TOP STORIES:

FOLLOW US

ಉದ್ಯೋಗ ಕಳೆದುಕೊಂಡವರಿಗೆ ಉದ್ಯೋಗ ಕಲ್ಪಿಸಿ ಮಾನವೀಯತೆ ಮೆರೆದ ಪ್ರತಿಭಾ ಕುಳಾಯಿ.


ಮಂಗಳೂರು: ಸುರತ್ಕಲ್ ಟೋಲ್ ಡಿ.1ರಿಂದ ರದ್ದಾಗಿದ್ದುಉದ್ಯೋಗ ಕಳೆದುಕೊಂಡ ಟೋಲ್ ಕಾರ್ಮಿಕರಿಗೆಕೆಪಿಸಿಸಿ ಸಂಯೋಜಕಿಪ್ರತಿಭಾ ಕುಳಾಯಿ ಉದ್ಯೋಗದ ವ್ಯವಸ್ಥೆ ಮಾಡಿದ್ದಾರೆ.

ಟೋಲ್ ತೆರವು ಹಿನ್ನೆಲೆ ಉದ್ಯೋಗ ಕಳೆದುಕೊಂಡವರಲ್ಲಿ 22 ಮಂದಿ ಯುವಕ ಯುವತಿಯರು ಪ್ರತಿಭಾ ಕುಳಾಯಿ ಅವರನ್ನು ಭೇಟಿಮಾಡಿದ್ದಾರೆ. ಭೇಟಿ ಮಾಡಿದವರಿಗೆ ಉದ್ಯೋಗದ ವ್ಯವಸ್ಥೆ ಮಾಡಿರುವುದಾಗಿ ಪ್ರತಿಭಾ ಕುಳಾಯಿ ಫೇಸ್ ಬುಕ್ ಪೋಸ್ಟ್ ನಲ್ಲಿಹೇಳಿದ್ದಾರೆ.

ಪ್ರತಿಭಾ ಫೋಸ್ಟ್ ನಲ್ಲಿ ಏನೇನಿದೆ..? ಸುರತ್ಕಲ್ ಟೋಲ್ ಗೇಟ್ ನಲ್ಲಿ ಉದ್ಯೋಗ ಕಳೆದುಕೊಂಡ 35 ಮಂದಿಯನ್ನು ನಾನುಭೇಟಿಯಾಗಿ ಅವರಿಗೆ ಅವರ ವಿದ್ಯಾರ್ಹತೆಗೆ ಅನುಸಾರವಾಗಿ ಉದ್ಯೋಗ ದೊರಕಿಸಿಕೊಡುವ ಭರವಸೆ ನೀಡಿದ್ದು ಅದರಂತೆ ಇಂದುಬೆಳಗ್ಗಿನಿಂದ ನನ್ನ ಕಚೇರಿಯಲ್ಲಿ ಕಾರ್ಯ ನಿರತಳಾಗಿದ್ದೇನೆ. ಟೋಲ್ ಇನ್ ಚಾರ್ಜ್ ಮಿಥುನ್ ಬೈಕಂಪಾಡಿ ಸೂಕ್ತ ರೀತಿಯಲ್ಲಿಸ್ಪಂದಿಸಿದ್ದು ಈಗಾಗಲೇ 22 ಮಂದಿ ನನ್ನನ್ನು ಭೇಟಿಯಾಗಿ ಬಹುಪಾಲು ಯುವಕಯುವತಿಯರಿಗೆ ಬೇರೆ ಬೇರೆ ಸಂಸ್ಥೆಗಳಲ್ಲಿ ಸೂಕ್ತಉದ್ಯೋಗ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದೇನೆ.

ಉದ್ಯೋಗ ಕಳೆದುಕೊಂಡವರಲ್ಲಿ ಒಬ್ಬ ವಿದ್ಯಾರ್ಥಿಯಾಗಿದ್ದು ಆತನ ಮನೆಯ ಪರಿಸ್ಥಿತಿ ತೀರಾ ಹದಗೆಟ್ಟಿರುವ ಕಾರಣ ಹಗಲುಕೆಪಿಟಿಯಲ್ಲಿ ಕಲಿತು ರಾತ್ರಿ ಟೋಲ್ ನಲ್ಲಿ ಕೆಲಸ ಮಾಡುತ್ತಿದ್ದ.ಆತನನ್ನು ನನ್ನ ಕುಳಾಯಿ ಫೌಂಡೇಶನ್ ಮೂಲಕ ದತ್ತು ಪಡೆದುಶಿಕ್ಷಣದ ಖರ್ಚು ವೆಚ್ಚ ನೋಡಿಕೊಳ್ಳುವ ಜೊತೆಗೆ ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದೇನೆ. ಇನ್ನೊಬ್ಬ ಮಹಿಳೆ ಟೋಲ್ ನಲ್ಲಿ ದುಡಿದು ತನ್ನಮಕ್ಕಳನ್ನು ಸಾಕುತ್ತಿದ್ದು ಆಕೆಗೆ ಸೂಕ್ತ ಉದ್ಯೋಗ ಕೊಡಿಸಿ ಮಕ್ಕಳನ್ನು ಶೈಕ್ಷಣಿಕ ದತ್ತು ಪಡೆಯಲಿದ್ದೇನೆ ಎಂದು ಹೇಳಿದ್ದಾರೆ.

ಕುಳಾಯಿ ಫೌಂಡೇಶನ್ ಮೂಲಕ ಈಗಾಗಲೇ 500ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಶೈಕ್ಷಣಿಕ ದತ್ತು ಪಡೆಯಲಾಗಿದ್ದು ವರ್ಷಇನ್ನಷ್ಟು ಮಕ್ಕಳನ್ನು ಶಿಕ್ಷಣದ ಉದ್ದೇಶದಿಂದ ದತ್ತು ಪಡೆಯಲಿದ್ದೇನೆ. ನಾನು ಭರವಸೆಗಳನ್ನು ಮಾತ್ರ ಕೊಡುವುದಿಲ್ಲ, ನುಡಿದಮಾತಿನಂತೆ ನಡೆಯುತ್ತೇನೆ. ಕುರಿತು ಇನ್ನಷ್ಟು ಮಾಹಿತಿ ಮುಂದಿನ ದಿನಗಳಲ್ಲಿ ನಿಮ್ಮೆದುರು ನೀಡಲಿದ್ದೇನೆ ಎಂದು ಬರೆದಿದ್ದಾರೆ.

ಸುರತ್ಕಲ್ ಟೋಲ್ ಗೇಟ್ ನಲ್ಲಿ ಉದ್ಯೋಗ ಕಳೆದುಕೊಂಡರೆ ಅವರಿಗೆ ಅವರ ವಿದ್ಯಾರ್ಹತೆಗೆ ಅನುಸಾರವಾಗಿ ಉದ್ಯೋಗದೊರಕಿಸಿಕೊಡುವ ಭರವಸೆಯನ್ನು ಮೊದಲು ಪ್ರತಿಭಾ ಕುಳಾಯಿ ನೀಡಿದ್ದರು.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »