TOP STORIES:

ಇನ್ನು ಮುಂದೆ ಚೀನಾಗೆ ಸರಿಸಮನಾಗಿ ಭಾರತದಿಂದಲೇ ರವಾನೆಯಾಗಲಿದೆ ಆಪಲ್‌ ಐಫೋನ್‌


ಐಫೋನ್‌ ಎಂಬ ಅಮೆರಿಕದ ಉತ್ಪನ್ನ ಜಾಗತಿಕವಾಗಿ ಪ್ರತಿಷ್ಠೆಯ ವಿಷಯವಾಗಿರುವುದು ಗೊತ್ತೇ ಇದೆ. ಇದನ್ನು ಹೆಚ್ಚಿನಪ್ರಮಾಣದಲ್ಲಿ ಚೀನಾ ತಯಾರು ಮಾಡುತ್ತದೆ. ಚೀನಾದಲ್ಲಿ ಹೆಚ್ಚಿನ ಐಫೋನ್‌ ಕಂಪನಿಗಳಿವೆ. ಭಾರತದಲ್ಲೂ ಕೂಡ ಐಫೋನ್‌ಉತ್ಪಾದನಾ ಪಾಲುದಾರ ಫಾಕ್ಸ್‌ಕಾನ್‌ ಅದನ್ನು ತಯಾರಿಸುತ್ತಿದೆ. ಆದರೆ ಇತ್ತೀಚಿನ ಬೆಳವಣಿಗೆಯೊಂದರಲ್ಲಿ ಚೀನಾದಿಂದ ಜಗತ್ತಿನಮಾರುಕಟ್ಟೆಗೆ ರವಾನೆಯಾಗುವ ಐಫೋನ್‌ ಗಳ ಸಂಖ್ಯೆಗೆ ಸರಿಸಮನಾಗಿ ಭಾರತದಲ್ಲಿ ಉತ್ಪಾದನೆಯಾದ ಐಫೋನ್‌ ಗಳನ್ನುಜಗತ್ತಿನ ಮಾರುಕಟ್ಟೆಗೆ ರವಾನಿಸುವಷ್ಟರ ಮಟ್ಟಿಗೆ ಭಾರತದ ಬೆಳೆದು ನಿಂತಿದೆ. ಹಿನ್ನೆಲೆಯಲ್ಲಿ ಜಾಗತಿಕ ಟೆಕ್‌ ದಿಗ್ಗಜ ಆಪಲ್‌ ತನ್ನ ಹೊಸ ಐಫೋನ್‌ ಆವೃತ್ತಿಯನ್ನು ಚೀನಾಗೆ ಸರಿಸಮನಾಗಿ ಭಾರತದಿಂದಲೇರವಾನಿಸಲು ಸಜ್ಜಾಗಿದೆ. . ಇದಕ್ಕೆ ಪೂರಕವೆಂಬಂತೆ ಪ್ರಮುಖ ಸೆಕ್ಯುರಿಟೀಸ್ ವಿಶ್ಲೇಷಕ, ಮಿಂಗ್ ಚಿ ಕುವೊ ಅವರು ತಮ್ಮ ಟ್ವೀಟ್ವರ್ನಲ್ಲಿಫಾಕ್ಸ್‌ಕಾನ್ ಶೀಘ್ರದಲ್ಲೇ ಚೀನಾದೊಂದಿಗೆ ಏಕಕಾಲದಲ್ಲಿ ಭಾರತದಿಂದ ಇತ್ತೀಚಿನ ಆವೃತ್ತಿಯ ಐಫೋನ್‌ಗಳನ್ನು ರವಾನಿಸಲುಪ್ರಾರಂಭಿಸಬಹುದುಎಂದಿದ್ದಾರೆ. ಮುಂದುವರೆದುಇತ್ತೀಚಿನ ಸಮೀಕ್ಷೆಯು ಭಾರತದಲ್ಲಿನ ಫಾಕ್ಸ್‌ಕಾನ್‌ನ ಐಫೋನ್ ಉತ್ಪಾದನಾಸೈಟ್ ಹೊಸ 6.1 ಐಫೋನ್ 14 ಅನ್ನು 2H22 ನಲ್ಲಿ ಮೊದಲ ಬಾರಿಗೆ ಚೀನಾದೊಂದಿಗೆ ಏಕಕಾಲದಲ್ಲಿ ಸಾಗಿಸುತ್ತದೆ ಎಂದುಸೂಚಿಸುತ್ತದೆಎಂದಿದ್ದಾರೆ.

ಕೆಲ ವರದಿಗಳ ಪ್ರಕಾರ ಆಪಲ್‌ ಕಂಪನಿಯು ಮುಂದಿನ ಪ್ರಮುಖ ಬೆಳವಣಿಗೆಯ ಚಾಲಕನಾಗಿ ಭಾರತವನ್ನು ನೋಡುತ್ತಿದ್ದು ಬೆಳವಣಿಗೆಯು ಚೈನೀಸ್ ಅಲ್ಲದ ಐಫೋನ್ ಉತ್ಪಾದನಾ ತಾಣವನ್ನು ನಿರ್ಮಿಸುವಲ್ಲಿ ಆಪಲ್‌ಗೆ ಪ್ರಮುಖ ಮೈಲಿಗಲ್ಲಾಗಿಪರಿಣಮಿಸಲಿದೆ.. ತನ್ನ ಪೂರೈಕೆಯ ಮೇಲೆ ಜಾಗತಿಕ ರಾಜಕೀಯ ಪರಿಣಾಮಗಳನ್ನು ಕಡಿಮೆ ಮಾಡಲು ಆಪಲ್‌ ಪ್ರಯತ್ನಿಸುತ್ತಿದ್ದುಮುಂದಿನ ಮಾರುಕಟ್ಟೆ ಚಾಲಕನಾಗಿ ಭಾರತವನ್ನು ಅದು ಎದುರು ನೋಡುತ್ತಿದೆ ಎಂದು ಮಿಂಗ್ ಚಿ ಕುವೊ ಕೂಡ ಟ್ವೀಟ್‌ಮಾಡಿದ್ದಾರೆ.

Apple 2017 ರಲ್ಲಿ iPhone SE ಯೊಂದಿಗೆ ಭಾರತದಲ್ಲಿ ಐಫೋನ್‌ಗಳನ್ನು ತಯಾರಿಸಲು ಪ್ರಾರಂಭಿಸಿತು. ಇದು ಪ್ರಸ್ತುತ iPhone 11, iPhone 12, ಮತ್ತು iPhone 13 ಸೇರಿದಂತೆ ಭಾರತದಲ್ಲಿ ತನ್ನ ಕೆಲವು ಅತ್ಯಾಧುನಿಕ ಐಫೋನ್‌ಗಳನ್ನು ತಯಾರಿಸುತ್ತಿದೆ. ಭಾರತದಲ್ಲಿ ಸುಮಾರು 20 ವರ್ಷಗಳ ಇತಿಹಾಸವನ್ನು ಆಪಲ್‌ ಹೊಂದಿದ್ದು 2020ರಲ್ಲಿ ಮೊದಲ ಆಪಲ್‌ ಆನ್‌ ಲೈನ್ ಸ್ಟೋರ್‌ಅನ್ನು ತೆರೆದಿದ್ದು ಮುಂದಿನ ದಿನಗಳಲ್ಲಿ ದೇಶದಲ್ಲಿ ಹೆಚ್ಚಿನ ಆನ್‌ ಲೈನ್‌ ಸ್ಟೋರ್‌ ಗಳನ್ನು ತೆರೆಯಲು ಕಂಪನಿ ಯೋಚಿಸುತ್ತದೆ ಎಂದುಕೆಲ ವರದಿಗಳು ಹೇಳಿವೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »