TOP STORIES:

FOLLOW US

“ಎಲ್ಲಿ ಸ್ತ್ರೀ ಶಕ್ತಿಯನ್ನು ಪೂಜಿಸುತ್ತಾರೋ ಅಲ್ಲಿ ದೈವಿಕ ಶಕ್ತಿ ನೆಲೆಸುತ್ತದೆ” : ಬರಹ – ರಶ್ಮಿ ಸನಿಲ್ ಮಂಗಳೂರು


“ಎಲ್ಲಿ ಸ್ತ್ರೀ ಶಕ್ತಿಯನ್ನು ಪೂಜಿಸುತ್ತಾರೋ ಅಲ್ಲಿ ದೈವಿಕ ಶಕ್ತಿ ನೆಲೆಸುತ್ತದೆ” ಎಂಬ ನಂಬಿಕೆ ಇರುವ ದೇಶ ಭಾರತ. ಆದರೆ, ಇಂದು ವಿಶ್ವದಲ್ಲೇ ಮಹಿಳೆಯರಿಗೆ ಭಾರತ ಅತ್ಯಂತ ಅಪಾಯಕಾರಿ ದೇಶ. ಅದಕ್ಕೆ ಕಾರಣ ಇತ್ತೀಚೆಗೆ ಮಹಿಳೆಯರ ಮೇಲೆ ನಡೆಯುತ್ತಿರುವ ಭೀಕರ ಅತ್ಯಾಚಾರಗಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳು.

ಭಾರತದಲ್ಲಿ ಪ್ರತಿ ಒಂದು ಗಂಟೆಗೆ ನಾಲ್ಕು ಅತ್ಯಾಚಾರ ಪ್ರಕರಣ ದಾಖಲಾಗುತ್ತಿದೆಯಂತೆ. ದಾಖಲಾಗದೆ ಉಳಿದ ಅತ್ಯಾಚಾರಗಳನ್ನು ಪರಿಗಣಿಸಿದರೆ ಗಂಟೆಗೆ ೧೦ಕ್ಕೂ ಹೆಚ್ಚು ಅತ್ಯಾಚಾರಗಳಾಗುತ್ತಿವೆ ಎಂಬುದು ಆತ್ಮವನ್ನೇ ಹಿಸುಕಿ ಹಾಕುವ ಕಠೋರ ಸತ್ಯ.

 

ಭಾರತದಲ್ಲಿ ಪ್ರಮುಖವಾಗಿ ಮಹಿಳೆಯರ ಮೇಲೆ ಮೂರು ವಿಧದ ದೌರ್ಜನ್ಯಗಳು ನಡೆಯುತ್ತಿವೆ. ಮೊದಲನೆಯದು ಲೈಂಗಿಕ ಅತ್ಯಾಚಾರ, ಎರಡನೆಯದು ಧಾರ್ಮಿಕ ಮತ್ತು ಸಂಪ್ರದಾಯಗಳ ಹೆಸರಿನಲ್ಲಿ ಆಗುತ್ತಿರುವ ದೌರ್ಜನ್ಯ, ಮೂರನೆಯದ್ದು ಲೈಂಗಿಕ ಗುಲಾಮರನ್ನಾಗಿ ಮಾಡಿಕೊಳ್ಳಲು ಮಾನವ ಕಳ್ಳ ಸಾಗಣೆ ಮಾಡುವುದು ಕೂಡ ಭಾರತದಲ್ಲಿಯೇ ಹೆಚ್ಚಂತೆ.

 

ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಹೊಂದಿರುವ ಹಾಗೂ ಬಾಹ್ಯಾಕಾಶ ವಿಜ್ಞಾನದಲ್ಲಿ ಮುಂಚೂಣಿಯಲ್ಲಿರುವ ಭಾರತ ಮಹಿಳಾ ಸುರಕ್ಷತೆ ವಿಷಯದಲ್ಲಿ ಮಾತ್ರ ಇಡೀ ವಿಶ್ವದ ಮುಂದೆ ತಲೆ ತಗ್ಗಿಸುವಂತಾಗಿದೆ.

 

ಮಹಿಳೆಯನ್ನು ಪೂಜ್ಯನೀಯ ಭಾವನೆಯಲ್ಲಿ ಕಂಡು ಪೂಜಿಸುವ ದೇಶ ನಮ್ಮದು ಎನ್ನುವ ಹೆಮ್ಮೆಯ ಮಾತಿಗೆ ಕಳಂಕ ತರುವ ಕಾರ್ಯವನ್ನು ಇಂದು ಕೆಲವೊಂದು ಕಾಮ ಪಿಶಾಚಿಗಳು ಹಾಗೂ ದುಷ್ಟ, ದುಷ್ಕರ್ಮಿಗಳು ಎಸಗಿ ಹೂವಿನಂತಹ ಹೆಣ್ಣಿಗೆ ಮಾತ್ರ ಲೋಕದ ಕಟ್ಟು ಪಾಡು ಎನ್ನುವಂತೆ ಮಾಡಿದ್ದಾರೆ. ಮನೆಯ ಮಗನಿಗೆ ಬುದ್ಧಿ ಹೇಳಿದರೆ ಇಂದು ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಯಾಕೆಂದರೆ ಇಂದು ಹೆಣ್ಣನ್ನು ಅವಳು ತೊಡುವ ಬಟ್ಟೆಯಿಂದ ಅಳೆಯಲಾಗುತ್ತಿದೆ. ಆದರೆ ಅತ್ಯಾಚಾರ ಆದ ಪ್ರಕರಣಗಳಲ್ಲಿ ಅಪ್ರಾಪ್ತ ಬಾಲಕಿಯರ ಸಂಖ್ಯೆಯೂ ಹೆಚ್ಚಾಗಿದೆ. ಹೊರದೇಶಗಳಲ್ಲಿ ಅರೆಬರೆ ಬಟ್ಟೆ ತೊಟ್ಟರೂ ಅತ್ಯಾಚಾರದ ಸಂಖ್ಯೆ ಕಡಿಮೆ. ಹಾಗಾದರೆ ಇಲ್ಲಿ ಯಾರ ತಪ್ಪಿದೆ ಹೇಳಿ? ನೋಡುವವರ ದೃಷ್ಟಿ ಸರಿ ಇದ್ದರೆ ಎಲ್ಲವೂ ಪೂಜ್ಯನೀಯ ಅಲ್ಲವೇ? ಅದಕ್ಕಾಗಿ ಮನೆಯಿಂದಲೇ ಇದರ ಅರಿವು ಮೂಡಿಸಬೇಕು. ಮನೆಯಲ್ಲಿ ಹಿರಿಯರು ತಮ್ಮ ಮಕ್ಕಳಿಗೆ ಬುದ್ಧಿ ಹೇಳಿದರೆ ಬೇರೊಬ್ಬರಿಗೆ ಉಪದೇಶ ನೀಡುವ ಅಗತ್ಯ ಬರುವುದಿಲ್ಲ. ಅತ್ಯಾಚಾರ, ಲೈಂಗಿಕ ಶೋಷಣೆಯಂತಹ ಅಮಾನವೀಯ, ದುಷ್ಕೃತ್ಯಗಳು ಸ್ವಲ್ಪ ಮಟ್ಟಿಗೆಯಾದರೂ ಕಡಿಮೆಯಾಗಬಹುದು.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »