TOP STORIES:

ಎಂಆರ್‌ಪಿಎಲ್ ವಿರುದ್ಧ ಸಂಘಟಿತ ಹೋರಾಟ ಅಗತ್ಯ: ವಿವೇಕ್‌ರಾಜ್ ಪೂಜಾರಿ


ಮಂಗಳೂರು: ಎಂಆರ್‌ಪಿಎಲ್ ಸಂಸ್ಥೆಯು ಉದ್ಯೋಗ ನೀಡುವಲ್ಲಿ ಸ್ಥಳೀಯರಿಗೆ ಮಾಡಿರುವ ಅನ್ಯಾಯವನ್ನು ಜಿಲ್ಲೆಯ ಪ್ರತಿಯೊಬ್ಬರೂ ಖಂಡಿಸಬೇಕು ಹಾಗೂ ಅದರ ವಿರುದ್ಧ ಜಾತಿ, ಮತ, ರಾಜಕೀಯ ಭೇದ ಮರೆತು ಪ್ರಬಲ ಹೋರಾಟ ಸಂಘಟಿಸಬೇಕು ಎಂದು ಕಾಂಗ್ರೆಸ್‌ನ ಯುವ ನಾಯಕ ಹಾಗೂ ಪನಾಮ ಸಂಸ್ಥೆಯ ಮುಖ್ಯಸ್ಥ ವಿವೇಕ್‌ರಾಜ್ ಪೂಜಾರಿ ಹೇಳಿದ್ದಾರೆ.ಎಂಆರ್‌ಪಿಎಲ್ ಮಾಡಿರುವ ಅನ್ಯಾಯ ಇಡೀ ಜಿಲ್ಲೆಗೆ ಅವಮಾನವಾಗಿದೆ. ತುಳುನಾಡಿನವರೆಲ್ಲರೂ ಸಂಘಟಿತವಾದ ಹೋರಾಟ ನಡೆಸಿದರೆ ಇದರ ವಿರುದ್ಧ ಗೆಲುವು ಸಾಧಿಸಿ ನಮ್ಮವರಿಗೆ ಉದ್ಯೋಗ ಪಡೆದುಕೊಳ್ಳಲು ಸಾಧ್ಯವಿದೆ. ನಾವು ಜಿಲ್ಲೆಯ ವರು ಮತ್ತು ಸ್ಥಳೀಯರು ಎಂಬ ಒಂದೇ ಬ್ಯಾನರ್‌ನಡಿಯಲ್ಲಿ ಈ ಹೋರಾಟ ನಡೆಸಬೇಕು. ನಮ್ಮ ನಡುವೆ ಆರೋಪ – ಪ್ರತ್ಯಾರೋಪ ಮಾಡದೆ ಒಗ್ಗಟ್ಟಿನಿಂದ ಎಂಆರ್‌ಪಿಎಲ್ ವಿರುದ್ಧ ಹೋರಾಡಿ ಜಯ ಸಾಧಿಸಿ ನಮ್ಮ ಶಕ್ತಿಯನ್ನು ತೋರಿಸಬೇಕಾದ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ವಿವೇಕ್‌ರಾಜ್ ಪೂಜಾರಿ ಸಾಮಾಜಿಕ ಕಳಕಳಿ ಹೊಂದಿರುವ ಯುವ ನಾಯಕ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಬಡವರಿಗೆ ಸಾಕಷ್ಟು ಸಹಾಯ ಮಾಡುತ್ತಾ ಸಾಮಾಜಿಕ ಬದ್ಧತೆಯನ್ನು ಮೆರೆದಿರುವ ಇವರು ಜನಪರ ವಿಷಯಗಳ ಮೂಲP ಸದಾ ಸುದ್ದಿಯಲ್ಲಿದ್ದಾರೆ. ಜನರ ಕಷ್ಟಗಳಿಗೆ ಸ್ಪಂದಿಸುವುದೇ ನಿಜವಾದ ಸಮಾಜಸೇವೆ ಎಂದು ಹೇಳುವ ಅವರು ನುಡಿದಂತೆ ನಡೆಯುವವರೂ ಆಗಿದ್ದಾರೆ. ಇವರು ಎಂಆರ್‌ಪಿಎಲ್ ವಿರುದ್ಧ ದನಿ ಎತ್ತಿರುವುದು ಒಂದು ದೊಡ್ಡ ಹೋರಾಟಕ್ಕೆ ಮುನ್ನುಡಿಯಾಗುವ ಸಾಧ್ಯತೆಯಿದೆ. ಇದರಲ್ಲಿ ಅವರ ಕೈಗಳನ್ನು ನಾವೆಲ್ಲರೂ ಗಟ್ಟಿಗೊಳಿಸಬೇಕಾಗಿದೆ.


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »