TOP STORIES:

FOLLOW US

ಇನ್ಮುಂದೆ ಓರ್ವ ವ್ಯಕ್ತಿ ಇಷ್ಟೇ ಸಿಮ್ ಹೊಂದಿರಬೇಕೆಂಬ ಸರ್ಕಾರದ ಹೊಸ ನಿಯಮ!


ದೂರ ಸಂಪರ್ಕ ಕ್ಷೇತ್ರದಲ್ಲಿ ಸದಾ ಒಂದಿಲ್ಲೊಂದು ಬದಲಾವಣೆಯನ್ನು ತರುತ್ತಿರುವ ದೂರಸಂಪರ್ಕ ಇಲಾಖೆಯು ಇದೀಗ ಮತ್ತೊಮ್ಮೆ ಹೊಸ ಮಾನದಂಡಗಳನ್ನು ಪರಿಚಯಿಸಿದೆ. ಓರ್ವ ವ್ಯಕ್ತಿ ಎಷ್ಟು ಸಿಮ್ ಕಾರ್ಡ್‌ಗಳನ್ನು ಖರೀದಿಸಬಹುದು?, ಅಪ್ರಾಪ್ತ ವಯಸ್ಕರಿಗೆ ಸಿಮ್ ಖರೀದಿಸಲು ಅವಕಾಶವನ್ನು ನೀಡದಂತೆ ಟೆಲಿಕಾಂ ಕಂಪೆನಿಗಳು ಹೇಗೆ ಎಚ್ಚರಿಕೆ ವಹಿಸಬೇಕು ಎಂಬುದು ಸೇರಿದಂತೆ ಹಲವು ಬದಲಾವಣೆಗಳನ್ನು ಟೆಲಿಕಾಂ ವ್ಯವಸ್ಥೆಯಲ್ಲಿ ತಂದಿದೆ.

ದೂರ ಸಂಪರ್ಕ ಕ್ಷೇತ್ರದಲ್ಲಿ ಸದಾ ಒಂದಿಲ್ಲೊಂದು ಬದಲಾವಣೆಯನ್ನು ತರುತ್ತಿರುವ ದೂರಸಂಪರ್ಕ ಇಲಾಖೆಯು ಇದೀಗ ಮತ್ತೊಮ್ಮೆ ಹೊಸ ಮಾನದಂಡಗಳನ್ನು ಪರಿಚಯಿಸಿದೆ. ಓರ್ವ ವ್ಯಕ್ತಿ ಎಷ್ಟು ಸಿಮ್ ಕಾರ್ಡ್‌ಗಳನ್ನು ಖರೀದಿಸಬಹುದು?, ಅಪ್ರಾಪ್ತ ವಯಸ್ಕರಿಗೆ ಸಿಮ್ ಖರೀದಿಸಲು ಅವಕಾಶವನ್ನು ನೀಡದಂತೆ ಟೆಲಿಕಾಂ ಕಂಪೆನಿಗಳು ಹೇಗೆ ಎಚ್ಚರಿಕೆ ವಹಿಸಬೇಕು ಎಂಬುದು ಸೇರಿದಂತೆ ಹಲವು ಬದಲಾವಣೆಗಳನ್ನು ಟೆಲಿಕಾಂ ವ್ಯವಸ್ಥೆಯಲ್ಲಿ ತಂದಿದೆ. ಇದರಿಂದ ಟೆಲಿಕಾಂ ಕಂಪೆನಿಗಳು ನಿರ್ದಿಷ್ಟ ಮಾನದಂಡಗಳನ್ನು ಹೊಂದಲು ಸಾಧ್ಯವಾಗಲಿದೆ ಎಂದು ಹೇಳಲಾಗಿದೆ.

ದೂರಸಂಪರ್ಕ ಇಲಾಖೆಯ ನೂತನ ನಿಯಮಗಳ ಪ್ರಕಾರ, ಭಾರತದಲ್ಲಿ ಇನ್ಮುಂದೆ ಹೊಸ ಸಿಮ್ ಖರೀದಿಸಲು ಗ್ರಾಹಕ ಸ್ವಾಧೀನ ನಮೂನೆ ಎಂಬ ಫಾರ್ಮ್ ಅನ್ನು ಭರ್ತಿ ಮಾಡಬೇಕು ಎಂಬ ಮಾನದಂಡವನ್ನು ತರಲಾಗಿದೆ. ಈ ನಿಯಮದ ಪ್ರಕಾರ, ಹೊಸ ಫಾರ್ಮ್ ಒಂದನ್ನು ಗ್ರಾಹಕರು ಮತ್ತು ಟೆಲಿಕಾಂ ಆಪರೇಟರ್‌ಗಳಿಗಾಗಿಯೇ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದು, ಕೆಲವು ನಿಯಮ ಮತ್ತು ಷರತ್ತುಗಳಲ್ಲಿ ಬಂದಿರುವ ಈ ನಿಯಮಗಳಿಗೆ ಗ್ರಾಹಕರು ಅರ್ಹರಾಗಿರಬೇಕಿದ್ದು, ಇದು ಗ್ರಾಹಕರು ಮತ್ತು ಟೆಲಿಕಾಂಗಳ ನಡುವಿನ ಒಪ್ಪಂದವಾಗಿರಲಿದೆ ಎಂದು ಹೇಳಲಾಗಿದೆ.

ಹಾಗೆಯೇ, ಭಾರತದಲ್ಲಿ ಓರ್ವ ವ್ಯಕ್ತಿ ಎಷ್ಟು ಸಿಮ್ ಹೊಂದಬಹುದು ಎಂಬುದನ್ನು ಸಹ ದೂರ ಸಂಪರ್ಕ ಇಲಾಖೆ ತಿಳಿಸಿದ್ದು, ಹೊಸ ನಿಯಮದಂತೆ, ದೇಶದ ಓರ್ವ ಪ್ರಜೆಯು ತನ್ನ ಹೆಸರಿನಲ್ಲಿ ( ಅವನು ಮತ್ತು ಅವಳ) ಒಟ್ಟು 18 ಸಿಮ್‌ಗಳನ್ನು ಖರೀದಿಸಬಹುದು ಎಂದು ಇಲಾಖೆ ತಿಳಿಸಿದೆ. ಈ 18 ಸಿಮ್‌ಗಳಲ್ಲಿ ಸಾಮಾನ್ಯ ಸಂವಹನಕ್ಕಾಗಿ 9 ಸಿಮ್‌ಗಳನ್ನು ಖರೀದಿಸಬಹುದು ಹಾಗೂ M2M ಸಂವಹನಕ್ಕಾಗಿ 9 ಸಿಮ್‌ಗಳನ್ನು ಖರೀದಿಸಬಹುದಾದ ಆಯ್ಕೆಯನ್ನು ನೀಡಲಾಗಿದೆ. ಜೊತೆಗೆ ಗ್ರಾಹಕರು ತಮ್ಮ ಡಿವೈಸ್‌ ಬದಲಾಯಿಸಿದರೆ ಹೊಸ ವಿವರಗಳನ್ನು ಸಲ್ಲಿಸಬೇಕಾಗುತ್ತದೆ.

ಅಂದರೆ, ಇದೀಗ ಓರ್ವ ವ್ಯಕ್ತಿ ಇದೀಗ ತನ್ನ ಹೆಸರಿನಲ್ಲಿ ಸಾಮಾನ್ಯ ಕೆಲಸಗಳಿಗೆ 9 ಸಿಮ್‌ಗಳನ್ನು ಹೊಂದಬಹುದಾಗಿದೆ. ಹಾಗೂ M2M (ಮಷಿನ್ ಟು ಮಷಿನ್) ಸಿಮ್ ಪಡೆಯಲು ಗ್ರಾಹಕರು ಪರಿಶೀಲನಾ ನಮೂನೆಯನ್ನು ಸಲ್ಲಿಸಬೇಕು ಎಂದು ಹೇಳಲಾಗಿದೆ. ಹಾಗೆಯೇ, ಅಪ್ರಾಪ್ತ ವಯಸ್ಕರಿಗೆ ಸಿಮ್ ಪಡೆಯಲು ಯಾವುದೇ ಅವಕಾಶವನ್ನು ಇದೀಗ ತೆಗೆದುಹಾಕಲಾಗಿದೆ. ಇದರರ್ಥ ಯಾವುದೇ ಗ್ರಾಹಕರು 18 ವರ್ಷಕ್ಕಿಂತ ಕಡಿಮೆ ಇದ್ದರೆ, ಟೆಲಿಕಾಂ ಆಪರೇಟರ್‌ಗಳಿಂದ ಸಿಮ್ ಖರೀದಿಸಲು ಸಾಧ್ಯವಿಲ್ಲ. ಹಾಗೂ ಸ್ಥಿರಲೈನ್ ಸಂಪರ್ಕಕ್ಕೂ ಸಹ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.

ಇಲಾಖೆಯು ಇಂತಹ ಮಾನದಂಡಗಳನ್ನು ತರಲು ಹೆಚ್ಚುತ್ತಿರುವ ಸಿಮ್ ಕಾರ್ಡ್‌ ವಂಚನೆ ಪ್ರಕರಣಗಳು ಕಾರಣ ಎನ್ನಲಾಗಿದೆ. ಹಾಗೂ ಗ್ರಾಹಕರು ತಮ್ಮ ಹೆಸರುಗಳಲ್ಲಿನ ಸಿಮ್ ಅನಧಿಕೃತ ಬಳಕೆಯಾಗುತ್ತಿದೆಯಾ ಎಂಬುದನ್ನು ಪರೀಕ್ಷಿಸಲು ಹೊಸ ಕ್ರಮವನ್ನು ನೀಡಲಾಗಿದೆ. ನೀವು ನಿಮ್ಮ ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲಾದ ಎಲ್ಲಾ ಮೊಬೈಲ್ ಸಂಖ್ಯೆಗಳನ್ನು ನೋಡಲು ಇದೀಗ ಅನುಮತಿಸಿದ್ದು, tafcop.dgtelecom.gov.in ವೆಬ್‌ಸೈಟ್‌ನಲ್ಲಿ ನಿಮ್ಮ ಮೊಬೈಲ್ ನಂಬರ್ ಲಗ್ಗತ್ತಿಸಿ ಸಿಮ್ ದುರುಪಯೋಗ ಆಗಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬಹುದು.


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »