TOP STORIES:

ಏಷ್ಯಾದ ನಂಬರ್ 1 ಮ್ಯಾರಥನ್ ನಲ್ಲಿ ಮಿಂಚಿದ ಓಟಗಾರ ಹರೀಶ ಕರ್ಕೇರ


ಏಷ್ಯಾದ ನಂಬರ್ 1 ಮ್ಯಾರಥನ್ ನಲ್ಲಿ ಮಿಂಚಿದ ಓಟಗಾರ ಹರೀಶ ಕರ್ಕೇರಡ

ಸಾಧನೆ ಎಂಬ ಶಿಖರವನ್ನು ಒಂದು ಎರಡು ದಿನಗಳಲ್ಲಿ ಏರಲು ಸಾಧ್ಯವಿಲ್ಲ.ಒಂದು ವೇಳೆ ಅಲ್ಪ ಸಮಯದಲ್ಲಿ ಸಾಧನೆ ನಡೆದರೆ ಆ ಸಾಧನೆ ಶಾಶ್ವತವಾಗಿ ಉಳಿಯಲು ಸಾಧ್ಯವಿಲ್ಲ.ಸಾಧನೆಯ ಹಾದಿ ಯಾವಾಗಲೂ ಕಠಿಣವಾಗಿರಬೇಕು, ಅತೀವವಾದ ಶ್ರಮವಿರಬೇಕು,ಹಲವಾರು ದಿನಗಳ ಪರಿಶ್ರಮ ಎದ್ದು ಕಾಣಬೇಕು.ಆಗ ನಿಜವಾದ ಸಾಧನೆಗೆ ಬೆಲೆ ಸಿಗೊದು ಆದಕ್ಕಾಗಿಯೇ ಹಿರಿಯರು ಹೇಳಿರೋದು ಸಾಧನೆ ಎಂಬುದು ಸಾಧಕನ ಸೊತ್ತೆ ಹೊರತು ಸೋಮಾರಿಯ ಸ್ವತ್ತಲ್ಲ.ಇದೇ ರೀತಿಯ ಸಾಧನೆಯ ಹಾದಿಯಲ್ಲಿ ನಡೆಯುತ್ತಿರುವವರು ಮ್ಯಾರಥನ್ ಓಟಗಾರ ಹರೀಶ ಕರ್ಕೇರ.

ಇವರ ಜೀವನದ ಪುಟಗಳನ್ನು ಒಮ್ಮೆ ತಿರುವಿ ನೋಡಿದಾಗ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕೊಣಾಜೆ ಗ್ರಾಮದ ಮಚ್ಚಿರೋಡಿ ನಿವಾಸಿ ದೇವಪ್ಪ ಪೂಜಾರಿ ಮತ್ತು ಮೋಹಿನಿ ದಂಪತಿಯ ಮುದ್ದಿನ ಮಗನಾಗಿ ಜನಿಸಿ ತಂದೆ ತಾಯಿಯ ಪ್ರೋತ್ಸಾಹದ ಜೊತೆ ಸಾಧನೆಯ ಹಾದಿ ಹಿಡಿದು ನಡೆದವರು.ಪ್ರಸ್ತುತ ಬೆಂಗಳೂರಿನ ಟೈಟಾನ್ ಕಂಪೆನಿಯಲ್ಲಿ ಉದ್ಯೋಗಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸಾಧನೆಯಲ್ಲಿ ಯಶಸ್ಸು ಕಾಣಲು ಇಂತಹದೇ ನಿರ್ದಿಷ್ಟ ಕ್ಷೇತ್ರ ಬೇಕೆಂಬ ಅಗತ್ಯವಿಲ್ಲ.ತಾನು ಆಯ್ಕೆ ಮಾಡಿಕೊಂಡ ಕ್ಷೇತ್ರದಲ್ಲಿ ಅಪಾರವಾದ ಆಸಕ್ತಿ ಮತ್ತು ಪ್ರೀತಿ ಇರಬೇಕು.ಆಗ ಸಾಧನೆಯ ಹಾದಿ ಸುಲಭವಾಗಿ ಕಾಣುತ್ತದೆ ಅದೇ ರೀತಿ ಅವಕಾಶಗಳು ಹುಡುಕಿಕೊಂಡು ಬರುತ್ತವೆ.ಇದೇ ರೀತಿಯ ಸಾಧನೆಯ ಹಾದಿ ಹಿಡಿದ ಹರೀಶ್ ಕರ್ಕೇರ ಅವರು ಆರಿಸಿದ್ದು ಕ್ರೀಡಾ ಕ್ಷೇತ್ರ.ಇವರ ಸಾಧನೆಯನ್ನು ಗಮನಿಸುತ್ತ ಹೋದಂತೆ ಇವರು ಟಾಟಾ ಮುಂಬೈ ನಡೆಸಿಕೊಡುವ ಏಷ್ಯಾದ_ನಂ.1 ಮ್ಯಾರಥನ್ ನಲ್ಲಿ ಭಾಗವಹಿಸಿ 42 ಕಿಲೋಮೀಟರ್ ದೂರವನ್ನು 4 ಗಂಟೆ 16 ನಿಮಿಷಗಳಲ್ಲಿ ಕ್ರಮಿಸಿ ದಾಖಲೆ ನಿರ್ಮಿಸಿದವರು,ಕಳೆದ ಬಾರಿ 42 ಕಿಲೋಮೀಟರ್ ದೂರವನ್ನು 4 ಗಂಟೆ 27 ನಿಮಿಷಗಳಲ್ಲಿ ಕ್ರಮಿಸಿ ದಾಖಲೆ ಮಾಡಿದ್ದರು,ಹಾಗೆಯೇ ಬೆಂಗಳೂರು ಮ್ಯಾರಥಾನ್ ನಲ್ಲಿ 21 ಕಿಲೋಮಿಟರ್ ಗಳನ್ನು 2 ಗಂಟೆ 01 ನಿಮಿಷಗಳಲ್ಲಿ,ಟಿ.ಸಿ.ಎಸ್ ಬೆಂಗಳೂರು ನಡೆಸಿಕೊಡುವ 10 ಕಿಲೋಮಿಟರ್ ಅನ್ನು 58 ನಿಮಿಷಗಳಲ್ಲಿ,ಎಸ್.ಬಿ.ಐ ಗ್ರೀನ್ ಮ್ಯಾರಥಾನ್ ಬೆಂಗಳೂರು ಇಲ್ಲಿ 2 ಗಂಟೆಯಲ್ಲಿ ಕ್ರಮಿಸಿದವರು ಹೀಗೆ ಮ್ಯಾರಥಾನ್ ನಲ್ಲಿ ಹತ್ತು ಹಲವಾರು ದಾಖಲೆ ನಿರ್ಮಿಸಿದ ಕೀರ್ತಿ ಇವರದ್ದು ಇವರ ಈ ಸಾಧನೆಯ ಹಿಂದೆ ಕಂಪೆನಿಯ M.D ಗಳಾದ ಭಾಸ್ಕರ್ ಭಟ್ ಹಾಗೂ ವೆಂಕಟರಮಣ್ ಅವರ ಸಹಕಾರ ತುಂಬಾ ಇದೆ ಎಂದು ನೆನಪಿಸಿಕೊಳ್ಳುತ್ತಾರೆ.ಇನ್ನು ಈ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಿ ದೇಶಕ್ಕೆ ಹೆಸರು ತಂದುಕೊಡಬೇಕು ಎಂಬ ಇವರ ಕನಸು ನನಸಾಗಲಿ ಇವರ ಈ ಸಾಧನೆಗೆ

ನಮ್ಮ
ಬಿಲ್ಲವ ವಾರಿಯಾರ್ಸ್ ಪೇಜ್
ವತಿಯಿಂದ ಶುಭ ಹಾರೈಕೆಗಳು…

 

✍️ ಸುಶಾಂತ್ ಪೂಜಾರಿ ಕನ್ನಡಿಕಟ್ಟೆ


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »