TOP STORIES:

ಇನ್ಮುಂದೆ ಓರ್ವ ವ್ಯಕ್ತಿ ಇಷ್ಟೇ ಸಿಮ್ ಹೊಂದಿರಬೇಕೆಂಬ ಸರ್ಕಾರದ ಹೊಸ ನಿಯಮ!


ದೂರ ಸಂಪರ್ಕ ಕ್ಷೇತ್ರದಲ್ಲಿ ಸದಾ ಒಂದಿಲ್ಲೊಂದು ಬದಲಾವಣೆಯನ್ನು ತರುತ್ತಿರುವ ದೂರಸಂಪರ್ಕ ಇಲಾಖೆಯು ಇದೀಗ ಮತ್ತೊಮ್ಮೆ ಹೊಸ ಮಾನದಂಡಗಳನ್ನು ಪರಿಚಯಿಸಿದೆ. ಓರ್ವ ವ್ಯಕ್ತಿ ಎಷ್ಟು ಸಿಮ್ ಕಾರ್ಡ್‌ಗಳನ್ನು ಖರೀದಿಸಬಹುದು?, ಅಪ್ರಾಪ್ತ ವಯಸ್ಕರಿಗೆ ಸಿಮ್ ಖರೀದಿಸಲು ಅವಕಾಶವನ್ನು ನೀಡದಂತೆ ಟೆಲಿಕಾಂ ಕಂಪೆನಿಗಳು ಹೇಗೆ ಎಚ್ಚರಿಕೆ ವಹಿಸಬೇಕು ಎಂಬುದು ಸೇರಿದಂತೆ ಹಲವು ಬದಲಾವಣೆಗಳನ್ನು ಟೆಲಿಕಾಂ ವ್ಯವಸ್ಥೆಯಲ್ಲಿ ತಂದಿದೆ.

ದೂರ ಸಂಪರ್ಕ ಕ್ಷೇತ್ರದಲ್ಲಿ ಸದಾ ಒಂದಿಲ್ಲೊಂದು ಬದಲಾವಣೆಯನ್ನು ತರುತ್ತಿರುವ ದೂರಸಂಪರ್ಕ ಇಲಾಖೆಯು ಇದೀಗ ಮತ್ತೊಮ್ಮೆ ಹೊಸ ಮಾನದಂಡಗಳನ್ನು ಪರಿಚಯಿಸಿದೆ. ಓರ್ವ ವ್ಯಕ್ತಿ ಎಷ್ಟು ಸಿಮ್ ಕಾರ್ಡ್‌ಗಳನ್ನು ಖರೀದಿಸಬಹುದು?, ಅಪ್ರಾಪ್ತ ವಯಸ್ಕರಿಗೆ ಸಿಮ್ ಖರೀದಿಸಲು ಅವಕಾಶವನ್ನು ನೀಡದಂತೆ ಟೆಲಿಕಾಂ ಕಂಪೆನಿಗಳು ಹೇಗೆ ಎಚ್ಚರಿಕೆ ವಹಿಸಬೇಕು ಎಂಬುದು ಸೇರಿದಂತೆ ಹಲವು ಬದಲಾವಣೆಗಳನ್ನು ಟೆಲಿಕಾಂ ವ್ಯವಸ್ಥೆಯಲ್ಲಿ ತಂದಿದೆ. ಇದರಿಂದ ಟೆಲಿಕಾಂ ಕಂಪೆನಿಗಳು ನಿರ್ದಿಷ್ಟ ಮಾನದಂಡಗಳನ್ನು ಹೊಂದಲು ಸಾಧ್ಯವಾಗಲಿದೆ ಎಂದು ಹೇಳಲಾಗಿದೆ.

ದೂರಸಂಪರ್ಕ ಇಲಾಖೆಯ ನೂತನ ನಿಯಮಗಳ ಪ್ರಕಾರ, ಭಾರತದಲ್ಲಿ ಇನ್ಮುಂದೆ ಹೊಸ ಸಿಮ್ ಖರೀದಿಸಲು ಗ್ರಾಹಕ ಸ್ವಾಧೀನ ನಮೂನೆ ಎಂಬ ಫಾರ್ಮ್ ಅನ್ನು ಭರ್ತಿ ಮಾಡಬೇಕು ಎಂಬ ಮಾನದಂಡವನ್ನು ತರಲಾಗಿದೆ. ಈ ನಿಯಮದ ಪ್ರಕಾರ, ಹೊಸ ಫಾರ್ಮ್ ಒಂದನ್ನು ಗ್ರಾಹಕರು ಮತ್ತು ಟೆಲಿಕಾಂ ಆಪರೇಟರ್‌ಗಳಿಗಾಗಿಯೇ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದು, ಕೆಲವು ನಿಯಮ ಮತ್ತು ಷರತ್ತುಗಳಲ್ಲಿ ಬಂದಿರುವ ಈ ನಿಯಮಗಳಿಗೆ ಗ್ರಾಹಕರು ಅರ್ಹರಾಗಿರಬೇಕಿದ್ದು, ಇದು ಗ್ರಾಹಕರು ಮತ್ತು ಟೆಲಿಕಾಂಗಳ ನಡುವಿನ ಒಪ್ಪಂದವಾಗಿರಲಿದೆ ಎಂದು ಹೇಳಲಾಗಿದೆ.

ಹಾಗೆಯೇ, ಭಾರತದಲ್ಲಿ ಓರ್ವ ವ್ಯಕ್ತಿ ಎಷ್ಟು ಸಿಮ್ ಹೊಂದಬಹುದು ಎಂಬುದನ್ನು ಸಹ ದೂರ ಸಂಪರ್ಕ ಇಲಾಖೆ ತಿಳಿಸಿದ್ದು, ಹೊಸ ನಿಯಮದಂತೆ, ದೇಶದ ಓರ್ವ ಪ್ರಜೆಯು ತನ್ನ ಹೆಸರಿನಲ್ಲಿ ( ಅವನು ಮತ್ತು ಅವಳ) ಒಟ್ಟು 18 ಸಿಮ್‌ಗಳನ್ನು ಖರೀದಿಸಬಹುದು ಎಂದು ಇಲಾಖೆ ತಿಳಿಸಿದೆ. ಈ 18 ಸಿಮ್‌ಗಳಲ್ಲಿ ಸಾಮಾನ್ಯ ಸಂವಹನಕ್ಕಾಗಿ 9 ಸಿಮ್‌ಗಳನ್ನು ಖರೀದಿಸಬಹುದು ಹಾಗೂ M2M ಸಂವಹನಕ್ಕಾಗಿ 9 ಸಿಮ್‌ಗಳನ್ನು ಖರೀದಿಸಬಹುದಾದ ಆಯ್ಕೆಯನ್ನು ನೀಡಲಾಗಿದೆ. ಜೊತೆಗೆ ಗ್ರಾಹಕರು ತಮ್ಮ ಡಿವೈಸ್‌ ಬದಲಾಯಿಸಿದರೆ ಹೊಸ ವಿವರಗಳನ್ನು ಸಲ್ಲಿಸಬೇಕಾಗುತ್ತದೆ.

ಅಂದರೆ, ಇದೀಗ ಓರ್ವ ವ್ಯಕ್ತಿ ಇದೀಗ ತನ್ನ ಹೆಸರಿನಲ್ಲಿ ಸಾಮಾನ್ಯ ಕೆಲಸಗಳಿಗೆ 9 ಸಿಮ್‌ಗಳನ್ನು ಹೊಂದಬಹುದಾಗಿದೆ. ಹಾಗೂ M2M (ಮಷಿನ್ ಟು ಮಷಿನ್) ಸಿಮ್ ಪಡೆಯಲು ಗ್ರಾಹಕರು ಪರಿಶೀಲನಾ ನಮೂನೆಯನ್ನು ಸಲ್ಲಿಸಬೇಕು ಎಂದು ಹೇಳಲಾಗಿದೆ. ಹಾಗೆಯೇ, ಅಪ್ರಾಪ್ತ ವಯಸ್ಕರಿಗೆ ಸಿಮ್ ಪಡೆಯಲು ಯಾವುದೇ ಅವಕಾಶವನ್ನು ಇದೀಗ ತೆಗೆದುಹಾಕಲಾಗಿದೆ. ಇದರರ್ಥ ಯಾವುದೇ ಗ್ರಾಹಕರು 18 ವರ್ಷಕ್ಕಿಂತ ಕಡಿಮೆ ಇದ್ದರೆ, ಟೆಲಿಕಾಂ ಆಪರೇಟರ್‌ಗಳಿಂದ ಸಿಮ್ ಖರೀದಿಸಲು ಸಾಧ್ಯವಿಲ್ಲ. ಹಾಗೂ ಸ್ಥಿರಲೈನ್ ಸಂಪರ್ಕಕ್ಕೂ ಸಹ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.

ಇಲಾಖೆಯು ಇಂತಹ ಮಾನದಂಡಗಳನ್ನು ತರಲು ಹೆಚ್ಚುತ್ತಿರುವ ಸಿಮ್ ಕಾರ್ಡ್‌ ವಂಚನೆ ಪ್ರಕರಣಗಳು ಕಾರಣ ಎನ್ನಲಾಗಿದೆ. ಹಾಗೂ ಗ್ರಾಹಕರು ತಮ್ಮ ಹೆಸರುಗಳಲ್ಲಿನ ಸಿಮ್ ಅನಧಿಕೃತ ಬಳಕೆಯಾಗುತ್ತಿದೆಯಾ ಎಂಬುದನ್ನು ಪರೀಕ್ಷಿಸಲು ಹೊಸ ಕ್ರಮವನ್ನು ನೀಡಲಾಗಿದೆ. ನೀವು ನಿಮ್ಮ ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲಾದ ಎಲ್ಲಾ ಮೊಬೈಲ್ ಸಂಖ್ಯೆಗಳನ್ನು ನೋಡಲು ಇದೀಗ ಅನುಮತಿಸಿದ್ದು, tafcop.dgtelecom.gov.in ವೆಬ್‌ಸೈಟ್‌ನಲ್ಲಿ ನಿಮ್ಮ ಮೊಬೈಲ್ ನಂಬರ್ ಲಗ್ಗತ್ತಿಸಿ ಸಿಮ್ ದುರುಪಯೋಗ ಆಗಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬಹುದು.


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »