TOP STORIES:

FOLLOW US

ಏರ್ ಇಂಡಿಯಾದ 4,500 ನೌಕರರ ಸ್ವಯಂ ನಿವೃತ್ತಿ: ಹೊಸ ವ್ಯವಸ್ಥೆ ರೂಪಿಸೋದಕ್ಕೆ ಟಾಟಾ ಕಂಪನಿ ಮಾಡ್ತಿರೋದೇನು..?


ಏರ್‌ ಇಂಡಿಯಾದಲ್ಲಿ ಹೊಸ ಪ್ರತಿಭೆಗಳಿಗಳಿಗೆ ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಟಾಟಾ ಗ್ರುಪ್‌ ಜೂನ್‌ 1ರಂದು ಸ್ವಯಂನಿವೃತ್ತಿ ಯೋಜನೆಯನ್ನು (VRS) ಪರಿಚಯಿಸಿದೆ. ಇದರಡಿಯಲ್ಲಿ ಸುಮಾರು 4,500 ಉದ್ಯೋಗಿಗಳು ನಿವೃತ್ತಿ ಆಯ್ದುಕೊಂಡಿದ್ದಾರೆಎಂದು ವರದಿಗಳು ಹೇಳಿವೆ. ಹೆಚ್ಚುವರಿಯಾಗಿ, ಮುಂದಿನ ಎರಡು ವರ್ಷಗಳಲ್ಲಿ ಇನ್ನೂ 4,000 ಜನರು ಕಂಪನಿಯಿಂದನಿವೃತ್ತರಾಗುತ್ತಾರೆ ಎನ್ನಲಾಗಿದೆ.

ಕೆಲ ವರದಿಗಳ ಪ್ರಕಾರ ಕಂಪನಿಯ ಉತ್ಪಾದಕತೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಹಳೇ ವ್ಯವಸ್ಥೆಗಳನ್ನು ಡಿಜಿಟಲೀಕರಣಗೊಳಿಸಿಪುನರುಜ್ಜೀವನಗೊಳಿಸಲಾಗುತ್ತಿದೆ. ಅಲ್ಲದೇ ಹೊಸ ಪ್ರತಿಭೆಗಳನ್ನು ನೇಮಿಸಿಕೊಳ್ಳಲು ಟಾಟಾ ಗ್ರುಪ್‌ ಮೆಟ್ರೋ ನಗರಗಳಲ್ಲಿನೇಮಕಾತಿ ಪ್ರಕ್ರಿಯೆಯನ್ನು ನಡೆಸುತ್ತಿದೆ. ತನ್ನ ಹಾರಾಟ ಸಾಮರ್ಥ್ಯವನ್ನು ನವೀಕರಿಸಲು ಏರ್‌ಬಸ್ A350 ಜೆಟ್‌ಗಳು ಮತ್ತುಬೋಯಿಂಗ್‌ನ ಕಿರಿದಾದ ದೇಹದ ವಿಮಾನಗಳನ್ನು ಖರೀದಿಸಲು ಕಂಪನಿ ಯೋಚಿಸುತ್ತಿದೆ ಎನ್ನಲಾಗಿದೆ.

ಏರ್ ಇಂಡಿಯಾವು ಕಾಲ್ ಸೆಂಟರ್‌ಗಳು, ವೆಬ್‌ಸೈಟ್ ಮತ್ತು ಗ್ರಾಹಕರ ಅನುಭವವನ್ನು ನಿರ್ವಹಿಸಲು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್(ಟಿಸಿಎಸ್) ಮತ್ತು ಟಾಟಾ ಡಿಜಿಟಲ್ ಸೇರಿದಂತೆ ಟಾಟಾ ಗ್ರೂಪ್ ಕಂಪನಿಗಳಿಂದ ಜನರನ್ನು ನೇಮಿಸಿಕೊಳ್ಳುತ್ತಿದೆ. ಇದುಕಾರ್ಯಗತಗೊಳಿಸುವಿಕೆ ಮತ್ತು ಗ್ರಾಹಕ ಸೇವೆಯನ್ನು ಸುಧಾರಿಸುವ ಕೆಲಸ ಮಾಡುತ್ತಿದೆ ಎಂದು ವರದಿಗಳು ಹೇಳಿವೆ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »