TOP STORIES:

ಇನ್ನು ವಾಟ್ಸಪ್ ರಿಯಾಕ್ಷನ್ ಫೀಚರ್‌ನಲ್ಲಿ ಯಾವುದೇ ಎಮೋಜಿ ಬಳಸಬಹುದು


ವಾಷಿಂಗ್ಟನ್:- ವಾಟ್ಸಪ್‌ನಲ್ಲಿ ರಿಯಾಕ್ಷನ್ ಫೀಚರ್ ಅನ್ನು ಹೊರತಂದು 2 ತಿಂಗಳಷ್ಟೇ ಕಳೆದಿದೆ. ಆದರೆ ಬಳಕೆದಾರರು ಇಲ್ಲಿಯವರೆಗೆಕೇವಲ 6 ಎಮೋಜಿಗಳನ್ನು ಮಾತ್ರವೇ ರಿಯಾಕ್ಷನ್ ಆಗಿ ಬಳಸಬಹುದಿತ್ತು. ಇದೀಗ ರಿಯಾಕ್ಷನ್ ಫೀಚರ್‌ನಲ್ಲಿ ಯಾವುದೇಎಮೋಜಿಗಳನ್ನು ( Emoji can be used) ಬಳಸಲು ವಾಟ್ಸಪ್ ಅನುಮತಿ ನೀಡಿದೆ.

ಇಲ್ಲಿಯವರೆಗೆ ಲೈಕ್, ಪ್ರೀತಿ, ನಗು, ಆಶ್ಚರ್ಯ, ದುಃಖ ಹಾಗೂ ಧನ್ಯವಾದದ ಎಮೋಜಿಗಳನ್ನಷ್ಟೇ ರಿಯಾಕ್ಷನ್ ಆಗಿ ಕಳುಹಿಸಲುಅವಕಾಶ ನೀಡಿತ್ತು. ಇದೀಗ ರಿಯಾಕ್ಷನ್‌ನಲ್ಲಿ ಯಾವುದೇ ಎಮೋಜಿಗಳನ್ನು ಬಳಸಬಹುದಾಗಿದ್ದು, ಬಗ್ಗೆ ವಾಟ್ಸಪ್‌ನ ಮಾತೃ ಸಂಸ್ಥೆಮೆಟಾದ ಸಿಇಒ ಮಾರ್ಕ್ ಜುಕರ್‌ಬರ್ಗ್ ಇನ್‌ಸ್ಟಾಗ್ರಾಮ್‌ನಲ್ಲಿ ರೋಲ್‌ಔಟ್ ಪ್ರಾರಂಭವಾಗಿದೆ ಎಂದು ತಿಳಿಸಿದ್ದಾರೆ.

ಬೀಟಾ ಪರೀಕ್ಷಕರ ವರದಿಗಳ ಪ್ರಕಾರ ಇತ್ತೀಚಿನ ದಿನಗಳಲ್ಲಿ ವಾಟ್ಸಪ್ ಹಲವಾರು ಫೀಚರ್‌ಗಳನ್ನು ಪರೀಕ್ಷಿಸುತ್ತಿದೆ. ಬಳಕೆದಾರರುವಾಟ್ಸಪ್ ಅನ್ನು ಇನ್ನೊಂದು ಹ್ಯಾಂಡ್‌ಸೆಟ್‌ನಿಂದ ಲಾಗ್‌ಇನ್ ಮಾಡಲು ಆಂಡ್ರಾಯ್ಡ್‌ಗಳಿಗಾಗಿ ಚ್ಯಾಟ್ ಸಿಂಕ್ ಫೀಚರ್, ನಿಮ್ಮಆನ್‌ಲೈನ್ ಸ್ಥಿತಿಯನ್ನು ಮರೆಮಾಡುವ ಸಾಮರ್ಥ್ಯದಂತಹ ಫೀಚರ್‌ಗಳು ಟೆಸ್ಟಿಂಗ್‌ನಲ್ಲಿ ಒಳಗೊಂಡಿವೆ.

ಜೂನ್‌ನಲ್ಲಿ ವಾಟ್ಸಪ್ ಬಳಕೆದಾರರಿಗೆ ಗೌಪ್ಯತೆಯನ್ನು ನಿಯಂತ್ರಿಸುವ ಫೀಚರ್‌ಗಳನ್ನು ಹೊರತರಲು ಪ್ರಾರಂಭಿಸಿತು. ಅದರಲ್ಲಿಕೊನೆಯದಾಗಿ ಆನ್‌ಲೈನ್‌ನಲ್ಲಿದ್ದ ಸಮಯವನ್ನು ಮರೆಮಾಡುವುದು ಹಾಗೂ ಪ್ರೊಫೈಲ್ ಫೋಟೋವನ್ನು ಆಯ್ಕೆಮಾಡಿದವರಿಗಷ್ಟೇ ತೋರುವಂತೆ ಮಾಡುವಂತಹ ಅವಕಾಶವನ್ನು ನೀಡಿದೆ.

ಜುಕರ್‌ಬರ್ಗ್ ಇತ್ತೀಚೆಗೆ ಆಂಡ್ರಾಯ್ಡ್ ಸ್ಮಾರ್ಟ್ಫೋನ್‌ನಿಂದ ಐಫೋನ್‌ಗೆ ತಮ್ಮ ವಾಟ್ಸಪ್ ಡೇಟಾವನ್ನು ಸುಲಭವಾಗಿವರ್ಗಾಯಿಸುವ ಸಾಮರ್ಥ್ಯವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ವರದಿಗಳ ಪ್ರಕಾರ ಇದು ಇನ್ನೂಪರೀಕ್ಷೆಯಲ್ಲಿದೆ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »