TOP STORIES:

FOLLOW US

ಎಂಟರ್ಟೈನ್ಮೆಂಟ್.. ಎಂಟರ್ಟೈನ್ಮೆಂಟ್… ಎಂಟರ್ಟೈನ್ಮೆಂಟ್… ‘ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್’ : Movie Review


Movie Review by Padmaraj Ramaiah.

‘ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್’ ಚಿತ್ರದ ಟೈಟಲೇ ವಿಭಿನ್ನ. ಮತ್ತೆ ಸಿನಿಮಾ ಅಷ್ಟೇ ವಿಭಿನ್ನವಾಗಿ ಇರದೆ ಇರುತ್ತದಾ…? ಹೌದು ಆನಂದ್ ಎನ್‌.ಕುಂಪಲ ನಿರ್ಮಾಣದಲ್ಲಿ ಹೊಸ ಹುಡುಗರೇ ಸೇರಿಕೊಂಡು ನಿರ್ಮಿಸಿದ ಚೊಚ್ಚಲ ಸಿನಿಮಾದಲ್ಲೇ ಪ್ರೇಕ್ಷಕರ ಹೃದಯ ಗೆಲ್ಲುವುದರಲ್ಲಿ ಯಶಸ್ವಿಯಾಗಿದೆ. ಇಡೀ ಸಿನಿಮಾದಲ್ಲಿ ಯಾವುದೇ ಅಶ್ಲೀಲ ಕಾಮಿಡಿ ತುರುಕಿಸದೇ ಎರಡುವರೆ ಗಂಟೆ ಹಾಸ್ಯದ ಹೊನಲಿನ ಜತೆ ಸ್ವಲ್ಪ ಸೆಂಟಿಮೆಂಟಿನೊಂದಿಗೆ ಸುಂದರ ಮನೋರಂಜನಾತ್ಮಕ ಚಿತ್ರವನ್ನು ನೀಡಿದ್ದಾರೆ ನಿರ್ದೇಶಕ ರಾಹುಲ್ ಅಮೀನ್‌.

ಯುವ ಪೀಳಿಗೆ ಗುನುಗುನಿಸುವಂತ ಸಾಹಿತ್ಯ, ಸಂಗೀತ. ಸದಾ ನಗಿಸುವ ಪಾತ್ರಗಳಿಗೆ ಜೀವ ತುಂಬುತ್ತಿದ್ದ ಕುಸಲ್ದರಸೆ ನವೀನ್ ಡಿ. ಪಡೀಲ್ ‘ಸೌಂಡ್ಸ್ ಆಂಡ್ ಲೈಟ್ಸ್’ ಮಾಲೀಕ ರಾಜಣ್ಣನ ಪಾತ್ರದಲ್ಲಿ ಹಾಸ್ಯದಿಂದ ಹೊರಬಂದು ಗಂಭೀರ ಪಾತ್ರದ ಮೂಲಕ ಪ್ರೇಕ್ಷಕರ ಕಣ್ಣಂಚು ತೇವಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

ಹಾಸ್ಯ ದಿಗ್ಗಜರಾದ ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು, ಸತೀಶ್ ಬಂದಲೆ, ಸಂದೀಪ್ ಶೆಟ್ಟಿ, ಪ್ರಸನ್ನ ಶೆಟ್ಟಿ ಬೈಲೂರು, ಉಮೇಶ್ ಮಿಜಾರ್, ರವಿ ರಾಮಕುಂಜ, ಚೈತ್ರಾ ‌ಶೆಟ್ಟಿ ಡೈಲಾಗ್ ಶೈಲಿ ಪ್ರೇಕ್ಷಕರನ್ನು ನಗೆಗಡಲಿಗೆ ಕೊಂಡೊಯ್ಯುತ್ತದೆ. ಕರೀಷ್ಮ ಅಮೀನ್‌, ಯಶ ಶಿವಕುಮಾರ್ ನಟನೆಗೆ ಫುಲ್ ಮಾರ್ಕ್ಸ್.. ನಿರ್ದೇಶಕ ರಾಹುಲ್ ಅಮೀನ್ ಸಿನಿಮಾವನ್ನು ಅಚ್ಚುಕಟ್ಟಾಗಿ ಹೆಣೆದಿದ್ದಾರೆ. ನಾಯಕ ನಟ ಆರ್.ಜೆ.ವಿನೀತ್ ತಮ್ಮ ಪಾತ್ರವನ್ನು ಉತ್ತಮವಾಗಿ ನಿಭಾಯಿಸುವ ಮೂಲಕ ಎಲ್ಲ ವರ್ಗದ ಪ್ರೇಕ್ಷಕನಿಗೂ ಇಷ್ಟವಾಗುತ್ತಾರೆ. ಪ್ರಸನ್ನ ಶೆಟ್ಟಿ ಬೈಲೂರ್ ಅವರ ಸಂಭಾಷಣೆ ಚಿತ್ರಕ್ಕೆ ಪ್ಲಸ್ ಪಾಯಿಂಟ್… ಏನೇ ಆಗಲಿ ಹೊಸಬರ ಚಿತ್ರವಾದರೂ ಪರಭಾಷೆಯ ಚಿತ್ರಗಳಿಗೆ ಕಡಿಮೆ ಇಲ್ಲ ಅನ್ನೋ ಮಟ್ಟದಲ್ಲಿ ಬಹಳ ಅಚ್ಚುಕಟ್ಟಾಗಿ ತುಳುವಿಗೊಂದು ಅದ್ಭುತ ಕೊಡುಗೆ ನೀಡಿದ್ದಾರೆ. ತುಳುನಾಡಿಗೆ ಇಂತಹ ಸುಂದರ ಚಿತ್ರ ನೀಡಿದ್ದಕ್ಕೆ ಸಿನಿಮಾದ ಇಡೀ ತಂಡಕ್ಕೆ ಅಭಿನಂದನೆಗಳು. ಎಲ್ಲರೂ ಸಿನಿಮಾ ನೋಡಿ ಯುವ ತಂಡದ ಪ್ರಯತ್ನಕ್ಕೆ ಪ್ರೋತ್ಸಾಹಿಸೋಣ….


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »