TOP STORIES:

ಇಂದು ರಾತ್ರಿಯಿಂದಲೇ ನೈಟ್ ಕರ್ಪ್ಯೂ ಜಾರಿ: ಯಾವುದಕ್ಕೆ ಅನುಮತಿ.? ಯಾವುದಕ್ಕೆ ಇಲ್ಲ.? ಇಲ್ಲಿದೆ ಮಾಹಿತಿ


ಬೆಂಗಳೂರು: ರಾಜ್ಯ ಸರ್ಕಾರದಿಂದ ಕೊರೋನಾ ( Corona Virus ) ಹಾಗೂ ಓಮಿಕ್ರಾನ್ ( Omicron Variant ) ನಿಯಂತ್ರಣಕ್ಕೆ ತಡೆ ನೀಡೋ ಕಾರಣದಿಂದಾಗಿ ಡಿಸೆಂಬರ್ 28, 2021ರ ಇಂದಿನಿಂದ ಜಾರಿಗೆ ಬರುವಂತೆ ನೈಟ್ ಕರ್ಪ್ಯೂ ( Night Curfew ) ಜಾರಿಗೊಳಿಸಲಾಗಿದೆ.

ಇದಷ್ಟೇ ಅಲ್ಲದೇ ಡಿಸೆಂಬರ್ 30 ರಿಂದ ಜನವರಿ 2ರವರೆಗೆ ರೆಸ್ಟೋರೆಂಟ್, ಹೋಟೆಲ್, ಕ್ಲಬ್, ಪಬ್ ಗಳಿಗೆ ಶೇ.50ರಷ್ಟು ಜನರಿಗೆ ಮಿತಿಯನ್ನು ಹೇರಿ ಹೊಸ ಮಾರ್ಗಸೂಚಿಯನ್ನು ( Guideline ) ಜಾರಿಗೊಳಿಸಿದೆ. ಈ ಸಂದರ್ಭದಲ್ಲಿ ಯಾವುದಕ್ಕೆ ಅನುಮತಿ, ಯಾವುದಕ್ಕೆ ಇಲ್ಲ ಎನ್ನುವ ಬಗ್ಗೆ ಮುಂದೆ ಓದಿ..

ಈ ಬಗ್ಗೆ ರಾಜ್ಯ ಸರ್ಕಾರದ ( Karnataka Government ) ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ನೂತನ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ದಿನಾಂಕ 28-12-2021ರಿಂದ 07-01-2022ರವರೆಗೆ ರಾಜ್ಯಾಧ್ಯಂತ ನೈಟ್ ಕರ್ಪ್ಯೂವನ್ನು ಜಾರಿಗೊಳಿಸಲಾಗಿದೆ.

ದಿನಾಂಕ 30-12-2021ರಿಂದ ದಿನಾಂಕ 02-01-2022ರವರೆಗೆ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ಪಬ್ ಗಳಲ್ಲಿ ಶೇ.50ರಷ್ಟು ಜನರು ಸೇರೋದಕ್ಕೆ ಅವಕಾಶ ನೀಡಲಾಗಿದೆ. ಎಲ್ಲಾ ಸಿಬ್ಬಂದಿಗಳು ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಅಲ್ಲದೇ ಸಂಪೂರ್ಣ ಲಸಿಕೆ ಪಡೆದವರಿಗೆ ಮಾತ್ರವೇ ಅವಕಾಶ ನೀಡುವಂತೆ ಸೂಚಿಸಲಾಗಿದೆ.

ದಿನಾಂಕ 28-12-2022ರಿಂದ ಸಭೆ, ಸಮಾರಂಭ, ಕಾನ್ಫೆರೆನ್ಸ್, ಮದುವೆ ಸೇರಿದಂತೆ ಇತರೆ ಹೆಚ್ಚು ಜನರು ಸೇರುವಂತ ಕಾರ್ಯಕ್ರಮಗಳಿಗೆ 300 ಜನರಿಗೆ ಮಾತ್ರವೇ ಸೇರೋದಕ್ಕೆ ಅವಕಾಶ ನೀಡಲಾಗಿದೆ. ಈ ಸಭೆ-ಸಮಾರಂಭಗಳಲ್ಲಿ ಕಡ್ಡಾಯವಾಗಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

ಇನ್ನೂ ರಾಜ್ಯದ ಗಡಿ ಭಾಗಗಳಲ್ಲಿ ಅದರಲ್ಲೂ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಿಂದ ಬರೋ ಪ್ರಯಾಣಿಕರಿಗೆ ತಪಾಸಣೆಗೆ ಹಾಗೂ ಕೋವಿಡ್ ನೆಗೆಟಿವ್, ಇಲ್ಲವೇ ಸಂಪೂರ್ಣ ಲಸಿಕೆ ಪಡೆದಿರೋ ವರದಿ ಕಡ್ಡಾಯವಾಗಿ ಪರಿಶೀಲಿಸುವಂತೆ ತಿಳಿಸಲಾಗಿದೆ.

ನೈಟ್ ಕರ್ಪ್ಯೂ ಸಂದರ್ಭದಲ್ಲಿ ಯಾವುಕ್ಕೆ ಅನುಮತಿ.? ಯಾವುದಕ್ಕೆ ಇಲ್ಲ.?

ನೈಟ್ ಕರ್ಪ್ಯೂ ಸಂದರ್ಭದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶ ಇಲ್ಲ ರಾತ್ರಿ ಕರ್ಪ್ಯೂ ಸಂದರ್ಭದಲ್ಲಿ ಕೇವಲ ತುರ್ತು ಸಂದರ್ಭದಲ್ಲಿ ಮಾತ್ರವೇ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಎಲ್ಲಾ ಕೈಗಾರಿಕೆಗಳಿಗೆ ರಾತ್ರಿ ವೇಳೆಯಲ್ಲಿ ಕಾರ್ಯ ನಿರ್ವಹಿಸೋದಕ್ಕೆ ಅನುಮತಿ ನೀಡಲಾಗಿದೆ. ನೌಕರರು ಐಡಿ ಕಾರ್ಡ್ ತೋರಿಸಿ ಸಂಚರಿಸಲು ಅವಕಾಶ ನೀಡಲಾಗಿದೆ. ಟೆಲಿಕಾಂ, ಇಂಟರ್ನೆಟ್ ಪ್ರವೈಡರ್ ಓಡಾಟಕ್ಕೂ ಅವಕಾಶ ನೀಡಲಾಗಿದೆ. ಅಗತ್ಯ ಸೇವೆ ಒದಗಿಸುವಂತ ಸಿಬ್ಬಂದಿಗಳ ಓಡಾಟಕ್ಕೆ ನೈಟ್ ಕರ್ಪ್ಯೂ ಸಂದರ್ಭದಲ್ಲಿ ಅನುಮತಿಸಲಾಗಿದೆ.  ಐಟಿ-ಬಿಟಿ ಕಂಪನಿಗಳ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂಗೆ ಮಾತ್ರವೇ ಅವಕಾಶ ನೀಡಲಾಗಿದೆ.
ಮೆಡಿಕಲ್ ಶಾಪ್ ಗಳು ನೈಟ್ ಕರ್ಪ್ಯೂ ಸಂದರ್ಭದಲ್ಲಿ ತೆರೆದಿರುತ್ತದೆ.  ಯಾವುದೇ ಕಮರ್ಷಿಯಲ್ ಶಾಪ್ ಗಳನ್ನು ತೆರೆಯೋದಕ್ಕೆ ಅವಕಾಶವಿಲ್ಲ
ಹೋಂ ಡಿಲಿವರಿ ಪುಡ್ ಸರಬರಾಜಿಗೆ ನೈಟ್ ಕರ್ಪ್ಯೂ ಸಂದರ್ಭದಲ್ಲಿ ಅನುಮತಿಸಲಾಗಿದೆ. ಗೂಡ್ಸ್ ವೆಹಿಕಲ್, ಟ್ರಕ್, ಗೂಡ್ಸ್ ಕ್ಯಾರಿಯರ್, ಖಾಲಿ ಗೂಡ್ಸ್ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ರಾತ್ರಿ ಸಂದರ್ಭದಲ್ಲಿ ಬಸ್, ಟ್ರೈನ್, ಮೆಟ್ರೋ ರೈಲ್ ಹಾಗೂ ವಿಮಾನ ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ. ನೈಟ್ ಕರ್ಪ್ಯೂ ಸಂದರ್ಭದಲ್ಲಿ ಟ್ಯಾಕ್ಸಿ, ಬಸ್, ಆಟೋ ಸಂಚಾರಕ್ಕೆ ಅವಕಾಶ ನೀಡಲಾಗಿದೆ.


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »