TOP STORIES:

“ಎಲ್ಲಿ ಸ್ತ್ರೀ ಶಕ್ತಿಯನ್ನು ಪೂಜಿಸುತ್ತಾರೋ ಅಲ್ಲಿ ದೈವಿಕ ಶಕ್ತಿ ನೆಲೆಸುತ್ತದೆ” : ಬರಹ – ರಶ್ಮಿ ಸನಿಲ್ ಮಂಗಳೂರು


“ಎಲ್ಲಿ ಸ್ತ್ರೀ ಶಕ್ತಿಯನ್ನು ಪೂಜಿಸುತ್ತಾರೋ ಅಲ್ಲಿ ದೈವಿಕ ಶಕ್ತಿ ನೆಲೆಸುತ್ತದೆ” ಎಂಬ ನಂಬಿಕೆ ಇರುವ ದೇಶ ಭಾರತ. ಆದರೆ, ಇಂದು ವಿಶ್ವದಲ್ಲೇ ಮಹಿಳೆಯರಿಗೆ ಭಾರತ ಅತ್ಯಂತ ಅಪಾಯಕಾರಿ ದೇಶ. ಅದಕ್ಕೆ ಕಾರಣ ಇತ್ತೀಚೆಗೆ ಮಹಿಳೆಯರ ಮೇಲೆ ನಡೆಯುತ್ತಿರುವ ಭೀಕರ ಅತ್ಯಾಚಾರಗಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳು.

ಭಾರತದಲ್ಲಿ ಪ್ರತಿ ಒಂದು ಗಂಟೆಗೆ ನಾಲ್ಕು ಅತ್ಯಾಚಾರ ಪ್ರಕರಣ ದಾಖಲಾಗುತ್ತಿದೆಯಂತೆ. ದಾಖಲಾಗದೆ ಉಳಿದ ಅತ್ಯಾಚಾರಗಳನ್ನು ಪರಿಗಣಿಸಿದರೆ ಗಂಟೆಗೆ ೧೦ಕ್ಕೂ ಹೆಚ್ಚು ಅತ್ಯಾಚಾರಗಳಾಗುತ್ತಿವೆ ಎಂಬುದು ಆತ್ಮವನ್ನೇ ಹಿಸುಕಿ ಹಾಕುವ ಕಠೋರ ಸತ್ಯ.

 

ಭಾರತದಲ್ಲಿ ಪ್ರಮುಖವಾಗಿ ಮಹಿಳೆಯರ ಮೇಲೆ ಮೂರು ವಿಧದ ದೌರ್ಜನ್ಯಗಳು ನಡೆಯುತ್ತಿವೆ. ಮೊದಲನೆಯದು ಲೈಂಗಿಕ ಅತ್ಯಾಚಾರ, ಎರಡನೆಯದು ಧಾರ್ಮಿಕ ಮತ್ತು ಸಂಪ್ರದಾಯಗಳ ಹೆಸರಿನಲ್ಲಿ ಆಗುತ್ತಿರುವ ದೌರ್ಜನ್ಯ, ಮೂರನೆಯದ್ದು ಲೈಂಗಿಕ ಗುಲಾಮರನ್ನಾಗಿ ಮಾಡಿಕೊಳ್ಳಲು ಮಾನವ ಕಳ್ಳ ಸಾಗಣೆ ಮಾಡುವುದು ಕೂಡ ಭಾರತದಲ್ಲಿಯೇ ಹೆಚ್ಚಂತೆ.

 

ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಹೊಂದಿರುವ ಹಾಗೂ ಬಾಹ್ಯಾಕಾಶ ವಿಜ್ಞಾನದಲ್ಲಿ ಮುಂಚೂಣಿಯಲ್ಲಿರುವ ಭಾರತ ಮಹಿಳಾ ಸುರಕ್ಷತೆ ವಿಷಯದಲ್ಲಿ ಮಾತ್ರ ಇಡೀ ವಿಶ್ವದ ಮುಂದೆ ತಲೆ ತಗ್ಗಿಸುವಂತಾಗಿದೆ.

 

ಮಹಿಳೆಯನ್ನು ಪೂಜ್ಯನೀಯ ಭಾವನೆಯಲ್ಲಿ ಕಂಡು ಪೂಜಿಸುವ ದೇಶ ನಮ್ಮದು ಎನ್ನುವ ಹೆಮ್ಮೆಯ ಮಾತಿಗೆ ಕಳಂಕ ತರುವ ಕಾರ್ಯವನ್ನು ಇಂದು ಕೆಲವೊಂದು ಕಾಮ ಪಿಶಾಚಿಗಳು ಹಾಗೂ ದುಷ್ಟ, ದುಷ್ಕರ್ಮಿಗಳು ಎಸಗಿ ಹೂವಿನಂತಹ ಹೆಣ್ಣಿಗೆ ಮಾತ್ರ ಲೋಕದ ಕಟ್ಟು ಪಾಡು ಎನ್ನುವಂತೆ ಮಾಡಿದ್ದಾರೆ. ಮನೆಯ ಮಗನಿಗೆ ಬುದ್ಧಿ ಹೇಳಿದರೆ ಇಂದು ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಯಾಕೆಂದರೆ ಇಂದು ಹೆಣ್ಣನ್ನು ಅವಳು ತೊಡುವ ಬಟ್ಟೆಯಿಂದ ಅಳೆಯಲಾಗುತ್ತಿದೆ. ಆದರೆ ಅತ್ಯಾಚಾರ ಆದ ಪ್ರಕರಣಗಳಲ್ಲಿ ಅಪ್ರಾಪ್ತ ಬಾಲಕಿಯರ ಸಂಖ್ಯೆಯೂ ಹೆಚ್ಚಾಗಿದೆ. ಹೊರದೇಶಗಳಲ್ಲಿ ಅರೆಬರೆ ಬಟ್ಟೆ ತೊಟ್ಟರೂ ಅತ್ಯಾಚಾರದ ಸಂಖ್ಯೆ ಕಡಿಮೆ. ಹಾಗಾದರೆ ಇಲ್ಲಿ ಯಾರ ತಪ್ಪಿದೆ ಹೇಳಿ? ನೋಡುವವರ ದೃಷ್ಟಿ ಸರಿ ಇದ್ದರೆ ಎಲ್ಲವೂ ಪೂಜ್ಯನೀಯ ಅಲ್ಲವೇ? ಅದಕ್ಕಾಗಿ ಮನೆಯಿಂದಲೇ ಇದರ ಅರಿವು ಮೂಡಿಸಬೇಕು. ಮನೆಯಲ್ಲಿ ಹಿರಿಯರು ತಮ್ಮ ಮಕ್ಕಳಿಗೆ ಬುದ್ಧಿ ಹೇಳಿದರೆ ಬೇರೊಬ್ಬರಿಗೆ ಉಪದೇಶ ನೀಡುವ ಅಗತ್ಯ ಬರುವುದಿಲ್ಲ. ಅತ್ಯಾಚಾರ, ಲೈಂಗಿಕ ಶೋಷಣೆಯಂತಹ ಅಮಾನವೀಯ, ದುಷ್ಕೃತ್ಯಗಳು ಸ್ವಲ್ಪ ಮಟ್ಟಿಗೆಯಾದರೂ ಕಡಿಮೆಯಾಗಬಹುದು.


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »