TOP STORIES:

ಏಷ್ಯಾದ ನಂಬರ್ 1 ಮ್ಯಾರಥನ್ ನಲ್ಲಿ ಮಿಂಚಿದ ಓಟಗಾರ ಹರೀಶ ಕರ್ಕೇರ


ಏಷ್ಯಾದ ನಂಬರ್ 1 ಮ್ಯಾರಥನ್ ನಲ್ಲಿ ಮಿಂಚಿದ ಓಟಗಾರ ಹರೀಶ ಕರ್ಕೇರಡ

ಸಾಧನೆ ಎಂಬ ಶಿಖರವನ್ನು ಒಂದು ಎರಡು ದಿನಗಳಲ್ಲಿ ಏರಲು ಸಾಧ್ಯವಿಲ್ಲ.ಒಂದು ವೇಳೆ ಅಲ್ಪ ಸಮಯದಲ್ಲಿ ಸಾಧನೆ ನಡೆದರೆ ಆ ಸಾಧನೆ ಶಾಶ್ವತವಾಗಿ ಉಳಿಯಲು ಸಾಧ್ಯವಿಲ್ಲ.ಸಾಧನೆಯ ಹಾದಿ ಯಾವಾಗಲೂ ಕಠಿಣವಾಗಿರಬೇಕು, ಅತೀವವಾದ ಶ್ರಮವಿರಬೇಕು,ಹಲವಾರು ದಿನಗಳ ಪರಿಶ್ರಮ ಎದ್ದು ಕಾಣಬೇಕು.ಆಗ ನಿಜವಾದ ಸಾಧನೆಗೆ ಬೆಲೆ ಸಿಗೊದು ಆದಕ್ಕಾಗಿಯೇ ಹಿರಿಯರು ಹೇಳಿರೋದು ಸಾಧನೆ ಎಂಬುದು ಸಾಧಕನ ಸೊತ್ತೆ ಹೊರತು ಸೋಮಾರಿಯ ಸ್ವತ್ತಲ್ಲ.ಇದೇ ರೀತಿಯ ಸಾಧನೆಯ ಹಾದಿಯಲ್ಲಿ ನಡೆಯುತ್ತಿರುವವರು ಮ್ಯಾರಥನ್ ಓಟಗಾರ ಹರೀಶ ಕರ್ಕೇರ.

ಇವರ ಜೀವನದ ಪುಟಗಳನ್ನು ಒಮ್ಮೆ ತಿರುವಿ ನೋಡಿದಾಗ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕೊಣಾಜೆ ಗ್ರಾಮದ ಮಚ್ಚಿರೋಡಿ ನಿವಾಸಿ ದೇವಪ್ಪ ಪೂಜಾರಿ ಮತ್ತು ಮೋಹಿನಿ ದಂಪತಿಯ ಮುದ್ದಿನ ಮಗನಾಗಿ ಜನಿಸಿ ತಂದೆ ತಾಯಿಯ ಪ್ರೋತ್ಸಾಹದ ಜೊತೆ ಸಾಧನೆಯ ಹಾದಿ ಹಿಡಿದು ನಡೆದವರು.ಪ್ರಸ್ತುತ ಬೆಂಗಳೂರಿನ ಟೈಟಾನ್ ಕಂಪೆನಿಯಲ್ಲಿ ಉದ್ಯೋಗಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸಾಧನೆಯಲ್ಲಿ ಯಶಸ್ಸು ಕಾಣಲು ಇಂತಹದೇ ನಿರ್ದಿಷ್ಟ ಕ್ಷೇತ್ರ ಬೇಕೆಂಬ ಅಗತ್ಯವಿಲ್ಲ.ತಾನು ಆಯ್ಕೆ ಮಾಡಿಕೊಂಡ ಕ್ಷೇತ್ರದಲ್ಲಿ ಅಪಾರವಾದ ಆಸಕ್ತಿ ಮತ್ತು ಪ್ರೀತಿ ಇರಬೇಕು.ಆಗ ಸಾಧನೆಯ ಹಾದಿ ಸುಲಭವಾಗಿ ಕಾಣುತ್ತದೆ ಅದೇ ರೀತಿ ಅವಕಾಶಗಳು ಹುಡುಕಿಕೊಂಡು ಬರುತ್ತವೆ.ಇದೇ ರೀತಿಯ ಸಾಧನೆಯ ಹಾದಿ ಹಿಡಿದ ಹರೀಶ್ ಕರ್ಕೇರ ಅವರು ಆರಿಸಿದ್ದು ಕ್ರೀಡಾ ಕ್ಷೇತ್ರ.ಇವರ ಸಾಧನೆಯನ್ನು ಗಮನಿಸುತ್ತ ಹೋದಂತೆ ಇವರು ಟಾಟಾ ಮುಂಬೈ ನಡೆಸಿಕೊಡುವ ಏಷ್ಯಾದ_ನಂ.1 ಮ್ಯಾರಥನ್ ನಲ್ಲಿ ಭಾಗವಹಿಸಿ 42 ಕಿಲೋಮೀಟರ್ ದೂರವನ್ನು 4 ಗಂಟೆ 16 ನಿಮಿಷಗಳಲ್ಲಿ ಕ್ರಮಿಸಿ ದಾಖಲೆ ನಿರ್ಮಿಸಿದವರು,ಕಳೆದ ಬಾರಿ 42 ಕಿಲೋಮೀಟರ್ ದೂರವನ್ನು 4 ಗಂಟೆ 27 ನಿಮಿಷಗಳಲ್ಲಿ ಕ್ರಮಿಸಿ ದಾಖಲೆ ಮಾಡಿದ್ದರು,ಹಾಗೆಯೇ ಬೆಂಗಳೂರು ಮ್ಯಾರಥಾನ್ ನಲ್ಲಿ 21 ಕಿಲೋಮಿಟರ್ ಗಳನ್ನು 2 ಗಂಟೆ 01 ನಿಮಿಷಗಳಲ್ಲಿ,ಟಿ.ಸಿ.ಎಸ್ ಬೆಂಗಳೂರು ನಡೆಸಿಕೊಡುವ 10 ಕಿಲೋಮಿಟರ್ ಅನ್ನು 58 ನಿಮಿಷಗಳಲ್ಲಿ,ಎಸ್.ಬಿ.ಐ ಗ್ರೀನ್ ಮ್ಯಾರಥಾನ್ ಬೆಂಗಳೂರು ಇಲ್ಲಿ 2 ಗಂಟೆಯಲ್ಲಿ ಕ್ರಮಿಸಿದವರು ಹೀಗೆ ಮ್ಯಾರಥಾನ್ ನಲ್ಲಿ ಹತ್ತು ಹಲವಾರು ದಾಖಲೆ ನಿರ್ಮಿಸಿದ ಕೀರ್ತಿ ಇವರದ್ದು ಇವರ ಈ ಸಾಧನೆಯ ಹಿಂದೆ ಕಂಪೆನಿಯ M.D ಗಳಾದ ಭಾಸ್ಕರ್ ಭಟ್ ಹಾಗೂ ವೆಂಕಟರಮಣ್ ಅವರ ಸಹಕಾರ ತುಂಬಾ ಇದೆ ಎಂದು ನೆನಪಿಸಿಕೊಳ್ಳುತ್ತಾರೆ.ಇನ್ನು ಈ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಿ ದೇಶಕ್ಕೆ ಹೆಸರು ತಂದುಕೊಡಬೇಕು ಎಂಬ ಇವರ ಕನಸು ನನಸಾಗಲಿ ಇವರ ಈ ಸಾಧನೆಗೆ

ನಮ್ಮ
ಬಿಲ್ಲವ ವಾರಿಯಾರ್ಸ್ ಪೇಜ್
ವತಿಯಿಂದ ಶುಭ ಹಾರೈಕೆಗಳು…

 

✍️ ಸುಶಾಂತ್ ಪೂಜಾರಿ ಕನ್ನಡಿಕಟ್ಟೆ


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »