TOP STORIES:

ಎಂಆರ್‌ಪಿಎಲ್ ವಿರುದ್ಧ ಸಂಘಟಿತ ಹೋರಾಟ ಅಗತ್ಯ: ವಿವೇಕ್‌ರಾಜ್ ಪೂಜಾರಿ


ಮಂಗಳೂರು: ಎಂಆರ್‌ಪಿಎಲ್ ಸಂಸ್ಥೆಯು ಉದ್ಯೋಗ ನೀಡುವಲ್ಲಿ ಸ್ಥಳೀಯರಿಗೆ ಮಾಡಿರುವ ಅನ್ಯಾಯವನ್ನು ಜಿಲ್ಲೆಯ ಪ್ರತಿಯೊಬ್ಬರೂ ಖಂಡಿಸಬೇಕು ಹಾಗೂ ಅದರ ವಿರುದ್ಧ ಜಾತಿ, ಮತ, ರಾಜಕೀಯ ಭೇದ ಮರೆತು ಪ್ರಬಲ ಹೋರಾಟ ಸಂಘಟಿಸಬೇಕು ಎಂದು ಕಾಂಗ್ರೆಸ್‌ನ ಯುವ ನಾಯಕ ಹಾಗೂ ಪನಾಮ ಸಂಸ್ಥೆಯ ಮುಖ್ಯಸ್ಥ ವಿವೇಕ್‌ರಾಜ್ ಪೂಜಾರಿ ಹೇಳಿದ್ದಾರೆ.ಎಂಆರ್‌ಪಿಎಲ್ ಮಾಡಿರುವ ಅನ್ಯಾಯ ಇಡೀ ಜಿಲ್ಲೆಗೆ ಅವಮಾನವಾಗಿದೆ. ತುಳುನಾಡಿನವರೆಲ್ಲರೂ ಸಂಘಟಿತವಾದ ಹೋರಾಟ ನಡೆಸಿದರೆ ಇದರ ವಿರುದ್ಧ ಗೆಲುವು ಸಾಧಿಸಿ ನಮ್ಮವರಿಗೆ ಉದ್ಯೋಗ ಪಡೆದುಕೊಳ್ಳಲು ಸಾಧ್ಯವಿದೆ. ನಾವು ಜಿಲ್ಲೆಯ ವರು ಮತ್ತು ಸ್ಥಳೀಯರು ಎಂಬ ಒಂದೇ ಬ್ಯಾನರ್‌ನಡಿಯಲ್ಲಿ ಈ ಹೋರಾಟ ನಡೆಸಬೇಕು. ನಮ್ಮ ನಡುವೆ ಆರೋಪ – ಪ್ರತ್ಯಾರೋಪ ಮಾಡದೆ ಒಗ್ಗಟ್ಟಿನಿಂದ ಎಂಆರ್‌ಪಿಎಲ್ ವಿರುದ್ಧ ಹೋರಾಡಿ ಜಯ ಸಾಧಿಸಿ ನಮ್ಮ ಶಕ್ತಿಯನ್ನು ತೋರಿಸಬೇಕಾದ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ವಿವೇಕ್‌ರಾಜ್ ಪೂಜಾರಿ ಸಾಮಾಜಿಕ ಕಳಕಳಿ ಹೊಂದಿರುವ ಯುವ ನಾಯಕ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಬಡವರಿಗೆ ಸಾಕಷ್ಟು ಸಹಾಯ ಮಾಡುತ್ತಾ ಸಾಮಾಜಿಕ ಬದ್ಧತೆಯನ್ನು ಮೆರೆದಿರುವ ಇವರು ಜನಪರ ವಿಷಯಗಳ ಮೂಲP ಸದಾ ಸುದ್ದಿಯಲ್ಲಿದ್ದಾರೆ. ಜನರ ಕಷ್ಟಗಳಿಗೆ ಸ್ಪಂದಿಸುವುದೇ ನಿಜವಾದ ಸಮಾಜಸೇವೆ ಎಂದು ಹೇಳುವ ಅವರು ನುಡಿದಂತೆ ನಡೆಯುವವರೂ ಆಗಿದ್ದಾರೆ. ಇವರು ಎಂಆರ್‌ಪಿಎಲ್ ವಿರುದ್ಧ ದನಿ ಎತ್ತಿರುವುದು ಒಂದು ದೊಡ್ಡ ಹೋರಾಟಕ್ಕೆ ಮುನ್ನುಡಿಯಾಗುವ ಸಾಧ್ಯತೆಯಿದೆ. ಇದರಲ್ಲಿ ಅವರ ಕೈಗಳನ್ನು ನಾವೆಲ್ಲರೂ ಗಟ್ಟಿಗೊಳಿಸಬೇಕಾಗಿದೆ.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »