TOP STORIES:

ಈಡಿಗ ಉಪ ಪಂಗಡಗಳನ್ನು ಒಗ್ಗೂಡಿಸುವುದು ಯುವಕರ ಜವಾಬ್ದಾರಿ: ಸತ್ಯಜಿತ್ ಸುರತ್ಕಲ್


ಬೆಂಗಳೂರು: ‘ಪ್ರಬಲ ಸಮುದಾಯಗಳು ಹಿಂದುಳಿದ ವರ್ಗಗಳ ಪ್ರವರ್ಗ ‘2-ಎ’ ಮೀಸಲಾತಿ ಪಡೆಯಲು ಪ್ರಯತ್ನ ನಡೆಸುತ್ತಿವೆ. ಇದರಿಂದ ಈಡಿಗ ಸಮುದಾಯ ಅವಕಾಶಗಳಿಂದ ವಂಚಿತವಾಗುತ್ತದೆ. ಆದುದರಿಂದ 26 ಉಪ ಪಂಗಡಗಳನ್ನು ಒಗ್ಗೂಡಿಸುವ ಕೆಲಸ ಯುವಕರ ಜವಾಬ್ದಾರಿಯಾಗಿದೆ’ ಎಂದು ನಾರಾಯಣ ಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಕರೆ ನೀಡಿದ್ದಾರೆ.

ರವಿವಾರ ಬೆಂಗಳೂರಿನಲ್ಲಿ ನಾರಾಯಣ ಗುರು ವಿಚಾರ ವೇದಿಕೆ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಮೀಸಲಾತಿಯ ಕೂಗು ಕೇಳಿ ಬರುತ್ತಿದೆ. ಪ್ರಬಲ ಸಮುದಾಯಗಳು 2ಎ ಮೀಸಲಾತಿ ಪಟ್ಟಿಗೆ ಸೇರಿದರೆ, ಸವಲತ್ತುಗಳಿಂದ ವಂಚಿತರಾಗಿರುವ ನಮಗೆ ದೊಡ್ಡ ಅಪಾಯ. ಈ ಹಿನ್ನಲೆಯಲ್ಲಿ ಈಡಿಗ ಸಮುದಾಯ ತಮ್ಮ ಸಿಗಬೇಕಾದ ಸವಲತ್ತುಗಳಿಗಾಗಿ ಒಗ್ಗೂಡಿ ಹೋರಾಟ ನಡೆಸಬೇಕಾದ ಅವಶ್ಯಕತೆ ಇದೆ ಎಂದು ಪ್ರತಿಪಾದಿಸಿದರು.

 

ಸಹಾಯಕ ಪೋಲಿಸ್ ಆಯುಕ್ತೆ ರೀನಾ ಸುವರ್ಣ ಮಾತನಾಡಿ, ಯಾವುದೇ ಪಕ್ಷದಲ್ಲಿ ಯಾರೇ ದೊಡ್ಡದಾಗಿ ಬೆಳೆದಿದ್ದರೂ ಅವರು ಸಮಾಜದ ವಿಚಾರ ಬಂದಾಗ ಪಕ್ಷ ಬೇಧ ಮರೆತು ಕೆಲಸ ನಿರ್ವಹಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ 26 ಉಪ ಪಂಗಡಗಳನ್ನು ಒಳಗೊಂಡ ಇಂತಹ ಸಮುದಾಯ ಒಂದೆಡೆಯಲ್ಲಿ ಒಗ್ಗೂಡುವ ಅಗತ್ಯವಿದೆ. ಈಡಿಗ ಸಮುದಾಯ ಸಮಾಜಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದೆ ಎಂದರು.

 

ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮುದಾಯದ ಗಣ್ಯರನ್ನು ಗೌರವಿಸಲಾಯಿತು. ಕಾಂಗ್ರೆಸ್ ಪಕ್ಷದ ಡಾ.ರಾಜ ನಂದಿನಿ ಕಾಗೋಡು ತಿಮ್ಮಪ್ಪ, ಉದ್ಯಮಿ ಗೋವಿಂದ ಬಾಬು ಪೂಜಾರಿ, ಚಿತ್ರನಟ ನಕುಲ್ ಗೋವಿಂದ, ಸಂಘಟನೆಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಸುಂಟರಹಳ್ಳಿ, ಖಚಾಂಚಿ ದಿನೇಶ್ ಮಳಲಗದ್ದೆ, ಸಂಘಟನಾ ಕಾರ್ಯದರ್ಶಿ ಗಣೇಶ್, ಭಾಸ್ಕರ್ ಪೂಜಾರಿ ಉಪಸ್ಥಿತರಿದ್ದರು.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »