TOP STORIES:

FOLLOW US

ಎಂಟರ್ಟೈನ್ಮೆಂಟ್.. ಎಂಟರ್ಟೈನ್ಮೆಂಟ್… ಎಂಟರ್ಟೈನ್ಮೆಂಟ್… ‘ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್’ : Movie Review


Movie Review by Padmaraj Ramaiah.

‘ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್’ ಚಿತ್ರದ ಟೈಟಲೇ ವಿಭಿನ್ನ. ಮತ್ತೆ ಸಿನಿಮಾ ಅಷ್ಟೇ ವಿಭಿನ್ನವಾಗಿ ಇರದೆ ಇರುತ್ತದಾ…? ಹೌದು ಆನಂದ್ ಎನ್‌.ಕುಂಪಲ ನಿರ್ಮಾಣದಲ್ಲಿ ಹೊಸ ಹುಡುಗರೇ ಸೇರಿಕೊಂಡು ನಿರ್ಮಿಸಿದ ಚೊಚ್ಚಲ ಸಿನಿಮಾದಲ್ಲೇ ಪ್ರೇಕ್ಷಕರ ಹೃದಯ ಗೆಲ್ಲುವುದರಲ್ಲಿ ಯಶಸ್ವಿಯಾಗಿದೆ. ಇಡೀ ಸಿನಿಮಾದಲ್ಲಿ ಯಾವುದೇ ಅಶ್ಲೀಲ ಕಾಮಿಡಿ ತುರುಕಿಸದೇ ಎರಡುವರೆ ಗಂಟೆ ಹಾಸ್ಯದ ಹೊನಲಿನ ಜತೆ ಸ್ವಲ್ಪ ಸೆಂಟಿಮೆಂಟಿನೊಂದಿಗೆ ಸುಂದರ ಮನೋರಂಜನಾತ್ಮಕ ಚಿತ್ರವನ್ನು ನೀಡಿದ್ದಾರೆ ನಿರ್ದೇಶಕ ರಾಹುಲ್ ಅಮೀನ್‌.

ಯುವ ಪೀಳಿಗೆ ಗುನುಗುನಿಸುವಂತ ಸಾಹಿತ್ಯ, ಸಂಗೀತ. ಸದಾ ನಗಿಸುವ ಪಾತ್ರಗಳಿಗೆ ಜೀವ ತುಂಬುತ್ತಿದ್ದ ಕುಸಲ್ದರಸೆ ನವೀನ್ ಡಿ. ಪಡೀಲ್ ‘ಸೌಂಡ್ಸ್ ಆಂಡ್ ಲೈಟ್ಸ್’ ಮಾಲೀಕ ರಾಜಣ್ಣನ ಪಾತ್ರದಲ್ಲಿ ಹಾಸ್ಯದಿಂದ ಹೊರಬಂದು ಗಂಭೀರ ಪಾತ್ರದ ಮೂಲಕ ಪ್ರೇಕ್ಷಕರ ಕಣ್ಣಂಚು ತೇವಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

ಹಾಸ್ಯ ದಿಗ್ಗಜರಾದ ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು, ಸತೀಶ್ ಬಂದಲೆ, ಸಂದೀಪ್ ಶೆಟ್ಟಿ, ಪ್ರಸನ್ನ ಶೆಟ್ಟಿ ಬೈಲೂರು, ಉಮೇಶ್ ಮಿಜಾರ್, ರವಿ ರಾಮಕುಂಜ, ಚೈತ್ರಾ ‌ಶೆಟ್ಟಿ ಡೈಲಾಗ್ ಶೈಲಿ ಪ್ರೇಕ್ಷಕರನ್ನು ನಗೆಗಡಲಿಗೆ ಕೊಂಡೊಯ್ಯುತ್ತದೆ. ಕರೀಷ್ಮ ಅಮೀನ್‌, ಯಶ ಶಿವಕುಮಾರ್ ನಟನೆಗೆ ಫುಲ್ ಮಾರ್ಕ್ಸ್.. ನಿರ್ದೇಶಕ ರಾಹುಲ್ ಅಮೀನ್ ಸಿನಿಮಾವನ್ನು ಅಚ್ಚುಕಟ್ಟಾಗಿ ಹೆಣೆದಿದ್ದಾರೆ. ನಾಯಕ ನಟ ಆರ್.ಜೆ.ವಿನೀತ್ ತಮ್ಮ ಪಾತ್ರವನ್ನು ಉತ್ತಮವಾಗಿ ನಿಭಾಯಿಸುವ ಮೂಲಕ ಎಲ್ಲ ವರ್ಗದ ಪ್ರೇಕ್ಷಕನಿಗೂ ಇಷ್ಟವಾಗುತ್ತಾರೆ. ಪ್ರಸನ್ನ ಶೆಟ್ಟಿ ಬೈಲೂರ್ ಅವರ ಸಂಭಾಷಣೆ ಚಿತ್ರಕ್ಕೆ ಪ್ಲಸ್ ಪಾಯಿಂಟ್… ಏನೇ ಆಗಲಿ ಹೊಸಬರ ಚಿತ್ರವಾದರೂ ಪರಭಾಷೆಯ ಚಿತ್ರಗಳಿಗೆ ಕಡಿಮೆ ಇಲ್ಲ ಅನ್ನೋ ಮಟ್ಟದಲ್ಲಿ ಬಹಳ ಅಚ್ಚುಕಟ್ಟಾಗಿ ತುಳುವಿಗೊಂದು ಅದ್ಭುತ ಕೊಡುಗೆ ನೀಡಿದ್ದಾರೆ. ತುಳುನಾಡಿಗೆ ಇಂತಹ ಸುಂದರ ಚಿತ್ರ ನೀಡಿದ್ದಕ್ಕೆ ಸಿನಿಮಾದ ಇಡೀ ತಂಡಕ್ಕೆ ಅಭಿನಂದನೆಗಳು. ಎಲ್ಲರೂ ಸಿನಿಮಾ ನೋಡಿ ಯುವ ತಂಡದ ಪ್ರಯತ್ನಕ್ಕೆ ಪ್ರೋತ್ಸಾಹಿಸೋಣ….


Share:

More Posts

Category

Send Us A Message

Related Posts

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’


Share       ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್


Read More »