TOP STORIES:

ಎಂಟರ್ಟೈನ್ಮೆಂಟ್.. ಎಂಟರ್ಟೈನ್ಮೆಂಟ್… ಎಂಟರ್ಟೈನ್ಮೆಂಟ್… ‘ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್’ : Movie Review


Movie Review by Padmaraj Ramaiah.

‘ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್’ ಚಿತ್ರದ ಟೈಟಲೇ ವಿಭಿನ್ನ. ಮತ್ತೆ ಸಿನಿಮಾ ಅಷ್ಟೇ ವಿಭಿನ್ನವಾಗಿ ಇರದೆ ಇರುತ್ತದಾ…? ಹೌದು ಆನಂದ್ ಎನ್‌.ಕುಂಪಲ ನಿರ್ಮಾಣದಲ್ಲಿ ಹೊಸ ಹುಡುಗರೇ ಸೇರಿಕೊಂಡು ನಿರ್ಮಿಸಿದ ಚೊಚ್ಚಲ ಸಿನಿಮಾದಲ್ಲೇ ಪ್ರೇಕ್ಷಕರ ಹೃದಯ ಗೆಲ್ಲುವುದರಲ್ಲಿ ಯಶಸ್ವಿಯಾಗಿದೆ. ಇಡೀ ಸಿನಿಮಾದಲ್ಲಿ ಯಾವುದೇ ಅಶ್ಲೀಲ ಕಾಮಿಡಿ ತುರುಕಿಸದೇ ಎರಡುವರೆ ಗಂಟೆ ಹಾಸ್ಯದ ಹೊನಲಿನ ಜತೆ ಸ್ವಲ್ಪ ಸೆಂಟಿಮೆಂಟಿನೊಂದಿಗೆ ಸುಂದರ ಮನೋರಂಜನಾತ್ಮಕ ಚಿತ್ರವನ್ನು ನೀಡಿದ್ದಾರೆ ನಿರ್ದೇಶಕ ರಾಹುಲ್ ಅಮೀನ್‌.

ಯುವ ಪೀಳಿಗೆ ಗುನುಗುನಿಸುವಂತ ಸಾಹಿತ್ಯ, ಸಂಗೀತ. ಸದಾ ನಗಿಸುವ ಪಾತ್ರಗಳಿಗೆ ಜೀವ ತುಂಬುತ್ತಿದ್ದ ಕುಸಲ್ದರಸೆ ನವೀನ್ ಡಿ. ಪಡೀಲ್ ‘ಸೌಂಡ್ಸ್ ಆಂಡ್ ಲೈಟ್ಸ್’ ಮಾಲೀಕ ರಾಜಣ್ಣನ ಪಾತ್ರದಲ್ಲಿ ಹಾಸ್ಯದಿಂದ ಹೊರಬಂದು ಗಂಭೀರ ಪಾತ್ರದ ಮೂಲಕ ಪ್ರೇಕ್ಷಕರ ಕಣ್ಣಂಚು ತೇವಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

ಹಾಸ್ಯ ದಿಗ್ಗಜರಾದ ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು, ಸತೀಶ್ ಬಂದಲೆ, ಸಂದೀಪ್ ಶೆಟ್ಟಿ, ಪ್ರಸನ್ನ ಶೆಟ್ಟಿ ಬೈಲೂರು, ಉಮೇಶ್ ಮಿಜಾರ್, ರವಿ ರಾಮಕುಂಜ, ಚೈತ್ರಾ ‌ಶೆಟ್ಟಿ ಡೈಲಾಗ್ ಶೈಲಿ ಪ್ರೇಕ್ಷಕರನ್ನು ನಗೆಗಡಲಿಗೆ ಕೊಂಡೊಯ್ಯುತ್ತದೆ. ಕರೀಷ್ಮ ಅಮೀನ್‌, ಯಶ ಶಿವಕುಮಾರ್ ನಟನೆಗೆ ಫುಲ್ ಮಾರ್ಕ್ಸ್.. ನಿರ್ದೇಶಕ ರಾಹುಲ್ ಅಮೀನ್ ಸಿನಿಮಾವನ್ನು ಅಚ್ಚುಕಟ್ಟಾಗಿ ಹೆಣೆದಿದ್ದಾರೆ. ನಾಯಕ ನಟ ಆರ್.ಜೆ.ವಿನೀತ್ ತಮ್ಮ ಪಾತ್ರವನ್ನು ಉತ್ತಮವಾಗಿ ನಿಭಾಯಿಸುವ ಮೂಲಕ ಎಲ್ಲ ವರ್ಗದ ಪ್ರೇಕ್ಷಕನಿಗೂ ಇಷ್ಟವಾಗುತ್ತಾರೆ. ಪ್ರಸನ್ನ ಶೆಟ್ಟಿ ಬೈಲೂರ್ ಅವರ ಸಂಭಾಷಣೆ ಚಿತ್ರಕ್ಕೆ ಪ್ಲಸ್ ಪಾಯಿಂಟ್… ಏನೇ ಆಗಲಿ ಹೊಸಬರ ಚಿತ್ರವಾದರೂ ಪರಭಾಷೆಯ ಚಿತ್ರಗಳಿಗೆ ಕಡಿಮೆ ಇಲ್ಲ ಅನ್ನೋ ಮಟ್ಟದಲ್ಲಿ ಬಹಳ ಅಚ್ಚುಕಟ್ಟಾಗಿ ತುಳುವಿಗೊಂದು ಅದ್ಭುತ ಕೊಡುಗೆ ನೀಡಿದ್ದಾರೆ. ತುಳುನಾಡಿಗೆ ಇಂತಹ ಸುಂದರ ಚಿತ್ರ ನೀಡಿದ್ದಕ್ಕೆ ಸಿನಿಮಾದ ಇಡೀ ತಂಡಕ್ಕೆ ಅಭಿನಂದನೆಗಳು. ಎಲ್ಲರೂ ಸಿನಿಮಾ ನೋಡಿ ಯುವ ತಂಡದ ಪ್ರಯತ್ನಕ್ಕೆ ಪ್ರೋತ್ಸಾಹಿಸೋಣ….


Related Posts

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »