಯ ಟಾಯ್ಲೆಟ್ ಬಳಸೋದು ಉತ್ತಮ ತಿಳಿಯೋಣ.

ಭಾರತೀಯ ಶೌಚಾಲಯ ಬಳಕೆಯ ಪ್ರಯೋಜನಗಳು
ಭಾರತೀಯ ಶೌಚಾಲಯ ದೇಹ (Body)ವನ್ನು ಸದೃಢವಾಗಿರಿಸುತ್ತದೆ: ಭಾರತೀಯ ಶೌಚಾಲಯಗಳಲ್ಲಿ ಕುಳಿತುಕೊಳ್ಳುವ, ಏಳುವ ಅಭ್ಯಾಸ ಪ್ರತಿದಿನದ ವ್ಯಾಯಾಮ (Exercise)ದಂತೆ ಆಗುತ್ತದೆ. ಇದು ಒಟ್ಟಾರೆ ಆರೋಗ್ಯಕ್ಕೆ (Health) ಒಳ್ಳೆಯದು. ನಮ್ಮಲ್ಲಿ ಹೆಚ್ಚಿನವರು ವ್ಯಾಯಾಮದ ಪ್ರಾಮುಖ್ಯತೆಯನ್ನು ತಿಳಿದಿದ್ದರೂ, ಅದನ್ನು ನಿರ್ಲಕ್ಷಿಸುತ್ತಾರೆ. ಭಾರತೀಯ ಟಾಯ್ಲೆಟ್‌ಗಳಲ್ಲಿ ಕುಳಿತುಕೊಳ್ಳುವುದು ಸಣ್ಣ ಮಟ್ಟಿನ ವ್ಯಾಯಾಮ ಚಟುವಟಿಕೆಯಂತೆ ಆಗುತ್ತದೆ. ಇದು ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ ಮತ್ತು ನಿಮ್ಮ ಕೈ ಮತ್ತು ಕಾಲುಗಳಿಗೆ ಉತ್ತಮ ವ್ಯಾಯಾಮವಾಗಿದೆ ಎಂದು ಹೇಳಲಾಗುತ್ತದೆ.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ: ಸ್ಕ್ವಾಟಿಂಗ್ ನಿಮ್ಮ ಹೊಟ್ಟೆಯನ್ನು ಹಿಂಡುತ್ತದೆ, ಇದು ಹೊಟ್ಟೆಯಲ್ಲಿರುವ ಆಹಾರವನ್ನು ಒತ್ತುವ, ಒತ್ತಡದ ಮೂಲಕ ಜೀರ್ಣಕ್ರಿಯೆಗೆ (Digestion) ಸಹಾಯ ಮಾಡುತ್ತದೆ. ಪಾಶ್ಚಿಮಾತ್ಯ ಶೈಲಿಯ ಶೌಚಾಲಯದಲ್ಲಿ ಕುಳಿತುಕೊಳ್ಳುವುದು ಹೊಟ್ಟೆಯ ಮೇಲೆ ಯಾವುದೇ ಒತ್ತಡವನ್ನು ಬೀರುವುದಿಲ್ಲ.

ಭಾರತೀಯ ಶೌಚಾಲಯಗಳು ಪರಿಸರ ಸ್ನೇಹಿ: ಪಾಶ್ಚಿಮಾತ್ಯ ಶೌಚಾಲಯಗಳಲ್ಲಿ ಟಾಯ್ಲೆಟ್ ಪೇಪರ್‌ನ್ನು ಬಳಸಬೇಕಾಗುತ್ತದೆ. ಇದು ಕಾಗದದ ವ್ಯರ್ಥಕ್ಕೆ ಕಾರಣವಾಗುತ್ತದೆ. ಭಾರತೀಯ ಶೌಚಾಲಯಗಳಲ್ಲಿ ಪೇಪರ್ ವೇಸ್ಟ್ ಆಗುವುದಿಲ್ಲ. ಭಾರತೀಯ ಶೌಚಾಲಯಗಳಿಗೆ ಹೋಲಿಸಿದರೆ ಪಾಶ್ಚಿಮಾತ್ಯ ಶೌಚಾಲಯಗಳಿಗೆ ಇನ್ನೂ ಹೆಚ್ಚಿನ ನೀರಿನ ಅಗತ್ಯವಿರುತ್ತದೆ.

ಹೊತ್ತು ಗೊತ್ತಿಲ್ಲದ ಹೊತ್ತಲ್ಲಿ ಟಾಯ್ಲೆಟ್‌ಗೆ ಹೋಗೋದು ಅನಾರೋಗ್ಯದ ಲಕ್ಷಣ!

ಭಾರತೀಯ ಶೌಚಾಲಯಗಳು ಗರ್ಭಿಣಿಯರಿಗೆ ಒಳ್ಳೆಯದು: ಭಾರತೀಯ ಶೌಚಾಲಯಗಳನ್ನು ಬಳಸುವುದು ಗರ್ಭಿಣಿಯರಿಗೆ (Pregnant) ಪ್ರಯೋಜನಕಾರಿಯಾಗಿದೆ ಏಕೆಂದರೆ ಅವುಗಳನ್ನು ಬಳಸುವಾಗ ಅವರು ಕುಳಿತುಕೊಳ್ಳಬೇಕಾಗುತ್ತದೆ. ಗರ್ಭಿಣಿ ಮಹಿಳೆ ಭಾರತೀಯ ಶೌಚಾಲಯದಲ್ಲಿ ಕುಳಿತುಕೊಳ್ಳುವಾಗ ಗರ್ಭಾಶಯದ ಮೇಲೆ ಯಾವುದೇ ಒತ್ತಡವಿಲ್ಲ. ಭಾರತೀಯ ಶೌಚಾಲಯವನ್ನು ನಿಯಮಿತವಾಗಿ ಬಳಸುವುದರಿಂದ ಗರ್ಭಿಣಿಯರು ಸುಗಮ ಮತ್ತು ನೈಸರ್ಗಿಕ ಹೆರಿಗೆಗೆ ಸಿದ್ಧರಾಗುತ್ತಾರೆ ಎಂದು ಹೇಳಲಾಗುತ್ತದೆ.

ಕರುಳಿನ ಕ್ಯಾನ್ಸರ್ ಮತ್ತು ಇತರ ಕಾಯಿಲೆಗಳನ್ನು ತಡೆಯುತ್ತದೆ: ಸ್ಕ್ವಾಟಿಂಗ್ ನಮ್ಮ ದೇಹದಲ್ಲಿನ ಕೊಲೊನ್‌ನಿಂದ ಮಲವನ್ನು ಸಂಪೂರ್ಣವಾಗಿ ಹೊರಹಾಕಲು ಸಹಾಯ ಮಾಡುತ್ತದೆ. ಇದು ಮಲಬದ್ಧತೆ, ಅಪೆಂಡಿಸೈಟಿಸ್ ಮತ್ತು ಕರುಳಿನ ಕ್ಯಾನ್ಸರ್‌ಗೆ ಕಾರಣವಾಗುವ ಇತರ ಅಂಶಗಳ ಸಾಧ್ಯತೆಗಳನ್ನು ತಡೆಯುತ್ತದೆ.

ವೆಸ್ಟರ್ನ್ ಶೌಚಾಲಯ ಬಳಕೆಯಿಂದಾಗುವ ತೊಂದರೆಗಳು
ವೆಸ್ಟರ್ನ್ ಟಾಯ್ಲೆಟ್ ಶೀಟ್ ಕೂಡ ಅನೇಕ ಪ್ರಯೋಜನಗಳನ್ನ ಹೊಂದಿದೆ. ವೆಸ್ಟರ್ನ್ ಟಾಯ್ಲೆಟ್ ವಿಶೇಷವಾಗಿ ಕಾಲುನೋವಿನ ಸಮಸ್ಯೆಯಿಂದ ಕುಳಿತುಕೊಳ್ಳಲು ಸಾಧ್ಯವಾಗದವರಿಗೆ, ಕೀಲು ನೋವಿನಿಂದ ಬಳಲುತ್ತಿರುವ ಜನರಿಗೆ ತುಂಬಾ ಆರಾಮದಾಯಕವಾಗಿದೆ. ಆದರೆ ಇದರಿಂದಾಗುವ ಅನಾನುಕೂಲಗಳು ಹೆಚ್ಚು. ವಿಪರ್ಯಾಸವೆಂದರೆ ಆರೋಗ್ಯವಂತರೂ ಇದನ್ನು ಬಳಸುತ್ತಿದ್ದಾರೆ. ಆದ್ರೆ, ವಸ್ಟರ್ನ್ ಶೌಚಾಲಯವು ಅನುಕೂಲಗಳನ್ನ ಹೊಂದಿದೆ. ಈ ಕಾರಣದಿಂದಾಗಿ, ವ್ಯಕ್ತಿಯು ಅನಾರೋಗ್ಯಕ್ಕೆ ಒಳಗಾಗುತ್ತಾನೆ. ಪಾಶ್ಚಿಮಾತ್ಯ ಶೌಚಾಲಯಕ್ಕೆ ಹೋಗುವ ಅಭ್ಯಾಸ ದೇಹದ ಸೋಂಕಿನ ಅಪಾಯವನ್ನ ಹೆಚ್ಚಿಸುತ್ತದೆ. ಇದು ಅತಿಸಾರ ಮತ್ತು ಅನೇಕ ಹೊಟ್ಟೆ ಸಮಸ್ಯೆಗಳನ್ನ ಉಂಟು ಮಾಡಬಹುದು. ಯಾಕಂದ್ರೆ, ವೆಸ್ಟರ್ನ್ ಟಾಯ್ಲೆಟ್ ಸೀಟ್ ಬಳಸುವಾಗ ಚರ್ಮ ಸಂಪರ್ಕಕ್ಕೆ ಬರುತ್ತದೆ. ಇದರಿಂದ ರೋಗಾಣುಗಳು ಸುಲಭವಾಗಿ ಹರಡಬಹುದು.


Share:

More Posts

Category

Send Us A Message

Related Posts

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’


Share       ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್


Read More »