TOP STORIES:

ಎ ಜರ್ನಿ ಫ್ರಮ್ ‘ಪಾರ್ವತಿ’ ಟು ‘ಅನ್ವಿತಾ’


ನಿರೂಪಣೆ ಎಂಬ ಮೊದಲ ಘಟ್ಟ ಹತ್ತಿ, ತಂಪಿಂಪಿನ ಕಂಪು ಹರಡಿಸಿ, ಔಟ್ ಆಫ್ ಸಿಲೇಬಸ್ ಅನ್ನೋ ನಟನೆ ಎಂಬ ಪ್ರಶ್ನೆಗೆ ಉತ್ತರಿಸಿ ,’ದಂಡ್’ ನ ಎರಡನೇ ಲೀಡ್ ಆಗಿ, ‘ಗಟ್ಟಿಮೇಳ’ದ ಮೊದಲನೇ ಮದುಮಗಳಾಗಿ, ಪಾರ್ವತಿಯಿಂದ ಅನ್ವಿತಾ ಎಂದು ಪುನರ್ ನಾಮಕರಿಸಿ, ಅಗ್ರಜನ ಮುದ್ದಿನ ತಂಗಿಯಾಗಿ, ನಮ್ಮ ನಿಮ್ಮೆಲ್ಲರ ಮನದಲ್ಲಿ ‘ಆಧ್ಯಾ’ಳ ಛಾಪನ್ನು ಮೂಡಿಸಿ ಮನೆಮಾತಾಗಿರುವವರು ಸಾಗರದ ಬೆಡಗಿ ‘ಅನ್ವಿತಾ ಸಾಗರ್’.

   (Copyrights owned by: billavaswarriors.com )

ಬಣ್ಣದ ಜಗತ್ತಿಗೆ ಕಾಲಿಟ್ಟ ನಂತರ ಪಾರ್ವತಿಯಿಂದ ಅನ್ವಿತಾ ಸಾಗರ್ ಎಂದು ತನ್ನ ಹೆಸರನ್ನು ಬದಲಾಯಿಸಿಕೊಂಡ ಇವರು ,ಉದ್ಯಮಿ ಹೇಮಚಂದ್ರ ಮತ್ತು ಭಾರತಿ ದಂಪತಿಯ ಸುಪುತ್ರಿ, ನಟ ಅನೂಪ್ ಸಾಗರ್ ರವರ ಮುದ್ದಿನ ತಂಗಿ.ಮಂಗಳೂರಿನ ಶಾರದಾ ಪಿಯು ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪಡೆದು,ಬಿ.ಬಿ.ಎ ಮತ್ತು ಎಂ.ಬಿ.ಎ ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಮಂಗಳೂರಿನ ಎಸ್.ಡಿ.ಎಂ ಕಾಲೇಜಿನಲ್ಲಿ ಪೂರ್ಣಗೊಳಿಸಿದರು.ಬಿ.ಬಿ.ಎ ಪದವಿ ಪಡೆದ ಮೇಲೆ ಇವರು ನಮ್ಮ ಟವಿ ಚಾನಲ್ ನಲ್ಲಿ ನಾಲ್ಕು ವರುಷಗಳ ಕಾಲ ನಿರೂಪಕಿಯಾಗಿ ಕಾರ್ಯ ನಿರ್ವಹಿಸಿದರು.

ರಂಜಿತ್ ಬಜ್ಪೆ ನಿರ್ದೇಶನದ ‘ದಂಡ್’ ಎಂಬ ತುಳು ಸಿನಿಮಾದ ಮೂಲಕ ಸಿನಿ ಲೋಕಕ್ಕೆ ಪಾದಾರ್ಪಿಸಿದ ಇವರು ನಟನೆ ಹೊರತು ನೃತ್ಯ-ಗಾನಕಲೆ, ಪಾಕಕ್ರಿಯೆ ಮತ್ತು ಮಹಾಕಾವ್ಯಗಳನ್ನು ಓದುವ ಹವ್ಯಾಸವನ್ನು ಹೊಂದಿದ್ದಾರೆ.

   (Copyrights owned by: billavaswarriors.com )

‘ವೇದ’ ‘ಪ್ರಿಯ’ಪಾತ್ರಗಳಲ್ಲಿ ಮಿಂಚಿದ ಅನ್ವಿತಾ:

ಬಣ್ಣದ ಜಗತ್ತಿಗೆ ದಂಡ್ ಸಿನಿಮಾದ ಮೂಲಕ ಕಾಲಿಟ್ಟ ಇವರು ಮೊದಲ ಟೇಕ್ ನಲ್ಲೇ ನಿರ್ದೇಶಕ ರಂಜಿತ್ ಬಜ್ಪೆಯವರಿಂದ ಸಯ್ ಎಂದೆನಿಸಿಕೊಂಡಿದ್ದರು. ನಂತರ ಒಮ್ಮೆ ಹಚ್ಚಿದ ಬಣ್ಣವನ್ನು ಗುಂದಲು ಬಿಡದೆ ನಟಿಸಲು ಮುನ್ನಡೆದ ಇವರು ‘ಬಲೆ ಪುದರ್ ದೀಕ ಈ ಪ್ರೀತಿಗ್'(ಶಾನ್ವಿ),’ಪೆಟ್ಕಮ್ಮಿ'(ಪ್ರಿಯ) ಎಂಬ ತುಳು ಸಿನಿಮಾಗಳಲ್ಲಿ ಹಾಗೇ ‘ಬಣ್ಣ ಬಣ್ಣದ ಬದುಕು'(ಶಾಯಿದಾ), ‘ಜೀವನ ಯಜ್ಞ’, ‘ಮಾಯಾ ಕನ್ನಡಿ'(ಮಧು) ಎಂಬ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದಲ್ಲದೇ ತುಳುನಾಡಿನ ಹಳ್ಳಿ ಹುಡ್ಗಿಯ ಪಾತ್ರದಲ್ಲಿ ‘ತಂಬಿಲ'(ವೇದ) – ತುಳು ಸಿನಿಮಾದಲ್ಲಿ , ‘ವಿರಾಟ ಪರ್ವ'(ಖುಷಿ) ಎಂಬ ಕನ್ನಡ ಸಿನಿಮಾದಲ್ಲಿ ಪಾತ್ರವಹಿಸಿದ್ದಾರೆ. ಇವು ಮುಂಬರುವ ಚಿತ್ರಗಳು.ಹಾಗೇ ಪ್ರಸ್ತುತವಾಗಿ ‘ಗಟ್ಟಿಮೇಳ’ ಎಂಬ ಧಾರವಾಹಿಯಲ್ಲಿ ಆಧ್ಯಾಳ ಪಾತ್ರ ವಹಿಸಿ ಎಲ್ಲರ ಜನಮನ ಗೆದ್ದಿದ್ದಾರೆ.

ಅನ್ವಿತಾರ ಮನದ ಮಾತು:

‘ಬಿ.ಬಿ.ಎ ಮಗ್ಸಿದ್ ಮೇಲೆ ಕೇವಲ ನಿರೂಪಕಿಯಾಗಿ ಕೆಲ್ಸ ಮಾಡುತ್ತಿದ್ದೆ.ನಟನೆ ತನಗೆ ಔಟ್ ಆಫ್ ಸಿಲೇಬಸ್ ಕ್ವೆಶನ್ ತರ ಬಂದಿದ್ದು,ಅದರ ಬಗ್ಗೆ ಗಂಧ ಗಾಳಿನೂ ಗೊತ್ತಿರದ ತನಗೆ ಮೊದಲನೇ ಬಾರಿಯ ಆಡಿಷನ್ ನಲ್ಲಿ, ಫಸ್ಟ್ ಟೇಕ್ ನಲ್ಲೇ ಸಯ್ ಅನ್ಸಿದ್ದು ತುಂಬಾನೇ ಖುಷಿ ಕೊಟ್ಟಿದೆ. ತನ್ನ ಪ್ರತಿ ಕಾರ್ಯದಲ್ಲಿ ತನ್ನ ಹೆತ್ತವರ ಅದರಲ್ಲೂ ಅಜ್ಜ ಮತ್ತು ಅಣ್ಣ ಸದಾ ಬೆನ್ನೆಲುಬಾಗಿದ್ದರಿಂದ ಈ ಎಲ್ಲಾ ಸಾಧನೆಗಳು ಬೆಳಕಿಗೆ ಬಂದಿವೆ’ ಎನ್ನುತ್ತಾರೆ ಅನ್ವಿತಾ.

ಗಟ್ಟಿಮೇಳದ ಮೊದಲನೇ ಮದುಮಗಳಾಗಿ ಕಿರುತೆರೆಗೆ ಪಾದಾರ್ಪಿಸಿದ ಪಾರ್ವತಿ:

ನಾಲ್ಕು ವರ್ಷಗಳ ಕಾಲ ತುಳುಚಿತ್ರರಂಗದಲ್ಲಿ ಮಿಂಚಿದ ಅನ್ವಿತಾರಿಗೆ ಗಟ್ಟಿಮೇಳ ಎಂಬ ಧಾರವಾಹಿಯಲ್ಲಿ ನಟಿಸಲು ಸಿಕ್ಕಿದ ಅವಕಾಶವು, ತನ್ನ ಜೀವನದ ಟರ್ನಿಂಗ್ ಸಿಚುವೇಷನ್ ಎಂದು ಅಭಿವ್ಯಕ್ತಪಡಿಸುತ್ತಾರೆ. ಇದೀಗ ಅಗ್ರಜನ ಮುದ್ದಿನ ತಂಗಿಯಾಗಿ ,ಗರ್ಭಿಣಿ ಮಹಿಳೆಯ ಪಾತ್ರದಲ್ಲಿ ನಟಿಸಿದ್ದಲ್ಲಿ ಜನರಿಂದ ತುಂಬಾನೇ ಒಳ್ಳೆ ಪ್ರತಿಕ್ರಿಯೆ ಬಂದಿದೆ ಎಂಬುದು ಅನ್ವಿತಾರ ಅಭಿಪ್ರಾಯ.

   (Copyrights owned by: billavaswarriors.com )

ಸಂದ ಗೌರವಗಳು:

ಚಿತ್ರರಂಗದಲ್ಲಿನ ಇವರ ಅಪೂರ್ವ ಸಾಧನೆಯನ್ನು ಗಮನಿಸಿ ಇವರಿಗೆ ಬಿಲ್ಲವ ಹಾಗೂ ಹಲವಾರು ಸಂಘಗಳ ವತಿಯಿಂದ ಸನ್ಮಾನಿಸಲಾಗಿದೆ.ಹಾಗೇ‌ ದಂಡ್ ಸಿನಿಮಾದ‌ ನಂತರ ‘ತುಳುಚಿತ್ರರಂಗದ ಪಟಾಕಿ’ ಅನ್ನೋ ಬಿರುದನ್ನು ಇವರು ಹೊಂದಿದ್ದಾರೆ.

ಮೊಗದಲ್ಲಿ ಸದಾ ಮುಗುಳ್ನಗೆಯನ್ನು ಚೆಲ್ಲುತ್ತಾ ,ಕಿವಿಯ ಮೂಲೆ ಮೂಲೆಯಲ್ಲಿ ಪ್ರತಿಧ್ವನಿಸುವ ನಿಮ್ಮ ಮಾತುಗಳು ಹೀಗೆ ಶಾಶ್ವತವಾಗಿದ್ದು ಹಾಗೇ ನಿಮ್ಮ ಕಲಾ ಜೀವನವು ಇನ್ನಷ್ಟು ಬಣ್ಣಗಳಿಂದ ತುಂಬಿ ರಂಗೇರಲಿ ಎಂದು ಆಶಯಿಸುತ್ತಾ ನಾರಾಯಣ ಗುರುಗಳ ಆಶೀರ್ವಾದ ಕೋಟಿಚೆನ್ನಯರ ಅನುಗ್ರಹ ಸದಾ ನಿಮ್ಮ ಮೇಲೆ ಇರಲಿ ಎಂದು ಬಿಲ್ಲವ ವಾರಿಯರ್ಸ್‌ ಸಂಸ್ಥೆಯ ವತಿಯಿಂದ ಹಾರೈಸುತ್ತೇನೆ.

ಬರಹ : ಯಕ್ಷಿತಾ ಆರ್ ,ಮೂಡುಕೊಣಾಜೆ

   (Copyrights owned by: billavaswarriors.com )


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »