TOP STORIES:

FOLLOW US

ಇಂದು ರಾತ್ರಿಯಿಂದಲೇ ನೈಟ್ ಕರ್ಪ್ಯೂ ಜಾರಿ: ಯಾವುದಕ್ಕೆ ಅನುಮತಿ.? ಯಾವುದಕ್ಕೆ ಇಲ್ಲ.? ಇಲ್ಲಿದೆ ಮಾಹಿತಿ


ಬೆಂಗಳೂರು: ರಾಜ್ಯ ಸರ್ಕಾರದಿಂದ ಕೊರೋನಾ ( Corona Virus ) ಹಾಗೂ ಓಮಿಕ್ರಾನ್ ( Omicron Variant ) ನಿಯಂತ್ರಣಕ್ಕೆ ತಡೆ ನೀಡೋ ಕಾರಣದಿಂದಾಗಿ ಡಿಸೆಂಬರ್ 28, 2021ರ ಇಂದಿನಿಂದ ಜಾರಿಗೆ ಬರುವಂತೆ ನೈಟ್ ಕರ್ಪ್ಯೂ ( Night Curfew ) ಜಾರಿಗೊಳಿಸಲಾಗಿದೆ.

ಇದಷ್ಟೇ ಅಲ್ಲದೇ ಡಿಸೆಂಬರ್ 30 ರಿಂದ ಜನವರಿ 2ರವರೆಗೆ ರೆಸ್ಟೋರೆಂಟ್, ಹೋಟೆಲ್, ಕ್ಲಬ್, ಪಬ್ ಗಳಿಗೆ ಶೇ.50ರಷ್ಟು ಜನರಿಗೆ ಮಿತಿಯನ್ನು ಹೇರಿ ಹೊಸ ಮಾರ್ಗಸೂಚಿಯನ್ನು ( Guideline ) ಜಾರಿಗೊಳಿಸಿದೆ. ಈ ಸಂದರ್ಭದಲ್ಲಿ ಯಾವುದಕ್ಕೆ ಅನುಮತಿ, ಯಾವುದಕ್ಕೆ ಇಲ್ಲ ಎನ್ನುವ ಬಗ್ಗೆ ಮುಂದೆ ಓದಿ..

ಈ ಬಗ್ಗೆ ರಾಜ್ಯ ಸರ್ಕಾರದ ( Karnataka Government ) ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ನೂತನ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ದಿನಾಂಕ 28-12-2021ರಿಂದ 07-01-2022ರವರೆಗೆ ರಾಜ್ಯಾಧ್ಯಂತ ನೈಟ್ ಕರ್ಪ್ಯೂವನ್ನು ಜಾರಿಗೊಳಿಸಲಾಗಿದೆ.

ದಿನಾಂಕ 30-12-2021ರಿಂದ ದಿನಾಂಕ 02-01-2022ರವರೆಗೆ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ಪಬ್ ಗಳಲ್ಲಿ ಶೇ.50ರಷ್ಟು ಜನರು ಸೇರೋದಕ್ಕೆ ಅವಕಾಶ ನೀಡಲಾಗಿದೆ. ಎಲ್ಲಾ ಸಿಬ್ಬಂದಿಗಳು ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಅಲ್ಲದೇ ಸಂಪೂರ್ಣ ಲಸಿಕೆ ಪಡೆದವರಿಗೆ ಮಾತ್ರವೇ ಅವಕಾಶ ನೀಡುವಂತೆ ಸೂಚಿಸಲಾಗಿದೆ.

ದಿನಾಂಕ 28-12-2022ರಿಂದ ಸಭೆ, ಸಮಾರಂಭ, ಕಾನ್ಫೆರೆನ್ಸ್, ಮದುವೆ ಸೇರಿದಂತೆ ಇತರೆ ಹೆಚ್ಚು ಜನರು ಸೇರುವಂತ ಕಾರ್ಯಕ್ರಮಗಳಿಗೆ 300 ಜನರಿಗೆ ಮಾತ್ರವೇ ಸೇರೋದಕ್ಕೆ ಅವಕಾಶ ನೀಡಲಾಗಿದೆ. ಈ ಸಭೆ-ಸಮಾರಂಭಗಳಲ್ಲಿ ಕಡ್ಡಾಯವಾಗಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

ಇನ್ನೂ ರಾಜ್ಯದ ಗಡಿ ಭಾಗಗಳಲ್ಲಿ ಅದರಲ್ಲೂ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಿಂದ ಬರೋ ಪ್ರಯಾಣಿಕರಿಗೆ ತಪಾಸಣೆಗೆ ಹಾಗೂ ಕೋವಿಡ್ ನೆಗೆಟಿವ್, ಇಲ್ಲವೇ ಸಂಪೂರ್ಣ ಲಸಿಕೆ ಪಡೆದಿರೋ ವರದಿ ಕಡ್ಡಾಯವಾಗಿ ಪರಿಶೀಲಿಸುವಂತೆ ತಿಳಿಸಲಾಗಿದೆ.

ನೈಟ್ ಕರ್ಪ್ಯೂ ಸಂದರ್ಭದಲ್ಲಿ ಯಾವುಕ್ಕೆ ಅನುಮತಿ.? ಯಾವುದಕ್ಕೆ ಇಲ್ಲ.?

ನೈಟ್ ಕರ್ಪ್ಯೂ ಸಂದರ್ಭದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶ ಇಲ್ಲ ರಾತ್ರಿ ಕರ್ಪ್ಯೂ ಸಂದರ್ಭದಲ್ಲಿ ಕೇವಲ ತುರ್ತು ಸಂದರ್ಭದಲ್ಲಿ ಮಾತ್ರವೇ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಎಲ್ಲಾ ಕೈಗಾರಿಕೆಗಳಿಗೆ ರಾತ್ರಿ ವೇಳೆಯಲ್ಲಿ ಕಾರ್ಯ ನಿರ್ವಹಿಸೋದಕ್ಕೆ ಅನುಮತಿ ನೀಡಲಾಗಿದೆ. ನೌಕರರು ಐಡಿ ಕಾರ್ಡ್ ತೋರಿಸಿ ಸಂಚರಿಸಲು ಅವಕಾಶ ನೀಡಲಾಗಿದೆ. ಟೆಲಿಕಾಂ, ಇಂಟರ್ನೆಟ್ ಪ್ರವೈಡರ್ ಓಡಾಟಕ್ಕೂ ಅವಕಾಶ ನೀಡಲಾಗಿದೆ. ಅಗತ್ಯ ಸೇವೆ ಒದಗಿಸುವಂತ ಸಿಬ್ಬಂದಿಗಳ ಓಡಾಟಕ್ಕೆ ನೈಟ್ ಕರ್ಪ್ಯೂ ಸಂದರ್ಭದಲ್ಲಿ ಅನುಮತಿಸಲಾಗಿದೆ.  ಐಟಿ-ಬಿಟಿ ಕಂಪನಿಗಳ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂಗೆ ಮಾತ್ರವೇ ಅವಕಾಶ ನೀಡಲಾಗಿದೆ.
ಮೆಡಿಕಲ್ ಶಾಪ್ ಗಳು ನೈಟ್ ಕರ್ಪ್ಯೂ ಸಂದರ್ಭದಲ್ಲಿ ತೆರೆದಿರುತ್ತದೆ.  ಯಾವುದೇ ಕಮರ್ಷಿಯಲ್ ಶಾಪ್ ಗಳನ್ನು ತೆರೆಯೋದಕ್ಕೆ ಅವಕಾಶವಿಲ್ಲ
ಹೋಂ ಡಿಲಿವರಿ ಪುಡ್ ಸರಬರಾಜಿಗೆ ನೈಟ್ ಕರ್ಪ್ಯೂ ಸಂದರ್ಭದಲ್ಲಿ ಅನುಮತಿಸಲಾಗಿದೆ. ಗೂಡ್ಸ್ ವೆಹಿಕಲ್, ಟ್ರಕ್, ಗೂಡ್ಸ್ ಕ್ಯಾರಿಯರ್, ಖಾಲಿ ಗೂಡ್ಸ್ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ರಾತ್ರಿ ಸಂದರ್ಭದಲ್ಲಿ ಬಸ್, ಟ್ರೈನ್, ಮೆಟ್ರೋ ರೈಲ್ ಹಾಗೂ ವಿಮಾನ ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ. ನೈಟ್ ಕರ್ಪ್ಯೂ ಸಂದರ್ಭದಲ್ಲಿ ಟ್ಯಾಕ್ಸಿ, ಬಸ್, ಆಟೋ ಸಂಚಾರಕ್ಕೆ ಅವಕಾಶ ನೀಡಲಾಗಿದೆ.


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »