TOP STORIES:

FOLLOW US

ಈ ಮನೆಮದ್ದುಗಳನ್ನು ಫಾಲೋ ಮಾಡಿ, ಬಿಳಿ ಗಡ್ಡ ಮತ್ತೆ ಕಪ್ಪಾಗುತ್ತದೆ ನೋಡಿ…


ವಯಸ್ಸಿನ್ನೂ ಸಣ್ಣದಿರುತ್ತದೆ, ಆದರೆ ಕೂದಲು ಬೆಳ್ಳಗಾಗುವುದರ ಜೊತೆಗೆ, ಗಡ್ಡಮೀಸೆಯಲ್ಲಿ ಕೂಡ ಬಿಳಿ ಕೂದಲು ಅಲ್ಲಲ್ಲಿಇಣುಕುತ್ತಿರುತ್ತದೆ! ಸಮಸ್ಯೆ ಇರುವವರಿಗೆ ಇಲ್ಲಿದೆ ನೋಡಿ ಸಿಂಪಲ್ ಮನೆಮದ್ದುಗಳು

ಕೆಲವರಿಗೆ ಮುಖದಲ್ಲಿ ಗಡ್ಡಮೀಸೆ ಇದ್ದರೆ, ನೋಡಲು ಚೆನ್ನಾಗಿ ಕಾಣುತ್ತಾರೆ. ಇನ್ನೂ ಕೆಲವರಿಗೆ ಗಡ್ಡ ಮೀಸೆ ಇಲ್ಲದಿದ್ದರೆ, ನೋಡಲುಜೆಂಟಲ್ ಮೆನ್ ರೀತಿಯಾಗಿ ಕಾಣುತ್ತಾರೆ. ಆದರೆ ಇತ್ತೀಚಿನ ಫ್ಯಾಷನ್ ತಕ್ಕ ಹಾಗೆ ಪುರುಷರು, ಒಮ್ಮೆ ಗಡ್ಡ ಮೀಸೆ ಬೆಳೆಸಿದರೆ, ಇನ್ನೊಮ್ಮೆ, ಕ್ಲೀನ್ ಶೇವ್ ಮಾಡಿ ಕೊಂಡು ಬಿಡುತ್ತಾರೆ. ಆದರೆ ಕೆಲವರಿಗೆ ಗಡ್ಡ ಮೀಸೆ ಬಿಡಲು ಇಷ್ಟವಿರುತ್ತದೆ, ಆದರೆ ಏನುಮಾಡುವುದು, ಅಲ್ಲಲ್ಲಿ ಇಣುಕುವ ಬಿಳಿ ಕೂದಲಿನ ಸಮಸ್ಯೆಗಳಿಂದಾಗಿ, ನೀಟ್ ಆಗಿ ಶೇವಿಂಗ್ ಮಾಡಿ ಬಿಡುವುದೇ ಲೇಸುಎಂದು ಭಾವಿಸುತ್ತಾರೆ.

ಇದಕ್ಕೆಲ್ಲಾ ಕಾರಣಗಳನ್ನು ನೋಡುವುದಾದರೆ, ಅನಾರೋಗ್ಯಕರ ಆಹಾರ ಪದ್ಧತಿ ಹಾಗೂ ಕೆಟ್ಟ ಜೀವನ ಶೈಲಿಯ ಜೊತೆಗೆ ದೇಹದಲ್ಲಿಆದ ಕೆಲವೊಂದು ಹಾರ್ಮೋನುಗಳ ವ್ಯತ್ಯಾಸದಿಂದಾಗಿ ಸಣ್ಣ ವಯಸ್ಸಿನಲ್ಲಿಯೇ, ಪುರುಷರಲ್ಲಿ ಗಡ್ಡಮೀಸೆ ಬೆಳ್ಳಗಾಗುವ ಸಮಸ್ಯೆಎದುರಾಗುತ್ತದೆ. ಹಾಗಂತ ಇದನ್ನು ಮುಚ್ಚಿಡಲು ದಿನನಿತ್ಯ ಶೇವಿಂಗ್ ಮಾಡಲು ಆಗುತ್ತದೆಯಾ? ಇದು ಖಂಡಿತವಾಗಿಯೂ ಆಗುಹೋಗುವಂತಹ ಮಾತಲ್ಲ!

ಹಾಗಾದ್ರೆ ಇದಕ್ಕೆ ಪರಿಹಾರವೇ ಇಲ್ಲವೇ ಎನ್ನುವ ನಿಮ್ಮ ಪ್ರಶ್ನೆಯಾಗಿದ್ದರೆ, ಅದಕ್ಕೆ ಉತ್ತರ ಇಲ್ಲಿದೆ ನೋಡಿಸ್ವಲ್ಪ ತಾಳ್ಮೆಯಿಂದಕೆಲವೊಂದು ಮನೆ ಮದ್ದುಗಳಿಂದ ಪ್ರತಿನಿತ್ಯ ಅನುಸರಿಸಿಕೊಂಡು ಹೋದರೆ, ಖಂಡಿತವಾಗಿಯೂ ಸಮಸ್ಯೆ ಯನ್ನು ಯಾವುದೇಅಡ್ಡಪರಿಣಾಮಗಳು ಇಲ್ಲದೆ ಶಾಶ್ವತವಾಗಿ ನಿವಾರಿಸಿಕೊಳ್ಳಬಹುದು.

      ಮೊದಲಿಗೆ ಒಂದೆರಡು ಟೇಬಲ್ ಚಮಚ ಆಗುವಷ್ಟು ಬಿಳಿ ಎಳ್ಳನ್ನುರಾತ್ರಿ ಮಲಗುವ ಮುನ್ನ ನೀರಿನಲ್ಲಿ ನೆನೆಹಾಕಿ.

  • ಇನ್ನು ಮರುದಿನ ನೆನೆಸಿಟ್ಟ ಬಿಳಿ ಎಳ್ಳನ್ನು ಮಿಕ್ಸರ್ ಜಾರ್‌ನಲ್ಲಿ, ನೆನೆಸಿಟ್ಟ ನೀರಿನ ಸಮೇತ ಹಾಕಿಕೊಂಡು, ಚೆನ್ನಾಗಿ ರುಬ್ಬಿಕೊಳ್ಳಿ. ಸ್ವಲ್ಪ ದಪ್ಪಗೆ ಪೇಸ್ಟ್ ರೀತಿಯಾಗಿ ಮಾಡಿಕೊಂಡರೆ ಒಳ್ಳೆಯದು.
  • ಇನ್ನು ನಿಮ್ಮ ಗಡ್ಡ ಇಲ್ಲಾಂದ್ರೆ ಮೀಸೆಯ ಯಾವ ಭಾಗದಲ್ಲಿ ಹೆಚ್ಚಾಗಿ ಬಿಳಿ ಕೂದಲಿನ ಸಮಸ್ಯೆ ಕಂಡುಬರತ್ತಿದೆಯೋಅಲ್ಲಿಗೆಲ್ಲಾ ಪೇಸ್ಟ್ ನ್ನು ದಪ್ಪಗೆ ಹಚ್ಚಿ.
  • ನಂತರ ಸುಮಾರು ಅರ್ಧ ಗಂಟೆಯವರೆಗೆ ಹಾಗೆಯೇ ಒಣಗಲು ಬಿಡಿ, ನಂತರ ನೀರಿನಿಂದ ತೊಳೆಯಿರಿ. ಉತ್ತಮಫಲಿತಾಂಶಕ್ಕಾಗಿ ವಾರದಲ್ಲಿ ಎರಡು ಮೂರು ಬಾರಿಯಾದರೂ ಮನೆಮದ್ದನ್ನು ಟ್ರೈ ಮಾಡಿ ನೋಡಿ
  • ಬೇಗಾಗುವ ಸಾಮಾಗ್ರಿಗಳು
  • ಒಂದು ಕಪ್ ಆಗುವಷ್ಟು ಮೆಹಂದಿ ಎಲೆಗಳು
  • ಒಂದು ಟೇಬಲ್ ನಿಂಬೆ ರಸ
  • ಒಂದು ಟೇಬಲ್ ಟೇಬಲ್ ಚಮಚದಷ್ಟು ತೆಂಗಿನ ಎಣ್ಣೆ
  • ಒಂದು ಟೇಬಲ್ ಟೇಬಲ್ ಚಮಚದಷ್ಟು ವಿನೆಗರ್
  • ಒಂದು ಟೇಬಲ್ ಚಮಚದಷ್ಟು ಸೀಗೆಕಾಯಿ ಪುಡಿ

ತಯಾರು ಮಾಡಿ ಬಳಸುವ ವಿಧಾನ

  • ಮೊದಲಿಗೆ ನೀಡಿರುವ ಎಲ್ಲಾ ನೈಸರ್ಗಿಕ ಪದಾರ್ಥಗಳನ್ನು ಒಂದು ಬೌಲ್‌‌ನಲ್ಲಿ ಹಾಕಿಕೊಂಡು ಚೆನ್ನಾಗಿ ಮಿಕ್ಸ್ಮಾಡಿಕೊಳ್ಳಿ. ಆಮೇಲೆ ಇವುಗಳನ್ನು ಸಣ್ಣ ಮಿಕ್ಸಿ ಜಾರ್‌ಗೆ ಹಾಕಿ, ಚೆನ್ನಾಗಿ ರುಬ್ಬಿ ಕೊಂಡು ಪೇಸ್ಟ್ ರೀತಿಯಾಗಿ ಮಾಡಿಕೊಳ್ಳಿ. ಆಮೇಲೆ ಇದನ್ನು ಇನ್ನೊಂದು ಪಾತ್ರೆಗೆ ವರ್ಗಾಹಿಸಿ, ಸ್ವಲ್ಪ ಹೊತ್ತು ಹಾಗೆಯೇ ಬಿಡಿ.
  • ಇನ್ನು ಪೇಸ್ಟ್‌ನ್ನು ಗಡ್ಡ ಅಥವಾ ಮೀಸೆಯಲ್ಲಿ ಕಂಡುಬರುವ ಬಿಳಿ ಕೂದಲಿನ ಸಮಸ್ಯೆ ಇರುವ ಕಡೆಗೆಲ್ಲಾ ಹಚ್ಚಿ, ಸುಮಾರು ಅರ್ಧ ಗಂಟೆಗಳವರೆಗೆ ಹಾಗೆಯೇ ಬಿಡಿ. ಆಮೇಲೆ ತಣ್ಣೀರಿನಿಂದ ತೊಳೆಯಿರಿ, ಉತ್ತಮ ಫಲಿತಾಂಶಕ್ಕಾಗಿವಾರದಲ್ಲಿ ಎರಡು ಮೂರು ಬಾರಿಯಾದರೂ ಮನೆಮದ್ದನ್ನು ಟ್ರೈ ಮಾಡಿ ನೋಡಿ.

ತೆಂಗಿನ ಎಣ್ಣೆ ಮತ್ತು ನಿಂಬೆರಸ

  • ಒಂದು ಬೌಲ್‌ಗೆ ಶುದ್ಧ ಒಂದೆರಡು ಚಮಚ ತೆಂಗಿನ ಎಣ್ಣೆ ಹಾಗೂ ಒಂದು ಚಮಚ ನಿಂಬೆರಸವನ್ನು ಹಾಕಿ ಚೆನ್ನಾಗಿಮಿಕ್ಸ್ ಮಾಡಿಕೊಳ್ಳಿ.
  • ನಂತರ ಗಡ್ಡ ಅಥವಾ ಮೀಸೆಯ ಭಾಗದಲ್ಲಿ ಅಲ್ಲಲ್ಲಿ ಇಣುಕುತ್ತಿರುವ, ಬಿಳಿ ಕೂದಲಿಗೆ ಮಿಶ್ರಣವನ್ನು ಹಚ್ಚಿ. ಸುಮಾರು ಒಂದೆರಡು ಗಂಟೆಗಳವರೆಗೆ ಹಾಗೆಯೇ ಬಿಡಿ, ಆಮೇಲೆ, ಗಡ್ಡಮೀಸೆಯ ಕೂದಲನ್ನು ನೀರಿನಿಂದ ತೊಳೆಯಿರಿ. ಉತ್ತಮ ಫಲಿತಾಂಶಕ್ಕಾಗಿ ವಾರದಲ್ಲಿ ಮೂರು ನಾಲ್ಕು ಬಾರಿ ಪ್ರಕ್ರಿಯೆಯನ್ನು ಮುಂದುವರೆಸಿ.

ಬ್ಲ್ಯಾಕ್ ಟೀ ಎಲೆಗಳು

  • ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ, ಚೆನ್ನಾಗಿ ಕುದಿಸಿಕೊಳ್ಳಿ. ಆಮೇಲೆ ಕುದಿ ಬಂದಿರುವ ನೀರಿಗೆ ಸ್ವಲ್ಪ ಬ್ಲ್ಯಾಕ್ಟೀ ಎಲೆಗಳನ್ನು ಹಾಕಿ, ಇನ್ನೊಮ್ಮೆ ಎರಡು ಮೂರು ನಿಮಿಷಗಳವರೆಗೆ ಕುದಿಸಿಕೊಳ್ಳಿ. ಆಮೇಲೆ ಗ್ಯಾಸ್ ಸ್ಟೌವ್ ಅಫ್ ಮಾಡಿ, ನೀರನ್ನು ತಣಿಯಲು ಬಿಡಿ.
  • ಒಮ್ಮೆ ನೀರು ತಣಿದ ಬಳಿಕ, ಬ್ಲ್ಯಾಕ್ ಟೀ ಎಲೆಗಳಿಂದ, ನೀರನ್ನು ಚೆನ್ನಾಗಿ ಹಿಂಡಿ ತೆಗೆಯಿರಿ, ಆಮೇಲೆ ನೀರನ್ನು ಗಡ್ಡದ ಬಿಳಿ ಕೂದಲುಗಳ ಮೇಲೆ ಹಚ್ಚಿ, ಸುಮಾರು ಒಂದೆರಡು ಗಂಟೆಗಳವರೆಗೆ ಹಾಗಯೇ ಬಿಡಿ. ಆಮೇಲೆತಣ್ಣನೆಯ ನೀರಿನಲ್ಲಿ ಚೆನ್ನಾಗಿ ತೊಳೆದುಕೊಳ್ಳಿ.

Share:

More Posts

Category

Send Us A Message

Related Posts

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »