TOP STORIES:

ಇನ್ಮುಂದೆ ಓರ್ವ ವ್ಯಕ್ತಿ ಇಷ್ಟೇ ಸಿಮ್ ಹೊಂದಿರಬೇಕೆಂಬ ಸರ್ಕಾರದ ಹೊಸ ನಿಯಮ!


ದೂರ ಸಂಪರ್ಕ ಕ್ಷೇತ್ರದಲ್ಲಿ ಸದಾ ಒಂದಿಲ್ಲೊಂದು ಬದಲಾವಣೆಯನ್ನು ತರುತ್ತಿರುವ ದೂರಸಂಪರ್ಕ ಇಲಾಖೆಯು ಇದೀಗ ಮತ್ತೊಮ್ಮೆ ಹೊಸ ಮಾನದಂಡಗಳನ್ನು ಪರಿಚಯಿಸಿದೆ. ಓರ್ವ ವ್ಯಕ್ತಿ ಎಷ್ಟು ಸಿಮ್ ಕಾರ್ಡ್‌ಗಳನ್ನು ಖರೀದಿಸಬಹುದು?, ಅಪ್ರಾಪ್ತ ವಯಸ್ಕರಿಗೆ ಸಿಮ್ ಖರೀದಿಸಲು ಅವಕಾಶವನ್ನು ನೀಡದಂತೆ ಟೆಲಿಕಾಂ ಕಂಪೆನಿಗಳು ಹೇಗೆ ಎಚ್ಚರಿಕೆ ವಹಿಸಬೇಕು ಎಂಬುದು ಸೇರಿದಂತೆ ಹಲವು ಬದಲಾವಣೆಗಳನ್ನು ಟೆಲಿಕಾಂ ವ್ಯವಸ್ಥೆಯಲ್ಲಿ ತಂದಿದೆ.

ದೂರ ಸಂಪರ್ಕ ಕ್ಷೇತ್ರದಲ್ಲಿ ಸದಾ ಒಂದಿಲ್ಲೊಂದು ಬದಲಾವಣೆಯನ್ನು ತರುತ್ತಿರುವ ದೂರಸಂಪರ್ಕ ಇಲಾಖೆಯು ಇದೀಗ ಮತ್ತೊಮ್ಮೆ ಹೊಸ ಮಾನದಂಡಗಳನ್ನು ಪರಿಚಯಿಸಿದೆ. ಓರ್ವ ವ್ಯಕ್ತಿ ಎಷ್ಟು ಸಿಮ್ ಕಾರ್ಡ್‌ಗಳನ್ನು ಖರೀದಿಸಬಹುದು?, ಅಪ್ರಾಪ್ತ ವಯಸ್ಕರಿಗೆ ಸಿಮ್ ಖರೀದಿಸಲು ಅವಕಾಶವನ್ನು ನೀಡದಂತೆ ಟೆಲಿಕಾಂ ಕಂಪೆನಿಗಳು ಹೇಗೆ ಎಚ್ಚರಿಕೆ ವಹಿಸಬೇಕು ಎಂಬುದು ಸೇರಿದಂತೆ ಹಲವು ಬದಲಾವಣೆಗಳನ್ನು ಟೆಲಿಕಾಂ ವ್ಯವಸ್ಥೆಯಲ್ಲಿ ತಂದಿದೆ. ಇದರಿಂದ ಟೆಲಿಕಾಂ ಕಂಪೆನಿಗಳು ನಿರ್ದಿಷ್ಟ ಮಾನದಂಡಗಳನ್ನು ಹೊಂದಲು ಸಾಧ್ಯವಾಗಲಿದೆ ಎಂದು ಹೇಳಲಾಗಿದೆ.

ದೂರಸಂಪರ್ಕ ಇಲಾಖೆಯ ನೂತನ ನಿಯಮಗಳ ಪ್ರಕಾರ, ಭಾರತದಲ್ಲಿ ಇನ್ಮುಂದೆ ಹೊಸ ಸಿಮ್ ಖರೀದಿಸಲು ಗ್ರಾಹಕ ಸ್ವಾಧೀನ ನಮೂನೆ ಎಂಬ ಫಾರ್ಮ್ ಅನ್ನು ಭರ್ತಿ ಮಾಡಬೇಕು ಎಂಬ ಮಾನದಂಡವನ್ನು ತರಲಾಗಿದೆ. ಈ ನಿಯಮದ ಪ್ರಕಾರ, ಹೊಸ ಫಾರ್ಮ್ ಒಂದನ್ನು ಗ್ರಾಹಕರು ಮತ್ತು ಟೆಲಿಕಾಂ ಆಪರೇಟರ್‌ಗಳಿಗಾಗಿಯೇ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದು, ಕೆಲವು ನಿಯಮ ಮತ್ತು ಷರತ್ತುಗಳಲ್ಲಿ ಬಂದಿರುವ ಈ ನಿಯಮಗಳಿಗೆ ಗ್ರಾಹಕರು ಅರ್ಹರಾಗಿರಬೇಕಿದ್ದು, ಇದು ಗ್ರಾಹಕರು ಮತ್ತು ಟೆಲಿಕಾಂಗಳ ನಡುವಿನ ಒಪ್ಪಂದವಾಗಿರಲಿದೆ ಎಂದು ಹೇಳಲಾಗಿದೆ.

ಹಾಗೆಯೇ, ಭಾರತದಲ್ಲಿ ಓರ್ವ ವ್ಯಕ್ತಿ ಎಷ್ಟು ಸಿಮ್ ಹೊಂದಬಹುದು ಎಂಬುದನ್ನು ಸಹ ದೂರ ಸಂಪರ್ಕ ಇಲಾಖೆ ತಿಳಿಸಿದ್ದು, ಹೊಸ ನಿಯಮದಂತೆ, ದೇಶದ ಓರ್ವ ಪ್ರಜೆಯು ತನ್ನ ಹೆಸರಿನಲ್ಲಿ ( ಅವನು ಮತ್ತು ಅವಳ) ಒಟ್ಟು 18 ಸಿಮ್‌ಗಳನ್ನು ಖರೀದಿಸಬಹುದು ಎಂದು ಇಲಾಖೆ ತಿಳಿಸಿದೆ. ಈ 18 ಸಿಮ್‌ಗಳಲ್ಲಿ ಸಾಮಾನ್ಯ ಸಂವಹನಕ್ಕಾಗಿ 9 ಸಿಮ್‌ಗಳನ್ನು ಖರೀದಿಸಬಹುದು ಹಾಗೂ M2M ಸಂವಹನಕ್ಕಾಗಿ 9 ಸಿಮ್‌ಗಳನ್ನು ಖರೀದಿಸಬಹುದಾದ ಆಯ್ಕೆಯನ್ನು ನೀಡಲಾಗಿದೆ. ಜೊತೆಗೆ ಗ್ರಾಹಕರು ತಮ್ಮ ಡಿವೈಸ್‌ ಬದಲಾಯಿಸಿದರೆ ಹೊಸ ವಿವರಗಳನ್ನು ಸಲ್ಲಿಸಬೇಕಾಗುತ್ತದೆ.

ಅಂದರೆ, ಇದೀಗ ಓರ್ವ ವ್ಯಕ್ತಿ ಇದೀಗ ತನ್ನ ಹೆಸರಿನಲ್ಲಿ ಸಾಮಾನ್ಯ ಕೆಲಸಗಳಿಗೆ 9 ಸಿಮ್‌ಗಳನ್ನು ಹೊಂದಬಹುದಾಗಿದೆ. ಹಾಗೂ M2M (ಮಷಿನ್ ಟು ಮಷಿನ್) ಸಿಮ್ ಪಡೆಯಲು ಗ್ರಾಹಕರು ಪರಿಶೀಲನಾ ನಮೂನೆಯನ್ನು ಸಲ್ಲಿಸಬೇಕು ಎಂದು ಹೇಳಲಾಗಿದೆ. ಹಾಗೆಯೇ, ಅಪ್ರಾಪ್ತ ವಯಸ್ಕರಿಗೆ ಸಿಮ್ ಪಡೆಯಲು ಯಾವುದೇ ಅವಕಾಶವನ್ನು ಇದೀಗ ತೆಗೆದುಹಾಕಲಾಗಿದೆ. ಇದರರ್ಥ ಯಾವುದೇ ಗ್ರಾಹಕರು 18 ವರ್ಷಕ್ಕಿಂತ ಕಡಿಮೆ ಇದ್ದರೆ, ಟೆಲಿಕಾಂ ಆಪರೇಟರ್‌ಗಳಿಂದ ಸಿಮ್ ಖರೀದಿಸಲು ಸಾಧ್ಯವಿಲ್ಲ. ಹಾಗೂ ಸ್ಥಿರಲೈನ್ ಸಂಪರ್ಕಕ್ಕೂ ಸಹ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.

ಇಲಾಖೆಯು ಇಂತಹ ಮಾನದಂಡಗಳನ್ನು ತರಲು ಹೆಚ್ಚುತ್ತಿರುವ ಸಿಮ್ ಕಾರ್ಡ್‌ ವಂಚನೆ ಪ್ರಕರಣಗಳು ಕಾರಣ ಎನ್ನಲಾಗಿದೆ. ಹಾಗೂ ಗ್ರಾಹಕರು ತಮ್ಮ ಹೆಸರುಗಳಲ್ಲಿನ ಸಿಮ್ ಅನಧಿಕೃತ ಬಳಕೆಯಾಗುತ್ತಿದೆಯಾ ಎಂಬುದನ್ನು ಪರೀಕ್ಷಿಸಲು ಹೊಸ ಕ್ರಮವನ್ನು ನೀಡಲಾಗಿದೆ. ನೀವು ನಿಮ್ಮ ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲಾದ ಎಲ್ಲಾ ಮೊಬೈಲ್ ಸಂಖ್ಯೆಗಳನ್ನು ನೋಡಲು ಇದೀಗ ಅನುಮತಿಸಿದ್ದು, tafcop.dgtelecom.gov.in ವೆಬ್‌ಸೈಟ್‌ನಲ್ಲಿ ನಿಮ್ಮ ಮೊಬೈಲ್ ನಂಬರ್ ಲಗ್ಗತ್ತಿಸಿ ಸಿಮ್ ದುರುಪಯೋಗ ಆಗಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬಹುದು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »